ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಸಾರ್ವತ್ರಿಕ ವರ್ಗಾವಣೆಗೆ ಹಸಿರು ನಿಶಾನೆ ತೋರಿಸಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ಮೇ 15 ರಿಂದ ಜೂನ್ 14 ರವರೆಗೆ ವರ್ಗಾವಣೆ ಪ್ರಕ್ರಿಯೆಗೆ ಅನುಮತಿ ನೀಡುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಸ್ತಾವನೆ ಸಿದ್ಧಪಡಿಸಿದೆ. ಈ ಪ್ರಸ್ತಾವನೆಯನ್ನು ಸಚಿವ ಸಂಪುಟದ ಅನುಮೋದನೆಗಾಗಿ ಮಂಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಬಹುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ವರ್ಗಾವಣೆಗೆ ಅರ್ಹತೆ ಮತ್ತು ನಿಯಮಗಳು
ಸರ್ಕಾರಿ ನೌಕರರ ವರ್ಗಾವಣೆಗೆ ಕೆಲವು ಮಾನದಂಡಗಳನ್ನು ನಿಗದಿ ಪಡಿಸಲಾಗಿದೆ:
- ಗ್ರೂಪ್ A ಮತ್ತು B ಅಧಿಕಾರಿಗಳು ಒಂದೇ ಸ್ಥಳದಲ್ಲಿ 2 ವರ್ಷಗಳು ಪೂರೈಸಿದ್ದರೆ ವರ್ಗಾವಣೆಗೆ ಅರ್ಹರು.
- ಗ್ರೂಪ್ C ನೌಕರರು 4 ವರ್ಷಗಳ ಕನಿಷ್ಠ ಸೇವೆ ಪೂರೈಸಿದರೆ ವರ್ಗಾವಣೆಗೆ ಅರ್ಹತೆ ಪಡೆಯುತ್ತಾರೆ.
- ಗ್ರೂಪ್ D ನೌಕರರಿಗೆ 7 ವರ್ಷಗಳ ಸೇವಾ ಅವಧಿ ಪೂರ್ಣಗೊಂಡರೆ ವರ್ಗಾವಣೆ ಸಾಧ್ಯ.
ವರ್ಗಾವಣೆ ಪ್ರಕ್ರಿಯೆ ಹೇಗಿರುತ್ತದೆ?
- ಗ್ರೂಪ್ A ಮತ್ತು B ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ನಿರ್ಧಾರಗಳನ್ನು ಆಯಾ ಇಲಾಖೆಯ ಸಚಿವರು ತೆಗೆದುಕೊಳ್ಳಬಹುದು.
- ಗ್ರೂಪ್ C ಮತ್ತು D ನೌಕರರ ವರ್ಗಾವಣೆಗೆ ನೇಮಕಾತಿ ಪ್ರಾಧಿಕಾರಗಳು ಅನುಮೋದನೆ ನೀಡಬೇಕು.
- ಒಟ್ಟಾರೆ, 6% ಕಾರ್ಯನಿರತ ಸಿಬ್ಬಂದಿಗೆ ಮಾತ್ರ ವರ್ಗಾವಣೆ ಅನುಮತಿ ಇದೆ.
ಈ ನಿರ್ಣಯವು ದೀರ್ಘಕಾಲದಿಂದ ವರ್ಗಾವಣೆಗಾಗಿ ಕಾಯುತ್ತಿರುವ ಸರ್ಕಾರಿ ನೌಕರರಿಗೆ ದೊಡ್ಡ ಉಪಶಮನವಾಗಲಿದೆ. ಹೆಚ್ಚಿನ ಅಪ್ಡೇಟ್ಗಳಿಗಾಗಿ ಸರ್ಕಾರಿ ನೋಟಿಫಿಕೇಷನ್ಗಳನ್ನು ಗಮನಿಸಿ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ. ಪತ್ರಿಕೋದ್ಯಮದಲ್ಲಿ 6 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ವಿಶ್ಲೇಷಿಸಿ, ಜನಸಾಮಾನ್ಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಅದರ ಪ್ರಯೋಜನಗಳನ್ನು ಸುಲಭವಾಗಿ ಅರ್ಥೈಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು, ಪರೀಕ್ಷಾ ಫಲಿತಾಂಶಗಳು ಮತ್ತು ವಿಶ್ವಾಸಾರ್ಹ ದೈನಂದಿನ ಹವಾಮಾನ ವರದಿಯನ್ನು ಒದಗಿಸುತ್ತಾರೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಇವರ ಮುಖ್ಯ ಗುರಿಯಾಗಿದೆ.”


WhatsApp Group




