Gruhalakshmi – ಇವರಿಗೆ ಬರೋದಿಲ್ಲ ಗೃಹಲಕ್ಷ್ಮಿ 2,000/- ಹಣ & ಅನ್ನಭಾಗ್ಯ ಹಣ, ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

ration card cancel

ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ, ಮುಖ್ಯಮಂತ್ರಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಉಪಸ್ಥಿತರಿದ್ದರು. ಸಭೆಯಲ್ಲಿ ಮಾತನಾಡಿ, ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್ ಹೀಗೆ ಮತ್ತಿತರ ಸಮಸ್ಯೆಗಳಿಂದ ಗೃಹಲಕ್ಷ್ಮಿ ಹಣ ಬರದಿದ್ದರೆ ಅಂತಹ ಸಮಸ್ಯೆಗಳನ್ನು ಗ್ರಾಮ ಮಟ್ಟದಲ್ಲಿ ಅದಾಲತ್ ನಡಸಿ ಡಿಸೆಂಬರ್ ಒಳಗೆ ಅವುಗಳೆಲ್ಲವುಗಳನ್ನು ಬಗೆಹರಿಸಬೇಕು ಎಂದು ಸೂಚನೆ ನೀಡಿದರು. ಹಾಗಾಗಿ ಇನ್ನು ಗೃಹಲಕ್ಷ್ಮಿಯ ಹಣ ಬಂದಿಲ್ಲ ಎಂದು ಚಿಂತಿಸುತ್ತಿರುವವರಿಗೆ ಇದು ಒಂದು ಸಂತಸದ ಸುದ್ದಿಯಾಗಿದೆ. ಎಲ್ಲಾ ಫಲಾನುಭವಿಗಳಿಗೂ ಗೃಹಲಕ್ಷ್ಮಿ ಯೋಜನೆಯ ಹಣ ಡಿಸೆಂಬರ್ ಒಳಗಾಗಿ ಖಾತೆಗೆ ಬಂದು ಜಮಾ ಆಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಡಿಸೆಂಬರ್ ನಲ್ಲೂ ಹಣ ಬಾರದೇ ಇದ್ದರೆ ಈ ಕೆಲಸ ಮಾಡಿ

ಹಣ ಬಾರದೇ ಇದ್ದರೆ ಇನ್ನು ಮುಂದೆ ನಿಮ್ಮ ಖಾತೆಗೆ ಹಣ ಬಾರದೆ ಇದ್ದರೆ ತಕ್ಷಣವೇ ನೀವು ಅದಾಲತ್ ದೂರು ಸಲ್ಲಿಸಬಹುದು. ಗ್ರಾಮ ಪಂಚಾಯತ್ ಸಿಬ್ಬಂದಿ ನಿಮ್ಮ ಮನೆಗೆ ಬಂದು ಖಾತೆಯಲ್ಲಿ ಇರುವ ಸಮಸ್ಯೆಗಳನ್ನು ಪರಿಹಾರ ಮಾಡಲಿದ್ದಾರೆ. ಯಾರ ಖಾತೆಗೆ ಹಣ ಬಂದಿಲ್ಲವೋ ಅವರ ಮನೆ ಬಾಗಿಲಿಗೆ ಅಧಿಕಾರಿಗಳು ಹೋಗಿ ಸಮಸ್ಯೆ ಪರಿಹರಿಸಿ ಖಾತೆಗೆ ಹಣ ಜಮಾ ಆಗುವಂತೆ ಮಾಡುತ್ತಾರೆ, ಅಂಗನವಾಡಿ ಸಹಾಯಕಿಯರು ಹಾಗೂ ಗ್ರಾಮ ಪಂಚಾಯತ್ ಕಡೆಯಿಂದ ಅಧಿಕಾರಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ. ಮಹಿಳೆಯರ ಖಾತೆಗೆ ಹಣ ಜಮಾ ಆಗದೆ ಇದ್ದಲ್ಲಿ ತಾವೇ ಸ್ವತಃ ಬ್ಯಾಂಕಿಗೆ ಕರೆದುಕೊಂಡು ಹೋಗಿ ಹಾಗೂ ಮತ್ತಿತರ ದಾಖಲೆಗಳು ಸರಿಯಾಗಿ ಮಾಡಿಕೊಡುತ್ತಾರೆ.ಅದಾಲತ್ ಪ್ರಕ್ರಿಯೆ ಮೂಲಕ ಗ್ರಾಮ ಪಂಚಾಯತ್ ಸಿಬ್ಬಂದಿ ಯಾವ ಮಹಿಳೆಯ ಖಾತೆಗೆ ಹಣ ಜಮಾ ಆಗಿಲ್ಲ ಎನ್ನುವ ವಿವರವನ್ನು ಸರ್ಕಾರಕ್ಕೆ ನೀಡಬೇಕು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಇಂಥವರ ಬಿಪಿಎಲ್ ಕಾರ್ಡ್ ರದ್ದಾಗಲಿದೆ :

ಅನರ್ಹರು ಬಿಪಿಎಲ್‌ ಕಾರ್ಡ್‌(BPL card)ಪಡೆದಿದ್ದರೆ ಅಂತಹವರ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇವು ಪತ್ತೆಯಾದರೆ ಅವುಗಳನ್ನು ರದ್ದುಪಡಿಸಲಾಗುವುದು. ಇದರ ಜೊತೆಗೆ, ಪಡಿತರ ಅಕ್ಕಿ ದುರುಪಯೋಗವಾದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತೇವೆ. ಇಂತಹ ದೂರುಗಳು ಬಂದ ಕಡೆ ತನಿಖೆ ಮಾಡಿಸುತ್ತೇವೆ ಎಂದು ತಮ್ಮ ಮಾತಿನಲ್ಲಿ ಕೆ.ಎಚ್‌. ಮುನಿಯಪ್ಪ ಅವರು ಸೇರಿಸಿದ್ದಾರೆ.

2013 ರಲ್ಲಿ ಆಹಾರ ಭದ್ರತೆ ಕಾಯ್ದೆಯನ್ನು ಯುಪಿಎ(UPA) ಸರ್ಕಾರವು ಅನ್ನಭಾಗ್ಯ ಯೋಜನೆ(Annabhagya yojana)ಯನ್ನು ಜಾರಿಗೆ ತಂದಿತ್ತು. ಈಗ ಕೇಂದ್ರ ಸರ್ಕಾರ(BJP) ಈ ಯೋಜನೆಯನ್ನು ಮುನ್ನಡೆಸುತ್ತಿದೆ. ರಾಜ್ಯ ಸರಕಾರವು ತನ್ನ ಗ್ಯಾರಂಟಿ ಯೋಜನೆಯಲ್ಲಿ ತಿಳಿಸಿರುವ ಪ್ರಕಾರ ಪ್ರತಿ ರೇಷನ್ ಕಾರ್ಡ್ ಹೊಂದಿದವರಿಗೆ 10 ಕೆಜಿ ಅಕ್ಕಿಯನ್ನು ನೀಡಲಾಗುವುದು ಎಂದು ಭರವಸೆ ನೀಡಿತ್ತು. ಈ ಕಾರ್ಯಕ್ಕಾಗಿಯೇ ರಾಜ್ಯ ಸರ್ಕಾರವು(state government) ಹೆಚ್ಚಿನ 5 ಕೆಜಿ ಅಕ್ಕಿಯನ್ನು ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ ಮನವೀ ಮಾಡಿಕೊಂಡಿತ್ತು. ಆದರೆ ಕೇಂದ್ರ ಸರಕಾರವು ರಾಜ್ಯ ಸರ್ಕಾರದ ಈ ಮನವೀಗೆ ಸ್ವೀಕೃತಿ ನೀಡಲಿಲ್ಲ, ಅಕ್ಕಿಯನ್ನು ಒದಗಿಸಲಿಲ್ಲ. ಈ ವಿಚಾರದಲ್ಲಿ ಕೇಂದ್ರ ಸರಕಾರ ರಾಜಕೀಯ ಮಾಡಿದೆ ಎಂದು ಸಚಿವರು ಟೀಕಿಸಿದ್ದಾರೆ.

15 ದಿನದೊಳಗೆ ಹೊಸ ಪಡಿತರ ಚೀಟಿ ವಿತರಣೆ :

ಚುನಾವಣೆ ಅಂಗವಾಗಿ ಹೊಸ ಪಡಿತರ ಚೀಟಿ ವಿತರಣೆ ನಿಲ್ಲಿಸಲಾಗಿತ್ತು. ಇನ್ನು 15 ದಿನದೊಳಗೆ ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಲು ಪ್ರಯತ್ನ ನಡೆಸಲಾಗುತ್ತಿದ್ದು, ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದ್ದಾರೆ.

tel share transformed

6ತಿಂಗಳಿನಿಂದ ರೇಷನ್‌ ಪಡೆಯದ ಬಿಪಿಎಲ್‌ ಕಾರ್ಡ್‌ ಗಳನ್ನು ರದ್ದು ಮಾಡುವ ಕುರಿತಂತೆ ಆಹಾರ ಇಲಾಖೆ ಚಿಂತನೆ ನಡೆಸಿದ್ದು, ಈ ಪೈಕಿ ಒಟ್ಟು 3.26 ಲಕ್ಷ ಬಿಪಿಎಲ್‌ ಕಾರ್ಡ್‌ ಗಳನ್ನು ರದ್ದು ಮಾಡಲು ಮುಂದಾಗಿದೆ. ರಾಜ್ಯಾದ್ಯಂತ 3.26 ಲಕ್ಷ ಬಿಪಿಎಲ್‌ ಕಾರ್ಡ್ದಾರರು ಆರು ತಿಂಗಳಿಂದ ರೇಷನ್ ಪಡೆಯುತ್ತಿಲ್ಲ ಎಂದು ಇಲಾಖೆ ಹೇಳಿದೆ. ಇಂತಹ ಕಾರ್ಡ್‌ಗಳ ರದ್ದತಿಗೆ ಸರ್ಕಾರ ಸೂಚನೆ ಕೊಟ್ಟಿದೆ.

ಅನರ್ಹರ ಪಟ್ಟಿ ಚೆಕ್ ಮಾಡುವುದು ಹೇಗೆ? Gruhalakshmi Cancelled List

ಹಂತ 1: ಮೊದಲಿಗೆ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ :
https://ahara.kar.nic.in/Home/EServices

ಹಂತ 2: ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ.

ನಂತರ e-Ration Card ಎಂಬ ಆಯ್ಕೆಯಲ್ಲಿ Show cancelled/Suspended  ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ

rrrrr

ಹಂತ 3: ನಂತರ ನಿಮಗೆ ಲಿಸ್ಟ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಜಿಲ್ಲೆ, ತಿಂಗಳು  ಹಾಗೂ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ

rrrrr2

whatss

ಹಂತ 4: ನಂತರ ನೀವು ಅನರ್ಹರ ಪಟ್ಟಿಯನ್ನು ನೋಡಬಹುದು, ಅದರಲ್ಲಿ ರದ್ದು ಆಗಿರುವುದಕ್ಕೆ ಕೆಲವೊಮ್ಮೆ ಕಾರಣವನ್ನು ಕೂಡ ನೀಡಲಾಗಿರುತ್ತದೆ.

nov

ಸೂಚನೆ – ಮನೆಯ ಯಜಮಾನಿಯರಿಗೆ 2000 ಕೊಡುತ್ತಿದ್ದರಿಂದ, ರೇಷನ್ ಕಾರ್ಡ್ ನಲ್ಲಿ ಇರುವ ಮನೆ ಯಜಮಾನಿಯರನ್ನೇ ಗೃಹಲಕ್ಷ್ಮಿ ಎಂದು ಪರಿಗಣಿಸಲಾಗಿದೆ. ಹಾಗಾಗಿ ಈ ಕೆಳಗಿನ ಕಾರಣಗಳನ್ನು ಕೊಟ್ಟು ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೂ 2000 ಹಣ ಬರುವುದಿಲ್ಲ ಎಂದು ಹೇಳಬಹುದು

whatss

 

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

 

WhatsApp Group Join Now
Telegram Group Join Now

Related Posts

One thought on “Gruhalakshmi – ಇವರಿಗೆ ಬರೋದಿಲ್ಲ ಗೃಹಲಕ್ಷ್ಮಿ 2,000/- ಹಣ & ಅನ್ನಭಾಗ್ಯ ಹಣ, ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

Leave a Reply

Your email address will not be published. Required fields are marked *

error: Content is protected !!