ಗ್ರಾಮಓನ್ ಕೇಂದ್ರ ಓಪನ್ ಮಾಡಲು ಅರ್ಜಿ ಆಹ್ವಾನ: ಕೈ ತುಂಬಾ ಹಣ ಸಂಪಾದಿಸಲು ಸುವರ್ಣ ಅವಕಾಶ

ಎಲ್ಲರಿಗೂ ನಮಸ್ಕಾರ. ಗ್ರಾಮಒನ್ ನಾಗರಿಕ ಸೇವಾ ಕೇಂದ್ರವನ್ನು ಸ್ಥಾಪನೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹನ್ನೆರಡು ಜಿಲ್ಲೆಗಳಿಗೆ ಗ್ರಾಮಒನ್ ಸೇವಾ ಕೇಂದ್ರವನ್ನು ಸ್ಥಾಪನೆ ಮಾಡಲು ಅರ್ಜಿಯನ್ನು ಕರೆಯಲಾಗಿದೆ. ಈ ಲೇಖನದ ಮೂಲಕ ನಿಮಗೆ ಅರ್ಜಿಯನ್ನು ಸಲ್ಲಿಸುವ ವಿಧಾನ ಏನು?, ಯಾವ 12 ಜಿಲ್ಲೆಗಳಲ್ಲಿ ಈ ಅರ್ಜಿಗಳಿಗೆ ಆಹ್ವಾನಿಸಲಾಗಿದೆ?, ಇದಕ್ಕೆ ಯಾವ ಶರತ್ತುಗಳು ಅನ್ವಯವಾಗುತ್ತದೆ?, ಮತ್ತು ಅರ್ಜಿಯನ್ನು ಸಲ್ಲಿಸುವ ಶುಲ್ಕ ಎಷ್ಟು?, ಗ್ರಾಮಒನ್ ಸೇವಾ ಕೇಂದ್ರವನ್ನು ಸ್ಥಾಪನೆ ಮಾಡಿದ ನಂತರ ಯಾವ ಯಾವ ಸೌಲಭ್ಯಗಳು ಲಭ್ಯವಿರುತ್ತದೆ? ಮತ್ತು ಅದರ ಶುಲ್ಕ ಎಷ್ಟಿರುತ್ತದೆ ಎಂಬುದರ ಸಂಪೂರ್ಣ ವಿವರವನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಗ್ರಾಮಒನ್ :

G2C ಸೇವೆಗಳು, ಬ್ಯಾಂಕಿಂಗ್ ಸೇವೆಗಳು, RTI ಪ್ರಶ್ನೆಗಳು ಇತ್ಯಾದಿಗಳನ್ನು ಒಳಗೊಂಡಿರುವ ಗ್ರಾಮ ಮಟ್ಟದಲ್ಲಿ ಎಲ್ಲಾ ನಾಗರಿಕ ಕೇಂದ್ರಿತ ಚಟುವಟಿಕೆಗಳಿಗೆ ಗ್ರಾಮಒನ್ ಏಕ-ಬಿಂದು ಸಹಾಯ ಕೇಂದ್ರವಾಗಿದೆ. ಇದನ್ನು FY20-21 ರ ಬಜೆಟ್‌ನಲ್ಲಿ ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ವಾರದ ಎಲ್ಲಾ ಏಳು ದಿನಗಳಲ್ಲಿ ಗ್ರಾಮಒನ್ ಕೇಂದ್ರಗಳು ಬೆಳಗ್ಗೆ 8 ರಿಂದ ಸಂಜೆ 8 ರವರೆಗೆ ಕಾರ್ಯನಿರ್ವಹಿಸಲಿವೆ. ಗ್ರಾಮಒನ್ ಎಂಬುದನ್ನು ಗ್ರಾಮೀಣ ಮಟ್ಟದಲ್ಲಿ ಎಲ್ಲಾ ನಾಗರೀಕ ಕೇಂದ್ರೀಕೃತ ಏಕ ಸಹಾಯಕ ಕೇಂದ್ರ ವ್ಯವಸ್ಥೆ ಎಂಬುದಾಗಿ ಹೇಳಬಹುದು.

ಇದನ್ನು ಜನವರಿ 17ರಂದು ಕರ್ನಾಟಕದ ಮುಖ್ಯಮಂತ್ರಿ ಅವರು ಪ್ರಾರಂಭಿಸಿದರು. ಒಂದೇ ಸ್ಥಳದಲ್ಲಿ ವಿವಿಧ ಸಚಿವಾಲಯಗಳಿಂದ ಸೇವೆಗಳನ್ನು ತಲುಪಿಸುವ ಮುಖ್ಯ ಉದ್ದೇಶವನ್ನು ಈ ಸೇವಾ ಕೇಂದ್ರ ಹೊಂದಿದೆ. ಕಾರ್ಯಕ್ರಮವನ್ನು ಪ್ರಾರಂಭಿಸಲು ಪ್ರಾಥಮಿಕ ಉದ್ದೇಶವೆಂದರೆ, ಕರ್ನಾಟಕ ರಾಜ್ಯದ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ಬ್ಯಾಂಕಿಂಗ್, ಆರ್‌ಟಿಐ ಮತ್ತು ಇತರೆ ಸೇರಿದಂತೆ ವಿವಿಧ ಅಗತ್ಯ ಸೇವೆಗಳೊಂದಿಗೆ ಸಹಾಯವನ್ನು ಒದಗಿಸುವುದು.

ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಇದನ್ನೂ ಓದಿ :2022-23 ನೇ ಸಾಲಿನ ಹಾಸ್ಟೆಲ್ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : ಈಗಲೇ ಅರ್ಜಿ ಸಲ್ಲಿಸಿ

ಗ್ರಾಮಒನ್ ಸೇವಾ ಕೇಂದ್ರದ ಉಪಯೋಗಗಳು :

  1. ನಾಗರಿಕರು ಸರ್ಕಾರಿ ಸೇವೆಗಳನ್ನು ಪಡೆಯಲು ಜಿಲ್ಲೆ, ತಾಲ್ಲೂಕು ಮತ್ತು ಹೊಬ್ಲಿ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ.
  2. ಗ್ರಾಮಒನ್ ಕೇಂದ್ರಗಳು ಬೆಳಿಗ್ಗೆ 8.00 ಗಂಟೆಯಿಂದ ರಾತ್ರಿ 8.00 ಗಂಟೆವರೆಗೆ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ ನಾಗರೀಕರು, ಸೇವೆಗಳನ್ನು ಅವರಿಗೆ ಅನುಕೂಲವಾಗುವ ಸಮಯದಲ್ಲಿ ಪಡೆಯಬಹುದಾಗಿದೆ
  3.  ಗ್ರಾಮಒನ್’ ಕೇಂದ್ರಗಳ ಮೂಲಕ ಸೇವೆಗಳನ್ನು ಪಡೆಯುವ ಮೂಲಕ ನಾಗರೀಕರು ಸಮಯ ಮತ್ತು ಹಣವನ್ನು ಉಳಿಸಬಹುದಾಗಿದೆ.
  4. ಮಧ್ಯವರ್ತಿಗಳ ಹಾವಳಿ-ಭೀತಿ ಇರುವುದಿಲ್ಲ.

telee

ಕೇಂದ್ರವನ್ನು ಸ್ಥಾಪಿಸಲು ಬೇಕಾಗುವ ಮಾಹಿತಿ ತಂತ್ರಜ್ಞಾನ ಮೂಲ ಸೌಕರ್ಯಗಳು:

  1.  ಡೆಸ್ಕ್‍ಟಾಪ್ / ಲ್ಯಾಪ್‍ಟಾಪ್ (ಐ3 ಸಂರಚನೆಗಿಂತ ಹೆಚ್ಚಿನವುಗಳದ್ದು)
  2. ವಿವಿಧ ಕಾರ್ಯಕಾರಿ ಪ್ರಿಂಟರ್ (ಪ್ರೀಂಟ್/ಸ್ಕ್ಯಾನ್)
  3.  ಬಯೋಮೆಟ್ರಿಕ್ ಸ್ಕ್ಯಾನರ್ (ಸೆಕ್ಯೂಜೆನ್ ಹ್ಯಾಮಸ್ಟರ್ ಪ್ರೋ20)
  4. ಎರಡು ಅಂತರ್ಜಾಲ ಸೇವೆ (2ಇಂಟರ್ನೆಟ್ ಕನೆಕ್ಷನ್) ಇಬ್ಬರು ಅಂತರ್ಜಾಲ ಸೇವೆ ಒದಗಿಸುವವರಿಂದ ಅಂತರ್ಜಾಲ ಸಂಪರ್ಕ ಹೊಂದಿರಬೇಕು (ಐಎಸ್‍ಪಿಎಸ್) ಕಾರಣ ಅಂತರ್ಜಾಲ ಸಂಪರ್ಕ ವ್ಯವಸ್ಥೆಯ ವೃತಿರಕ್ತತೆಯಿಂದ ಸೇವೆಗಳಿಗೆ ಅಡ್ಡಿ ಉಂಟಾಗಬಹುದು ಎಂಬ ಕಾರಣಕ್ಕಾಗಿ ಆ ವ್ಯವಸ್ಥೆ ಇರಬೇಕು.
  5.  ವೆಬ್ ಕ್ಯಾಮರಾ
  6.  ವೈ-ಪೈ ರಿಸೀವರ್
ಇದನ್ನೂ ಓದಿ : 236 ಕಿಲೋಮೀಟರ್ ಮೈಲೇಜ್ ಕೊಡುವ ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ : ಸರ್ಕಾರದಿಂದ 60,000/- ಬೃಹತ್ ಸಬ್ಸಿಡಿ
ಮಾಹಿತಿ ತಂತ್ರಜ್ಞಾನ ರಹಿತ ಮೂಲ ಸೌಕರ್ಯದ ಅವಶ್ಯಕತೆಗಳು
  1.  ಗ್ರಾಮ ಒನ್ ಕೇಂದ್ರವು ಒಂದು ವಿಶೇಷ (ಪ್ರತ್ಯೇಕ) ಪ್ರವೇಶವುಳ್ಳ ವಿಶೇಷ ವಿಭಜನೆ (ಪಾರ್ಟಿಷನ್) ಹೊಂದಿರಬೇಕು.
  2. ಒಂದು ಕೌಂಟರ್‍ವುಳ್ಳ ಗ್ರಾಮಒನ್ ಕೇಂದ್ರಗಳು ಕನಿಷ್ಟ 100 ಚ.ಅಡಿಗಳ ಅಳತೆ ಹೊಂದಿರಬೇಕು. ಗ್ರಾಹಕರು ಕುಳಿತುಕೊಳ್ಳಲು ನಾಲ್ಕು ಕುರ್ಚಿಗಳು ಇರಬೇಕು.
  3. ಬ್ರಾಂಡಿಂಗ್ (ಮುದ್ರೆಗಳು)ಗಳು ಗ್ರಾಮಒನ್ ಯೋಜನೆಯ ಬ್ರಾಂಡಿಂಗ್ ಗುಣಮಟ್ಟದ ರೀತಿಯಲ್ಲಿರಬೇಕು (ಹೆಸರಿನ ಫಲಕ/ದರಪಟ್ಟಿ/ ಕಟ್ಟಡದ ಬಣ್ಣ/ ಗ್ರಾಮಒನ್ ದ ಮನೋಗ್ರಾಂ).
  4. ಫ್ರಾಂಚೈಸಿಗಳು ತಮ್ಮ ಸಮುಚ್ಛಯವನ್ನು ಸ್ವಚ್ಛ ಮತ್ತು ಅಚ್ಚುಕಟ್ಟಾಗಿ ಇರಿಸಿರಬೇಕು.
  5. ಕೊಠಡಿಯ ನೆಲ ಟೈಲ್ಸ್/ಗ್ರಾನೈಟ್‍ನಿಂದ ಕೂಡಿರಬೇಕು, ಆರ್.ಸಿ.ಸಿ. ಮೇಲ್ಛಾವಣಿ ಇರಬೇಕು ಮತ್ತು ಸೀಮೆಂಟ್ ಇಟ್ಟಿಗೆ/ ಸೀಮೆಂಟ್ ಕಲ್ಲಿನಿಂದ ಗೋಡೆಗಳು ನಿರ್ಮಾನವಾಗಿರಬೇಕು. ಯಾವುದೇ ಭಾಗದಲ್ಲೂ ನೀರು ಸೋರಿಕೆ ಕಂಡುಬರಬಾರದು.
  6. ಕೊಠಡಿಯಲ್ಲಿ ಉತ್ತಮ ಗಾಳಿ ಬೆಳಕಿನ ವ್ಯವಸ್ಥೆ ಇರಬೇಕು ಹೊರಗಡೆ ವಾಹನ ನಿಲುಗಡೆಗೆ ಬೋರ್ಡ್‍ಗಳನ್ನು ಪ್ರದರ್ಶಿಸುವುದು ಇತ್ಯಾದಿಗಳಿಗಾಗಿ ಸಾಕಷ್ಟು ಸ್ಥಳಾವಕಾಶ ಇರಬೇಕು.
  7. ಪೀಠೋಪಕರಣಗಳು ಗ್ರಾಮಒನ್‍ನಲ್ಲಿ ನಿರ್ಧಿಷ್ಟಗೊಳಿಸಿರದ ರೀತಿಯಲ್ಲಿರಬೇಕು (ಕೌಂಟರ್‍ಟೇಬಲ್/ ಆಪರೇಟರ್‍ರ ಕುರ್ಚಿ/ ಪ್ರಿಂಟರ್‍ಟೇಬಲ್/ ಗ್ರಾಹಕರು ಕಾಯುವ ಕುರ್ಚಿ).
  8. ಪ್ರಾಂಚೈಸಿಗಳು ಸಿ.ಸಿ.ಟಿ.ವಿ. ಕಣ್ಗಾವಲು ಮತ್ತು ಎಲ್.ಸಿ.ಡಿ.ಟಿ.ವಿ. ಯನ್ನು ಹೊಂದಿರಬೇಕು.

Untitled 1 scaled

ಈ ಕೆಳಗಿನ 12 ಜಿಲ್ಲೆಗಳಲ್ಲಿ ಗ್ರಾಮಒನ್ ನಾಗರಿಕ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲು ಅರ್ಜಿಯನ್ನು ಅವ್ಹಾನಿಸಲಾಗಿದೆ :

  1. ಬೆಳಗಾವಿ.
  2. ಹಾವೇರಿ.
  3. ವಿಜಯಪುರ.
  4. ಬೀದರ್.
  5.  ಬಳ್ಳಾರಿ.
  6. ಕೊಪ್ಪಳ.
  7. ದಾವಣಗೆರೆ
  8. ಶಿವಮೊಗ್ಗ
  9. ತುಮಕೂರು
  10.  ಚಿಕ್ಕಮಂಗಳೂರು
  11.  ಕೊಡಗು ಮತ್ತು
  12.  ಉಡುಪಿ

ಗ್ರಾಮಒನ್ ನಾಗರಿಕ ಸೇವಾ ಕೇಂದ್ರವನ್ನು ಸ್ಥಾಪಿಸಲು ಬೇಕಾದ ಅರ್ಹತೆಗಳು:

  1. ಕಂಪ್ಯೂಟರ್ ಜ್ಞಾನ ಹೊಂದಿರುವ
  2.  ಕನಿಷ್ಠವಾಗಿ ಯಾವುದಾದರು ವಿಭಾಗದಲ್ಲಿ ಪದವಿಯನ್ನು ಹೊಂದಿರಬೇಕು.
  3.  ಸಮುಚ್ಛಯವು ಕೇಂದ್ರ ಸ್ಥಾನದಲ್ಲಿರಬೇಕು ಮತ್ತು ಸಾರ್ವಜನಿಕರು ಸುಲಭವಾಗಿ ಸಂಪರ್ಕಿಸುವಂತಿರಬೇಕು.
  4.  ರೂ. 1 ರಿಂದ 2 ಲಕ್ಷ ಬಂಡವಾಳ ಹೂಡಿಕೆ ಮಾಡುವ ಸಾಮಾಥ್ರ್ಯವಿರಬೇಕು.
  5.  ಗ್ರಾಮಒನ್ ಪೊಲೀಸ್ ತಪಾಸಣಾ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
  6. ಸಮುಚ್ಛಯವು ಕೇಂದ್ರ ಸ್ಥಾನದಲ್ಲಿರಬೇಕು ಮತ್ತು ಸಾರ್ವಜನಿಕರು ಸುಲಭವಾಗಿ ಸಂಪರ್ಕಿಸುವಂತಿರಬೇಕು (ದೊರೆಯುವಂತಿರಬೇಕು).

ಗ್ರಾಮಒನ್ ಸೇವಾ ಕೇಂದ್ರಕ್ಕೆ ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಮೊದಲಿಗೆ ಗ್ರಾಮಒನ್ ಸೇವಾ ಕೇಂದ್ರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಗ್ರಾಮಒನ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.karnatakaone.gov.in/Public/GramOneFranchiseeTermsKn

teleeಹಂತ 2: ನಂತರ ಅಲ್ಲಿ ನೀಡಿರುವ ಎಲ್ಲಾ ಅರ್ಹತಾ ಮಾನದಂಡಗಳನ್ನು ಹಾಗೂ ನಿಬಂಧನೆಗಳನ್ನು  ಓದಿಕೊಳ್ಳಬೇಕು. ನಂತರ ಚೆಕ್ ಬಾಕ್ಸ್ ಮೇಲೆ ಕ್ಲಿಕ್ ಮಾಡಿ, ನೋಂದಣೆ  ಮಾಡಿ ಎಂಬ ಆಯ್ಕೆಯನ್ನು ಒತ್ತಿರಿ.

ಹಂತ 3 : ಮುಂದಿನ ಪುಟದಲ್ಲಿ ಅರ್ಜಿಯನ್ನು ಸಲ್ಲಿಸಲು ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿಯನ್ನು ನೀಡಬೇಕು. ನಂತರ ನೊಂದಣಿ ಮಾಡಿರುವಂತಹ ಮೊಬೈಲ್ ಸಂಖ್ಯೆಗೆ ಹಾಗೂ ಇಮೇಲ್ ಐಡಿಗೆ ಓಟಿಪಿ ಬರುತ್ತದೆ. ಅದನ್ನು ಹಾಕಿ ವ್ಯಾಲಿಡೇಟ್ ಮಾಡಿಕೊಳ್ಳಬೇಕು.

ಹಂತ 4 : ನಂತರ ನಿಮ್ಮ ಎಲ್ಲಾ ವೈಯಕ್ತಿಕ ವಿಷಯಗಳು, ಆಧಾರ್ ಕಾರ್ಡ್ ಸಂಖ್ಯೆ, ವಿಳಾಸ ಹಾಗೂ ನಿಮ್ಮ ಭಾವಚಿತ್ರವನ್ನು ಅಪ್ಲೋಡ್ ಮಾಡಬೇಕು.

ಹಂತ 5: ಅದೇ ಪಟದ ಕೆಳಗಿನ ಭಾಗದಲ್ಲಿ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಪದವಿ ಅಂಕಪಟ್ಟಿ ಹಾಗೂ ಯಾವುದಾದರೂ ತಾಂತ್ರಿಕ ಅಭ್ಯಾಸವನ್ನು ಮಾಡಿದರೆ ಅಂತಹ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.

ಹಂತ 6: ನಂತರ ಶುಲ್ಕವನ್ನು ಪಾವತಿಸಬೇಕು. ಮೇಕ್ ಪೇಮೆಂಟ್ ಟು ರಿಜಿಸ್ಟರ್ ಗ್ರಾಮ್ಒನ್ ಎಂಬ ಆಯ್ಕೆಯನ್ನು ಒತ್ತಿರಿ.

ಹಂತ 7: ಅರ್ಜಿಯನ್ನು ಸಲ್ಲಿಸಿದ ನಂತರ ನಿಮಗೆ ಒಂದು ಸ್ವೀಕೃತಿ ದೊರೆಯುತ್ತದೆ,

ಹೀಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಧಿಕಾರಿಗಳು ನಿಮ್ಮ ಸೇವಾ ಕೇಂದ್ರಕ್ಕೆ ಭೇಟಿಯನ್ನು ನೀಡಿ ಪರಿಶೀಲಿಸುತ್ತಾರೆ. ಅನುಮೋದಿಸಿದ ನಂತರ ನಿಮಗೆ ಬಳಕೆದಾರರ ಐಡಿ ಹಾಗೂ ಪಾಸ್ವರ್ಡ್ ಅನ್ನು ನೀಡುತ್ತಾರೆ. ಆಯಾ ಸೇವೆಗಳಿಗೆ ನಿಗದಿತ ಹಣವನ್ನು ಗ್ರಾಮಒನ್ ಅವರೇ ನಿಗದಿಪಡಿಸಿರುತ್ತಾರೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಗ್ರಾಮಒನ್ ನಾಗರಿಕ ಸೇವಾ ಕೇಂದ್ರವನ್ನು ಸ್ಥಾಪಿಸಲು  ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೆ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳು

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Leave a Reply

Your email address will not be published. Required fields are marked *