ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಗೃಹಜ್ಯೋತಿ ಯೋಜನೆಗೆ ಅರ್ಜಿಯನ್ನು ಯಾವ ದಿನದೊಳಗೆ ಸಲ್ಲಿಸಿದರೆ ಒಳ್ಳೆಯದು ಎಂಬುದನ್ನು ತಿಳಿಸಿಕೊಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಕಾಂಗ್ರೆಸಿನ ಗ್ಯಾರೆಂಟಿ ಯೋಜನೆಗಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಅರ್ಜಿಯನ್ನು ಸಲ್ಲಿಸದಿದ್ದರೆ ಉಚಿತ ವಿದ್ಯುತ್ ದೊರೆಯುವುದಿಲ್ಲ. ಮುಖ್ಯಮಂತ್ರಿಗಳು ಹೇಳಿರುವಂತೆ ಜುಲೈ 1ರಿಂದನೇ 200 ಯೂನಿಟ್ ಗೃಹ ವಿದ್ಯುತ್ ಯೋಜನೆ ಜಾರಿಯಾಗಿದೆ. ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿಯ ಕೊನೆಯ ದಿನಾಂಕವನ್ನು ನಿಗದಿಪಡಿಸಿಲ್ಲ ಆದರೆ ನೀವು ಆಗಸ್ಟ್ ತಿಂಗಳಿನಲ್ಲಿ ಉಚಿತ ವಿದ್ಯುತ್ತಿನ ಶೂನ್ಯ ಕರೆಂಟ್ ಬಿಲ್ಲನ್ನು ಪಡೆದುಕೊಳ್ಳಬೇಕೆಂದರೆ ಜುಲೈ 25ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು.
ಈ ದಿನದೊಳಗೆ ಅರ್ಜಿಯನ್ನು ಸಲ್ಲಿಸಿದರೆ ಆಗಸ್ಟ್ ನಲ್ಲಿ ಕರೆಂಟ್ ಫ್ರೀ :
ಗೃಹಜ್ಯೋತಿ ಯೋಜನೆಗೆ ಈಗಾಗಲೇ 90 ಲಕ್ಷ ಜನರು ಅರ್ಜಿಯನ್ನು ಸಲ್ಲಿಸಿದ್ದಾರೆ. ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಉಚಿತ ವಿದ್ಯುತ್ ಸೌಲಭ್ಯ ಬೇಕು ಎಂದರೆ ಅರ್ಜಿ ಸಲ್ಲಿಕೆ ಕಡ್ಡಾಯವಾಗಿದೆ. ಯಾರು ಅರ್ಜಿ ಸಲ್ಲಿಕೆ ಮಾಡಿರುವುದಿಲ್ಲವೋ ಅವರಿಗೆ ಆಗಸ್ಟ್ನಲ್ಲಿ ಪೂರ್ಣ ಬಿಲ್ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಆಗಸ್ಟ್ ತಿಂಗಳಿನಿಂದಲೇ ನಿನ್ನ ಮನೆಯ ವಿದ್ಯುತ್ ಬಿಲ್ ಶೂನ್ಯ ಬರಬೇಕೆಂದರೆ ಜುಲೈ 25ರ ಒಳಗೆ ನೀವು ಗೃಹಜ್ಯೋತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನವನ್ನು ನಿಗದಿಪಡಿಸದಿದ್ದರೂ ಕೂಡ ಶೀಘ್ರವಾಗಿ ಅರ್ಜಿಯನ್ನು ಸಲ್ಲಿಸುವುದು ಮುಖ್ಯವಾಗಿದೆ ಏಕೆಂದರೆ, ನೀವು ಎಷ್ಟು ಬೇಗ ಅರ್ಜಿಯನ್ನು ಸಲ್ಲಿಸುತ್ತಿರೋ, ಅಷ್ಟು ಬೇಗನೆ ನೀವು ಈ ಯೋಜನೆಯ ಫಲಾನುಭವಿಗಳಾಗುತ್ತೀರಾ. ಜೂನ್ 25ರೊಳಗೆ ಅರ್ಜಿಯನ್ನು ಸಲ್ಲಿಸಿರುವ ಎಲ್ಲಾ ಜನರಿಗೆ ಜುಲೈ ಒಂದರಿಂದ ಶೂನ್ಯ ವಿದ್ಯುತ್ ಬಿಲ್ ದೊರೆಯುತ್ತದೆ. ಹಾಗಾಗಿ ಇನ್ನೂ ನೀವೇನಾದರೂ ಗೃಹಜ್ಯೋತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಲ್ಲದಿದ್ದರೆ, ತಕ್ಷಣವೇ ಅರ್ಜಿಯನ್ನು ಸಲ್ಲಿಸಿ.
ನಮ್ಮ ವಿಡಿಯೋ ನೋಡುವ ಮೂಲಕ ಸುಮಾರು 30 ಸಾವಿರಕ್ಕೂ ಹೆಚ್ಚು ಜನ ಆನ್ಲೈನ್ ಮೂಲಕ ನೊಂದಣಿ ಮಾಡಿಕೊಂಡಿದ್ದಾರೆ. ನಮ್ಮ ಎಲ್ಲಾ ವೀಕ್ಷಕರಿಗೂ ತುಂಬಾ ಧನ್ಯವಾದಗಳು ನಿಮ್ಮ ಪ್ರೀತಿ ವಿಶ್ವಾಸ ನಮ್ಮ ಮೇಲೆ ಹೀಗೆ ಇರಲಿ. ನಮ್ಮ Android ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳೋ ಮೂಲಕ ನಿಖರವಾದ ಮತ್ತು ಸ್ಪಷ್ಟ ಸುದ್ದಿಗಳನ್ನು ನೀವು ಪ್ರತಿದಿನ ಓದಬಹುದು.
ನೀವು ನಿಮ್ಮ ಮೊಬೈಲ್ ಫೋನ್ ಮೂಲಕನೇ ಮನೆಯಿಂದಾನೆ ಅರ್ಜಿಯನ್ನು ಸಲ್ಲಿಸಬಹುದು ಇದಕ್ಕೆ ಬೇಕಾದ ದಾಖಲಾತಿಗಳು ಕೇವಲ ನಿಮ್ಮ ಆಧಾರ್ ಕಾರ್ಡ್, ವಿದ್ಯುತ್ ಬಿಲ್ ನಲ್ಲಿರುವ ಕಸ್ಟಮರ್ ಐಡಿ ನಂಬರ್ ಮಾತ್ರ. ಇವುಗಳನ್ನು ಹೊರತುಪಡಿಸಿ ನೀವು ಯಾವುದೇ ದಾಖಲಾತಿಗಳನ್ನು ಅಪ್ಲೋಡ್ ಮಾಡುವ ಅಗತ್ಯ ಇಲ್ಲ ಹಾಗೂ ಈ ಸಲ್ಲಿಸಲು ಯಾವುದೇ ಕೊನೆ ದಿನಾಂಕ ನಿಗದಿ ಮಾಡಿಲ್ಲ ಹಾಗಾಗಿ ಯಾರೂ ಚಿಂತೆ ಮಾಡದೆ ಯಾವಾಗ ಬೇಕಾದರೂ ಅರ್ಜಿಯನ್ನು ಮೊಬೈಲ್ ಫೋನ್ ಮೂಲಕ ಉಚಿತವಾಗಿ ಸಲ್ಲಿಸಬಹುದು. ಹಾಗೂ ಗ್ರಾಮ್ ಒನ್, ಕರ್ನಾಟಕ ಒನ್, ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸಹಿತ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನೇರವಾದ ಲಿಂಕ್ ಮತ್ತು ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವ ಲೈವ್ ವಿಡಿಯೋ ಕೆಳಗಿದೆ ದಯವಿಟ್ಟು ನೋಡಿ ಅರ್ಜಿ ಸಲ್ಲಿಸಿ
ಗೃಹಜ್ಯೋತಿ ಯೋಜನೆ ಆನ್ಲೈನ್ ಅರ್ಜಿ:
ಈ ಯೋಜನೆಯ ಲಾಭ ಪಡೆಯಲು ಇಚ್ಚಿಸುವ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ನಲ್ಲಿ ವಿಶೇಷವಾಗಿ ರೂಪಿಸಿರುವ https://sevasindhugs.karnataka.gov.in/ ವಿಳಾಸದಲ್ಲಿ ಲಾಗಿನ್ ಆಗಿ ನೋಂದಾಯಿಸಬೇಕು.
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : https://sevasindhugs.karnataka.gov.in/
ಎರಡನೇ ದಿನವಾದ ನಿನ್ನೆ1,61,958 ಜನರು ನೋಂದಣಿ ಮಾಡಿಕೊಂಡಿದ್ದಾರೆ ಯೋಜನೆ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಇಲಾಖೆ ತಿಳಿಸಿದೆ.
ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ಗೃಹಜೋತಿ ಆಯ್ಕೆ ಮಾಡಿಕೊಂಡು. ಮೇಲೆ ಕೊಟ್ಟಿರುವ ಡಿಕ್ಲರೇಷನ್ ಸರಿಯಾಗಿ ಓದಿ ಚೆಕ್ ಬಾಕ್ಸ್ ಸೆಲೆಕ್ಟ್ ಮಾಡಿ ಕೊಟ್ಟಿರುವ ಕ್ಯಾಪ್ಚವನ್ನು ಸರಿಯಾಗಿ ನಮೂದಿಸಿ ಅಗ್ರಿ ಮೇಲೆ ಕ್ಲಿಕ್ ಮಾಡಿ

ಹಂತ 3: ಎಲ್ಲಾ ಸರಿಯಾದ ಮಾಹಿತಿಯನ್ನ ನಮೂದಿಸಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ
ಹಂತ 3: ಎಸ್ಕಾಂ ಹೆಸರು, ಖಾತೆ ಸಂಖ್ಯೆ, ಖಾತೆದಾರರ ಹೆಸರು ಎಸ್ಕಾಂ ನಲ್ಲಿರುವಂತೆ, ಖಾತೆದಾರರ ವಿಳಾಸ ಎಸ್ಕಾಂ ನಲ್ಲಿರುವಂತೆ, ಎಸ್ಕಾಂ ಹೆಸರು1, ಬಳಕೆದಾರರ ವಿಧ (ಇಲ್ಲಿ 3 ಆಯ್ಕೆಗಳಿದ್ದು ಬಾಡಿಗೆದಾರರು/ ಮಾಲೀಕರು/ ಕುಟುಂಬದ ಸದಸ್ಯರು) ಎಂದಿದೆ, ಆಧಾರ್ ಸಂಖ್ಯೆ, ಅರ್ಜಿದಾರರ ಹೆಸರು, ಸಂವಹನಕ್ಕಾಗಿ ದೂರವಾಣಿ ಸಂಖ್ಯೆ ಅಗತ್ಯವಿರುವ ವಿವರಗಳನ್ನು ಇಲ್ಲಿ ನಮೂದಿಸಿ.


ಹಂತ 4: ನಂತರ ಕೆಳಗಡೆ ಈ ರೀತಿಯಾಗಿ ನಿಮಗೆ ಸ್ವೀಕೃತಿ ಪತ್ರ ದೊರೆಯುತ್ತದೆ

ನಿಮಗೆ ಮೊಬೈಲ್ ನಲ್ಲಿ ಅಪ್ಲಿಕೇಶನ್ ಹಾಕುವಾಗ ಏನಾದ್ರು ಸಮಸ್ಯೆ ಆದರೆ ಹತ್ತಿರದ ಗ್ರಾಮ ಒನ್ ಕರ್ನಾಟಕ ಒನ್ ಬೆಂಗಳೂರು ಒನ್ ಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಬಹುದು
ಸೂಚನೆ: ಇಂದು ಬಹಳ ಜನ ಗೃಹಜೋತಿ ಯೋಜನೆಗೆ ಅರ್ಜಿ ಸಲ್ಲಿಸುತ್ತಿದ್ದಾರೆ ಹಾಗಾಗಿ ತಾಂತ್ರಿಕ ಕಾರಣಗಳಿಂದ ವೆಬ್ಸೈಟ್ ತೆರೆಯದಿದ್ದರೆ ಸ್ವಲ್ಪ ಸಮಯದ ನಂತರ ಮತ್ತೆ ಪ್ರಯತ್ನಿಸಿ, ಅರ್ಜಿ ಸಲ್ಲಿಸಿ
ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಮಹಿಳೆಯರಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
| ಪ್ರಮುಖ ಲಿಂಕುಗಳು |
| ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ |
Download App |
| ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group






