ಕರ್ನಾಟಕದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ ಒಂದು ಸುಭಸಮಾಚಾರವನ್ನು ತಂದಿದೆ. ಸರ್ಕಾರದಿಂದ ಮಾಡಲಾಗಿರುವ ಮಹತ್ವದ ನಿರ್ಧಾರಗಳು ಶಿಕ್ಷಕರ ವೃತ್ತಿಜೀವನ ಮತ್ತು ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಉದ್ದೇಶ ಹೊಂದಿವೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ವೇತನ ಬಡ್ತಿ ಮತ್ತು ಮುಂಬಡ್ತಿ ಸೇರಿದಂತೆ ಹಲವಾರು ಪ್ರಮುಖ ಅಂಗೀಕಾರಗಳನ್ನು ನೀಡಲಾಗಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಶಿಕ್ಷಕರಿಗೆ ಪ್ರಮುಖ ನಿರ್ಧಾರಗಳು
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪದವಿ ಪಡೆದ ಮತ್ತು TET (ಶಿಕ್ಷಕರ ಅರ್ಹತಾ ಪರೀಕ್ಷೆ) ಪ್ರಮಾಣೀಕರಣ ಹೊಂದಿರುವ ಶಿಕ್ಷಕರಿಗೆ ಸಂಬಂಧಿಸಿದಂತೆ ಮೂರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಮೊದಲನೆಯದಾಗಿ, ಶಿಕ್ಷಕರ ಸೇವೆಯ ಸಾಲು/ಕ್ರಮ (seniority) ಮೇಲೆ ಯಾವುದೇ ಪರಿಣಾಮ ಬೀರದಂತೆ, ಅವರಿಗೆ ಒಮ್ಮೆ ವೇತನ ಬಡ್ತಿ ನೀಡಲು ಒಪ್ಪಿಗೆ ಸಿಕ್ಕಿದೆ. ಎರಡನೆಯದಾಗಿ, ಈ ಶಿಕ್ಷಕರುಗಳಿಗೆ 6ನೇ ಮತ್ತು 7ನೇ ತರಗತಿಗಳಲ್ಲಿ ಬೋಧಿಸಲು ಅವಕಾಶ ಮಾಡಿಕೊಡಲಾಗುವುದು. ಮೂರನೆಯದಾಗಿ, ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡುವಂತೆ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ತಿದ್ದುಪಡಿ ಮಾಡಲು ಸಚಿವ ಸಂಪುಟವು ಅನುಮೋದನೆ ನೀಡಿದೆ. ಈ ಕ್ರಮಗಳಿಂದ ಶಿಕ್ಷಕರ ವೃತ್ತಿ ಅಭಿವೃದ್ಧಿಗೆ ಹೊಸ ದ್ವಾರ ತೆರೆಯುವುದರ ಜೊತೆಗೆ ಅವರ ಆರ್ಥಿಕ ಪರಿಸ್ಥಿತಿಯಲ್ಲೂ ಸುಧಾರಣೆ ಕಾಣುವ ನಿರೀಕ್ಷೆ ಇದೆ.
ಸಚಿವ ಸಂಪುಟದ ಇತರ ಪ್ರಮುಖ ನಿರ್ಧಾರಗಳು
ಶಿಕ್ಷಕರ ವಿಷಯದ ಜೊತೆಗೆ, ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಬೇರೆ ಬೇರೆ ಕ್ಷೇತ್ರಗಳಿಗೆ ಸಂಬಂಧಿಸಿದ ಹಲವಾರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ರೈತರು ಮತ್ತು ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳು ವಾಪಸ್: ಸಚಿವ ಶ್ರೀ ಹೆಚ್.ಕೆ. ಪಾಟೀಲ್ ಅವರು, ರೈತರು ಮತ್ತು ಕನ್ನಡಪರ ಹೋರಾಟಗಾರರ ವಿರುದ್ಧ ದಾಖಲಾಗಿದ್ದ 60 ಪ್ರಕರಣಗಳನ್ನು ರದ್ದುಗೊಳಿಸಿ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು ಮೆಟ್ರೋ ಹಂತ-3ಗೆ ಅನುಮೋದನೆ: ಬೆಂಗಳೂರಿನ ಸಾರಿಗೆ ಸಂಪರ್ಕವನ್ನು ಮತ್ತಷ್ಟು ವಿಸ್ತರಿಸಲು ಮೆಟ್ರೋ ರೈಲಿನ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಸಚಿವ ಸಂಪುಟದಿಂದ ಅನುಮೋದನೆ ಲಭಿಸಿದೆ. ಮೆಟ್ರೋ ಹಂತ-3ರ ಭಾಗವಾಗಿ, ಜೆ.ಪಿ.ನಗರ 4ನೇ ಫೇಸ್ನಿಂದ ಹೆಬ್ಬಾಳದವರೆಗೆ ಮತ್ತು ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ 37.121 ಕಿಲೋಮೀಟರ್ ಉದ್ದದ ಡಬಲ್ ಡೆಕರ್ (ಎರಡು ಹಂತದ) ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ.
APMC ಮಾರುಕಟ್ಟೆ ಶುಲ್ಕದಲ್ಲಿ ಏರಿಕೆ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (APMC)ಲ್ಲಿ ವಸೂಲಿ ಮಾಡುವ ಮಾರುಕಟ್ಟೆ ಶುಲ್ಕವನ್ನು 41 ಪೈಸೆಯಿಂದ ಹೆಚ್ಚಿಸಿ 42 ಪೈಸೆಗೆ ಮಾಡಲಾಗುವುದು. ಅದೇ ರೀತಿ, ವಹಿವಾಟು ವೆಚ್ಚವನ್ನು 0.01 ಪೈಸೆಗೆ ಹೆಚ್ಚಿಸಿ ಮಾರ್ಪಾಡು ಮಾಡಲಾಗುವುದು.
ಆಶಾ ಕಿರಣ ಯೋಜನೆಗೆ ರಾಜ್ಯವ್ಯಾಪಿ ವಿಸ್ತರಣೆ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಆಶಾ ಕಿರಣ ಯೋಜನೆಯನ್ನು ಅನುಷ್ಠಾನಗೊಳಿಸಲು 52.85 ಕೋಟಿ ರೂಪಾಯಿಗಳ ಅನುದಾನವನ್ನು ನೀಡಲು ನಿರ್ಧರಿಸಲಾಗಿದೆ. ಕಣ್ಣಿನ ಉಚಿತ ತಪಾಸಣೆ ಮತ್ತು ಅಂಧತ್ವ ನಿವಾರಣಾ ಕಾರ್ಯಕ್ರಮಗಳನ್ನು ಒಳಗೊಂಡಿರುವ ಈ ಯೋಜನೆಯು ಈಗ ರಾಜ್ಯದಾದ್ಯಂತ ಕಾರ್ಯರೂಪಕ್ಕೆ ಬರುವ ನಿರೀಕ್ಷೆ ಇದೆ.
ರಾಯಸಂದ್ರದಲ್ಲಿ ಹೊಸ ವೈದ್ಯಕೀಯ ಕಾಲೇಜು: ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಸಚಿವ ಸಂಪುಟವು ತನ್ನ ಅನುಮೋದನೆಯನ್ನು ನೀಡಿದೆ. ಈ ಯೋಜನೆಗಾಗಿ, ಕರ್ನಾಟಕ ಗೃಹ ಮಂಡಳಿಯಿಂದ 65 ಕೋಟಿ ರೂಪಾಯಿಗಳ ಮೊಬಲಗಿನಲ್ಲಿ 25 ಎಕರೆ ಜಮೀನನ್ನು ಖರೀದಿಸಲು ಆಡಳಿತಾತ್ಮಕ ಅನುಮೋದನೆ ಲಭಿಸಿದೆ.
ಈ ನಿರ್ಧಾರಗಳು ರಾಜ್ಯದ ಶಿಕ್ಷಣ, ಆರೋಗ್ಯ, ಸಾರಿಗೆ ಮತ್ತು ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತವೆ ಎಂದು ನಿರೀಕ್ಷಿಸಲಾಗಿದೆ.





ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group




Leave a Reply