ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗದ ಕಡೆಗೆ ದೊಡ್ಡ ಅವಕಾಶವೊಂದು ಬಂದಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (SBI RSETI), ಕೊಪ್ಪಳ ವತಿಯಿಂದ ಉಚಿತ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯವೂ ಒದಗಿಸಲಾಗುವುದು. ಅಲ್ಲದೇ, ತರಬೇತಿ ಪೂರ್ಣಗೊಳಿಸಿದವರಿಗೆ ಸ್ವಯಂ ಉದ್ಯೋಗ ಆರಂಭಿಸಲು ಬ್ಯಾಂಕ್ ಸಾಲ ಸೌಲಭ್ಯಕ್ಕೆ ಸಹಾಯ ಮಾಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಲಭ್ಯವಿರುವ ತರಬೇತಿ ಕೋರ್ಸ್ಗಳು
ಈ ಬಾರಿಯ ತರಬೇತಿ ಕಾರ್ಯಕ್ರಮದಲ್ಲಿ ಎರಡು ಮುಖ್ಯ ಕೋರ್ಸ್ಗಳಿವೆ:
- ಕೃಷಿ ಉದ್ಯಮಿ ತರಬೇತಿ (ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ) – 13 ದಿನಗಳ ಅವಧಿ
- ಮೊಬೈಲ್ ರಿಪೇರಿ ಮತ್ತು ಸರ್ವಿಸಿಂಗ್ ಕೋರ್ಸ್ – 30 ದಿನಗಳ ಅವಧಿ
ಸಂದರ್ಶನವು ನವೆಂಬರ್ 26, 2025 ರಂದು ನಡೆಯಲಿದ್ದು, ಆಯ್ಕೆಯಾದವರಿಗೆ ತರಬೇತಿ ನವೆಂಬರ್ 27, 2025 ರಿಂದ ಪ್ರಾರಂಭವಾಗಲಿದೆ.
ಅರ್ಹತೆ ಮತ್ತು ಷರತ್ತುಗಳು
ಈ ತರಬೇತಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು:
- ವಯಸ್ಸು: 18 ರಿಂದ 45 ವರ್ಷದೊಳಗೆ
- ಶೈಕ್ಷಣಿಕ ಅರ್ಹತೆ: ಕನಿಷ್ಠ 8ನೇ ತರಗತಿ ತೇರ್ಗಡೆ
- ನಿವಾಸ: ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ನಿವಾಸಿ
- ಸ್ವಯಂ ಉದ್ಯೋಗದಲ್ಲಿ ಗಟ್ಟಿ ಆಸಕ್ತಿ ಹೊಂದಿರಬೇಕು
ಅಗತ್ಯ ದಾಖಲೆಗಳು
ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು:
- ಆಧಾರ್ ಕಾರ್ಡ್
- ರೇಶನ್ ಕಾರ್ಡ್
- ಪಾನ್ ಕಾರ್ಡ್
- ಎಸ್ಬಿಐ ಬ್ಯಾಂಕ್ ಪಾಸ್ಬುಕ್
- ಶೈಕ್ಷಣಿಕ ಪ್ರಮಾಣಪತ್ರಗಳು
- 3 ಪಾಸ್ಪೋರ್ಟ್ ಸೈಜ್ ಭಾವಚಿತ್ರಗಳು
ಅರ್ಜಿಯನ್ನು ನೇರವಾಗಿ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಳಾಸ:
ನಿರ್ದೇಶಕರು,
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (SBI RSETI),
ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ.
ಸಂಪರ್ಕ ಮಾಹಿತಿ
ಹೆಚ್ಚಿನ ಮಾಹಿತಿ ಅಥವಾ ಸಂದೇಹ ನಿವಾರಣೆಗಾಗಿ ಈ ಕೆಳಗಿನ ಸಂಖ್ಯೆಗಳಿಗೆ ಸಂಪರ್ಕಿಸಿ:
- ದೂರವಾಣಿ: 08539-231038
- ಮೊಬೈಲ್: 9483618178, 7259073827, 9538096796, 9481085217
ಆಸಕ್ತ ಗ್ರಾಮೀಣ ಯುವಕರು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಂಡು ಸ್ವಯಂ ಉದ್ಯೋಗಿಗಳಾಗಿ ಮಾಡಿಕೊಳ್ಳಲು ಮುಂದಾಗಬೇಕು ಎಂದು ಸಂಸ್ಥೆಯ ನಿರ್ದೇಶಕರು ಕರೆ ನೀಡಿದ್ದಾರೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Sagari leads the ‘Government Schemes’ vertical at NeedsOfPublic.in, where she decodes the latest Central and State government policies for the common citizen. She has over 3 years of experience tracking welfare programs like PM Kisan, Ayushman Bharat, and State Ration updates. Her goal is to ensure every reader understands their eligibility and benefits without confusion. Sagari strictly verifies all updates from official government portals before publishing. Outside of work, she is an advocate for digital literacy in rural India.”
Connect with Sagari:


WhatsApp Group




