ಬೆಂಗಳೂರು: ಕರ್ನಾಟಕ ಸರ್ಕಾರದ ಜನಪ್ರಿಯ ಯೋಜನೆಯಾದ ಗೃಹಲಕ್ಷ್ಮಿಯಿಂದ ಲಾಭ ಪಡೆಯುವ ಲಕ್ಷಾಂತರ ಮಹಿಳೆಯರಿಗೆ ಶುಭವಾರ್ತೆ. ದೀಪಾವಳಿ ಸಮಯದಲ್ಲಿ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಿದೆ. ಹಿಂದಿನ ಕೆಲವು ತಿಂಗಳ ಸ್ಥಗಿತದ ನಂತರ ಈ ಹಣವನ್ನು ಪಡೆದುಕೊಂಡು ಅನೇಕ ಮಹಿಳೆಯರು ಸಂತೋಷ ವ್ಯಕ್ತಪಡಿಸಿದ್ದಾರೆ.
ಆದರೆ, ಕೆಲವು ಫಲಾನುಭವಿಗಳ ಖಾತೆಗೆ ಇನ್ನೂ ಹಣ ಬಂದಿಲ್ಲ ಎಂದು ತಿಳಿದು ಬಂದಿದೆ. ಅಂತಹ ಮಹಿಳೆಯರು ಚಿಂತಿಸಬೇಕಾಗಿಲ್ಲ. ನೀವು ಯೋಜನೆಯ under ಫಲಾನುಭವಿಯಾಗಿದ್ದೀರಾ ಮತ್ತು ನಿಮ್ಮ ಹೆಸರು ಸರ್ಕಾರದ ಪಟ್ಟಿಯಲ್ಲಿ ಇದೆಯಾ ಎಂದು ಆನ್ಲೈನ್ನಲ್ಲಿ ಸುಲಭವಾಗಿ ಪರಿಶೀಲಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಯಾರಿಗೆ ಹಣ ಬರುತ್ತದೆ?
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ನೀವು ಕೇವಲ ಅರ್ಜಿ ಸಲ್ಲಿಸಿದ್ದರೆ ಸಾಲದು. ನಿಮ್ಮ ಹೆಸರು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ‘ಇ-ರೇಷನ್ ಕಾರ್ಡ್’ ಪಟ್ಟಿಯಲ್ಲಿ ಸೇರಿರುವುದು ಅತ್ಯಗತ್ಯ. ಈ ಪಟ್ಟಿಯಲ್ಲಿ ಹೆಸರು ಇರುವ ಫಲಾನುಭವಿಗಳಿಗೆ ಮಾತ್ರ ಹಣ ಬಿಡುಗಡೆ ಮಾಡಿದೆ
ಹೆಸರು ಪರಿಶೀಲಿಸುವ ವಿಧಾನ:
ನಿಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ ಎಂದು ಪರಿಶೀಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:
- ಮೊದಲು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ https://ahara.karnataka.gov.in/Home/EServices ಗೆ ಭೇಟಿ ನೀಡಿ.
- ವೆಬ್ಪುಟ ತೆರೆದಾಗ, ಎಡಭಾಗದಲ್ಲಿ ಆಯ್ಕೆಗಳ ಪಟ್ಟಿ ಕಾಣಸಿಗುತ್ತದೆ. ಅದು ಕಾಣದಿದ್ದರೆ, ಪುಟದ ಮೇಲ್ಭಾಗದಲ್ಲಿ ಇರುವ ಮೂರು ಸಮಾನಾಂತರ ರೇಖೆಗಳ (ಮೆನು ಬಟನ್) ಮೇಲೆ ಕ್ಲಿಕ್ ಮಾಡಿ.
- ಆಯ್ಕೆಗಳ ಪಟ್ಟಿಯಿಂದ ‘E-Ration Card’ ಎಂಬ ಆಯ್ಕೆಯನ್ನು ಆರಿಸಿ.

- ಅಲ್ಲಿ ‘Show village’ ಆಯ್ಕೆಯನ್ನು ಮಾಡಿ.
- ನಂತರ, ಕ್ರಮವಾಗಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ ಮತ್ತು ಹಳ್ಳಿಯನ್ನು ಡ್ರಾಪ್ ಡೌನ್ ಮೆನುವಿನಿಂದ ಆಯ್ಕೆಮಾಡಿ.
- ಕೆಳಗೆ ನೀಡಿರುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ.
- ಅದರ ಕೆಳಗಿರುವ ‘Go’ ಬಟನ್ ಅನ್ನು ಕ್ಲಿಕ್ ಮಾಡಿ.

- ಹಳ್ಳಿಯ ಎಲ್ಲ ಇ-ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳ ಪಟ್ಟಿ ತೆರೆಯುತ್ತದೆ. ನಿಮ್ಮ ಕುಟುಂಬದ ಹೆಸರು ಈ ಪಟ್ಟಿಯಲ್ಲಿ ಇದೆಯೇ ಎಂದು ಪರಿಶೀಲಿಸಿ.
ಹೆಸರು ಪಟ್ಟಿಯಲ್ಲಿ ಇಲ್ಲದಿದ್ದರೆ ಏನು ಮಾಡಬೇಕು?
ನಿಮ್ಮ ಹೆಸರು ಪಟ್ಟಿಯಲ್ಲಿ ಕಾಣದಿದ್ದರೆ, ಅದಕ್ಕೆ ಕಾರಣ ನೀವು ಅನರ್ಹರೆಂದು ಪರಿಗಣಿಸಲ್ಪಟ್ಟಿರಬಹುದು. ಸರ್ಕಾರವು ಅನೇಕ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರನ್ನು ಗುರುತಿಸಿ, ಅವರನ್ನು ಎಪಿಎಲ್ ಪಟ್ಟಿಗೆ ಸ್ಥಾನಾಂತರಿಸುವ ಕಾರ್ಯವನ್ನು ಮಾಡುತ್ತಿದೆ. ಇಂತಹ ಸಂದರ್ಭಗಳಲ್ಲಿ, ನೀವು ಅರ್ಹರೆಂದು ಭಾವಿಸಿದರೆ, ನಿಮ್ಮ ಬಳಿ ಇರುವ ಎಲ್ಲಾ ಅಗತ್ಯ ದಾಖಲೆಗಳನ್ನು ತಹಶೀಲ್ದಾರ್ ಕಾರ್ಯಾಲಯಕ್ಕೆ ಸಲ್ಲಿಸಿ ನಿಮ್ಮ ಬಿಪಿಎಲ್ ಕಾರ್ಡ್ ಸ್ಥಿತಿಯನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ. ಇದಕ್ಕಾಗಿ ಸರ್ಕಾರವು ಸೂಕ್ತ ಸಮಯಾವಕಾಶವನ್ನೂ ನೀಡಿದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಲಿಂಗರಾಜ ರಾಮಪುರ (Lingaraj Ramapur) ಅವರು NeedsOfPublic.in ನ ಸಂಸ್ಥಾಪಕರು ಮತ್ತು ಪ್ರಧಾನ ಸಂಪಾದಕರಾಗಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಿಂದ ಐಟಿ (BCA, MCA) ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಸ್ನಾತಕೋತ್ತರ (M.A) ಪದವಿ ಪಡೆದಿರುವ ಇವರು ತಾಂತ್ರಿಕ ಮತ್ತು ಮಾಧ್ಯಮ ರಂಗದ ಅಪರೂಪದ ಸಂಗಮವಾಗಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮಕ್ಕೆ ಕಾಲಿಡುವ ಮುನ್ನ ಬೆಂಗಳೂರಿನ ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿಗಳಾದ Infosys ಮತ್ತು Concentrix ನಲ್ಲಿ ತಾಂತ್ರಿಕ ಹುದ್ದೆಗಳಲ್ಲಿ ಕೆಲಸ ಮಾಡಿದ ಜಾಗತಿಕ ಅನುಭವ ಇವರಿಗಿದೆ. 2017 ರಿಂದ ಮಾಧ್ಯಮ ರಂಗದಲ್ಲಿದ್ದು, ಕಳೆದ 9 ವರ್ಷಗಳಿಂದ ಡೇಟಾ-ಆಧಾರಿತ ವರದಿಗಾರಿಕೆ, ನಿಖರವಾದ ಫ್ಯಾಕ್ಟ್-ಚೆಕಿಂಗ್ ಮತ್ತು ಸಾರ್ವಜನಿಕರಿಗೆ ವಿಶ್ವಾಸಾರ್ಹ ಮಾಹಿತಿಯನ್ನು ತಲುಪಿಸುವ ಸಂಪಾದಕೀಯ ಜವಾಬ್ದಾರಿಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.


WhatsApp Group






Leave a Reply