ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್(free laptops) ನೀಡುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉಚಿತವಾಗಿ ಲ್ಯಾಪ್ಟಾಪನ್ನು ವಿಶ್ವವಿದ್ಯಾಲಯದ ಅಂದರೆ ಸ್ನಾತಕೋತ್ತರ ಪದವಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದರ ಬಗ್ಗೆ ಟ್ವೀಟ್ ಮಾಡಿದ್ದಾರೆ. ಯಾವ ಯಾವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಸಿಗಲಿದೆ?, ಸಿದ್ದರಾಮಯ್ಯನವರು ಮಾಡಿರುವ ಟ್ವೀಟ್ ಏನು?, ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಘೋಷಣೆ:
ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ಅನ್ನು ಇಂದು ಅಂದರೆ ಆಗಸ್ಟ್ 21ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವೀಟ್ ಮುಖಾಂತರ ತಿಳಿಸಿದ್ದಾರೆ. ಮುಖ್ಯಮಂತ್ರಿ ಅವರು ಎರಡು ಸರಣಿ ಟ್ವೀಟ್ ಗಳನ್ನು ಮಾಡಿ ಉಚಿತ ಲ್ಯಾಪ್ಟಾಪ್ ವಿತರಣೆಯ ಬಗ್ಗೆ ಘೋಷಣೆಯನ್ನು ಮಾಡಿದ್ದಾರೆ. ಕರ್ನಾಟಕದ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ತಮ್ಮ ಓದಿಗೆ ಸಹಾಯವಾಗಲೆಂದು ಹಾಗೂ ಉನ್ನತ ಶಿಕ್ಷಣಕ್ಕಾಗಿ ಆಸರೆಯಾಗಲೆಂದು ಈ ಉಚಿತ ಲ್ಯಾಪ್ಟಾಪ್ ವಿತರಣೆಯ ಘೋಷಣೆಯನ್ನು ಮಾಡಲಾಗುತ್ತದೆ.
ಯಾವೆಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ದೊರೆಯಲಿದೆ?:
ಸರಣಿ ಟ್ವೀಟ್ ಗಳಲ್ಲಿ ಸಿದ್ದರಾಮಯ್ಯನವರು ಘೋಷಿಸಿದ ವಿವರ ಕೆಳಗಿನಂತಿದೆ :
ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅನ್ನು ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಯೋಜನೆಯಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ.
ವಿ.ವಿ ಗಳಲ್ಲಿರುವ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗೂ ಲ್ಯಾಪ್ ಟಾಪ್ ವಿತರಿಸಬೇಕಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿಯು ಕೈಗಾರಿಕೋದ್ಯಮಿಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ, ಎಂಜಿನಿಯರಿಂಗ್ ಪದವೀಧರರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಇಂದಿನ ಸಭೆಯಲ್ಲಿ ಸೂಚನೆ ನೀಡಲಾಗಿದೆ.
ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಸಿಗಲಿದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ, ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group






