ರಾಜ್ಯದ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯಗಳ ಸರಳ ಮತ್ತು ಸಾಮೂಹಿಕ ವಿವಾಹಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ, ಸರ್ಕಾರವು ಪ್ರತಿ ಜೋಡಿಗೆ ₹50,000 ನೆರವು ನೀಡುವ ಯೋಜನೆಗೆ ಅನುಮೋದನೆ ನೀಡಿದೆ. ಈ ಕಾರ್ಯಕ್ರಮವನ್ನು ಸ್ವಯಂಸೇವಾ ಸಂಸ್ಥೆಗಳ ಮೂಲಕ ಕಾರ್ಯಗತಗೊಳಿಸಲಾಗುವುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯ ಸರ್ಕಾರವು ಇತ್ತೀಚೆಗೆ ಹೊರಡಿಸಿದ ಆದೇಶದ ಪ್ರಕಾರ, ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿ ಜೋಡಿಗೆ ₹50,000 ಮತ್ತು ಆಯೋಜನೆ ಮಾಡುವ ಸಂಸ್ಥೆಯ ಪ್ರತಿ ಜೋಡಿಗೆ ₹5,000 ನೆರವು ನೀಡಲಾಗುವುದು. ಈ ಯೋಜನೆಯಡಿಯಲ್ಲಿ ಗರಿಷ್ಠ 5,000 ಜೋಡಿಗಳವರೆಗೆ ಸಾಮೂಹಿಕ ವಿವಾಹಗಳನ್ನು ಏರ್ಪಡಿಸಲು ಅವಕಾಶವಿದೆ. ಈ ನಿರ್ಧಾರವು ಹಿಂದಿನ ಬಜೆಟ್ ಘೋಷಣೆಗೆ ಅನುಗುಣವಾಗಿ ಕಾರ್ಯರೂಪಕ್ಕೆ ಬಂದಿದೆ.
ಮೌಲಾನಾ ಆಜಾದ್ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರದ ನಿರ್ಣಯ
ಇದೇ ಸಂದರ್ಭದಲ್ಲಿ, ರಾಜ್ಯದ 250 ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆಗಳನ್ನು ಹಂತಹಂತವಾಗಿ ಸರ್ಕಾರಿ ಶಾಲೆಗಳ ಮಾದರಿಯಲ್ಲಿ ಅಪ್ಗ್ರೇಡ್ ಮಾಡುವ ನಿರ್ಣಯವನ್ನು ಸರ್ಕಾರವು ತೆಗೆದುಕೊಂಡಿದೆ. ಈ ಶಾಲೆಗಳಲ್ಲಿ ಪೂರ್ವ-ಪ್ರಾಥಮಿಕದಿಂದ ಪಿಯು (ಪ್ರಿ-ಯೂನಿವರ್ಸಿಟಿ) ತರಗತಿಗಳವರೆಗೆ ಶಿಕ್ಷಣವನ್ನು ಪರಿಚಯಿಸಲಾಗುವುದು.
ಪ್ರಸ್ತುತ ವರ್ಷದಲ್ಲಿ 100 ಆಜಾದ್ ಶಾಲೆಗಳನ್ನು ಕರ್ನಾಟಕ ಸರ್ಕಾರಿ ಶಾಲೆಗಳ ಮಟ್ಟಕ್ಕೆ ಏರಿಸುವ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಈ ಮೂಲಕ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಸಹಾಯವಾಗಲಿದೆ.
ಈ ಎರಡೂ ಯೋಜನೆಗಳು ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಮತ್ತು ಶಿಕ್ಷಣದ ಪ್ರಗತಿಗೆ ನೆರವಾಗುವುದಾಗಿ ಸರ್ಕಾರ ನಂಬಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.