Gruhalakshmi – ಮನೆಯಲ್ಲಿ ಕುಳಿತು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ, ನೇರ ಅರ್ಜಿ ಸಲ್ಲಿಕೆ ಪ್ರಾರಂಭ – ಲಕ್ಷ್ಮಿ ಹೆಬ್ಬಾಳ್ಕರ್

WhatsApp Image 2023 07 27 at 4.12.41 AM

WhatsApp Group Telegram Group

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ(Gruhalakshmi Yojane) ಅರ್ಜಿ ಸಲ್ಲಿಸುವಿಕೆಯಲ್ಲಿ ಬಂದಿರುವ ಹೊಸ ಬದಲಾವಣೆಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅದೇನೆಂದರೆ ಅರ್ಜಿಯನ್ನು ಸಲ್ಲಿಸಲು ಇನ್ನು ಮುಂದೆ ಮೆಸೇಜನ್ನು ಕಳಿಸುವಂತಹ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಕುಳಿತು ಅರ್ಜಿಯನ್ನು ಸಲ್ಲಿಸಬಹುದು & ನೇರವಾಗಿ ಕರ್ನಾಟಕ ಒನ್‌, ಗ್ರಾಮ ಒನ್‌, ಬೆಂಗಳೂರು ಒನ್‌ ಸೇರಿದಂತೆ ಸರ್ಕಾರಿ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಪ್ರಜಾಪ್ರತಿನಿಧಿಗಳ(praja pratinidhi) ಆಯ್ಕೆ :

ಮನೆಯ ಯಜಮಾನಿಗೆ 2 ಸಾವಿರ ರೂ. ನಗದು ನೀಡುವ ಗೃಹಲಕ್ಷ್ಮೀ ಯೋಜನೆಗೆ(Gruhalakshmi scheme) ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಸಹಾಯ ಮಾಡಲೆಂದು ಪ್ರಜಾ ಪ್ರತಿನಿಧಿನೇಮಕ ಮಾಡಲು ರಾಜ್ಯ ಸರಕಾರ ತೀರ್ಮಾನ ಮಾಡಿದೆ.  ಈ ಸಂಬಂಧ ಸರಕಾರ ಮಾರ್ಗಸೂಚಿ ಪ್ರಕಟಿಸಿದ್ದು, ಪ್ರಜಾಪ್ರತಿನಿಧಿಗಳಿಗೆ ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಓರ್ವ ಮಹಿಳೆ ಸೇರಿದಂತೆ ಪ್ರತಿ 1 ಸಾವಿರ ಜನರಿಗೆ ಅಥವಾ ಒಂದು ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿ ನೇಮಕ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

whatss

ನೀವು ಮನೆಯಲ್ಲಿ ಕುಳಿತು ಅರ್ಜಿಯನ್ನು ಸಲ್ಲಿಸಬಹುದು

ಆಯ್ಕೆಯಾದ ಪ್ರಜಾ ಪ್ರತಿನಿಧಿಗಳು ಮನೆ ಮನೆಗೆ ತೆರಳಿ ತಂತ್ರಜ್ಞಾನದಲ್ಲಿ ಅಡೆತಡೆಗಳನ್ನು ಎದುರಿಸುತ್ತಿರುವ ನಾಗರಿಕರಿಗೆ ಸಹಾಯವನ್ನು ಮಾಡುತ್ತಾರೆ.
ಹಾಗೆಯೇ ನಾಗರಿಕರ ಪರವಾಗಿ ಇವರು ಅರ್ಜಿಗಳನ್ನು ಸಲ್ಲಿಸುತ್ತಾರೆ. ಇದನ್ನು ಪ್ರಜಾಪ್ರತಿನಿಧಿಗಳು ಸ್ವಯಂ ಪ್ರೇರಣೆಯಿಂದ ಮಾಡುತ್ತಿದ್ದು ನಾಗರಿಕರು ಅವರಿಗೆ ಯಾವುದೇ ರೀತಿಯ ಶುಲ್ಕವನ್ನು ಪಾವತಿಸುವ ಅವಶ್ಯಕತೆ ಇಲ್ಲ. ಸರ್ಕಾರವು ಆಯ್ಕೆಯಾದ ಪ್ರಜಾಪ್ರತಿನಿಧಿಗಳಿಗೆ ಗೌರವ ಶುಲ್ಕವನ್ನು ನೀಡುತ್ತದೆ.

ಸಚಿವರಿಗೆ ಆಯ್ಕೆ ಹೊಣೆ

‘ಪ್ರಜಾ ಪ್ರತಿನಿಧಿ’ಗಳನ್ನು ಆಯ್ಕೆ ಮಾಡುವ ಹೊಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಲಾಗಿದೆ. ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ನೀಡಲಾಗುತ್ತದೆ. ಉಸ್ತುವಾರಿ ಸಚಿವರ ಕಚೇರಿಯಿಂದ ಇನ್ನೂ ಆಯ್ಕೆ ಪಟ್ಟಿ ಸಿದ್ಧವಾಗಿಲ್ಲ ಎಂದು ಮೂಲಗಳು ಮಾಹಿತಿ ನೀಡಿವೆ.

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ಸ್ಟೇಟಸ್ ಚೆಕ್ ಮಾಡಿಕೊಳ್ಳೋದು ಹೇಗೆ?

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ಸೇವಾ ಸಿಂಧುವಿನ ಖಾತ್ರಿ ಯೋಜನೆಗಳ ಪೋರ್ಟಲ್ಲಿಂದ ಅರ್ಜಿ ನಮೂನೆ ಸ್ಥಿತಿಯನ್ನು ನೀವು ಪರಿಶೀಲಿಸಬಹುದು. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಸರ್ಕಾರವು ಶೀಘ್ರದಲ್ಲೇ ಬಿಡುಗಡೆ ಮಾಡುತ್ತದೆ. ನೋಂದಣಿ ಪ್ರಕ್ರಿಯೆ ಸ್ವಲ್ಪ ಮಟ್ಟಿಗೆ ಪೂರ್ಣಗೊಂಡ ನಂತರ ಈ ಸೌಲಭ್ಯ ನಾಗರಿಕರಿಗೆ ಲಭ್ಯವಾಗುತ್ತದೆ. ಹಾಗಾಗಿ ಫಲಾನುಭವಿಗಳು ಯಾವುದೇ ಕಾರಣಕ್ಕೂ ನಕಲಿ ವೆಬ್ಸೈಟ್ ಗಳಲಿಂಕ್ ಕ್ಲಿಕ್ ಮಾಡಬಾರದು.

ಪ್ರಜಾಪ್ರತಿನಿಧಿಗಳ ಆಯ್ಕೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಮೊದಲಿಗೆ ಸೇವಾ ಸಿಂಧುವಿನ ಸಿಟಿಜನ್ ಪೋರ್ಟಲ್ ಗೆ ತೆರಳಲು ಇಲ್ಲಿ ಕ್ಲಿಕ್ ಮಾಡಿ.

https://sevasindhugs1.karnataka.gov.in/gl-sp/

ಸೂಚನೆ : ಈ ಲಿಂಕ್ ಮೂಲಕ ಮಾತ್ರ ಲಾಗಿನ್ ಆದರೆ ನಿಮಗೆ ಗೃಹಲಕ್ಷ್ಮಿ ಪ್ರಜಾ ಪ್ರತಿನಿಧಿಯ ಅರ್ಜಿ ನಮೂನೆ ಕಾಣಿಸುತ್ತದೆ

ಹಂತ 2: ನಂತರ ನಿಮ್ಮ ಸೇವಾ ಸಿಂಧುವಿನ ಅಕೌಂಟಿನ ಸಿಟಿಜನ್ ಲಾಗಿನ್ ಐಡಿ ಗಳನ್ನು ಹಾಕಿ ಕೇಳಲಾದ ಕೋಡನ್ನು ನೋಂದಣಿ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.

pp00

ಹಂತ 3: ಲಾಗಿನ್ ಆದ ನಂತರ, Apply for services ಎಂಬ ಆಯ್ಕೆಯ ಅಡಿಯಲ್ಲಿ view all available services ಎಂಬ ಆಕೆಯನ್ನು ಮಾಡಿಕೊಳ್ಳಿ. ನಂತರ ಗೃಹಲಕ್ಷ್ಮಿ ಸಿವಿ ಎನ್ರೋಲ್ಮೆಂಟ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ

pp02

ಹಂತ 5: ನಂತರ ಅರ್ಜಿ ನಮೂನೆ ತೆರೆಯುತ್ತದೆ ಅದರಲ್ಲಿ ಅರ್ಜಿದಾರರ  ಮೊಬೈಲ್ ಸಂಖ್ಯೆ ಹಾಗೂ ಅರ್ಜಿ ಸಲ್ಲಿಸುವವರ ವಿವರಗಳನ್ನು ಭರ್ತಿ ಮಾಡಿ.

pp03

ಹಂತ 6: ನಂತರ ಕೆಳಗಿನ ಭಾಗದ ಘೋಷಣೆಯಲ್ಲಿ ಐ ಅಗ್ರಿ ಎಂಬ ಚೆಕ್ ಬಾಕ್ಸ್ ಮೇಲೆ ಚೆಕ್ ಮಾಡಿ.

ಹಂತ 7: ನಂತರ ವೆರಿಫಿಕೇಶನ್ ಕೋಡನ್ನು ನೋಂದಣಿ ಮಾಡಿ ಅರ್ಜಿಯನ್ನು ಸಲ್ಲಿಸಿ.

pp01

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಅರ್ಜೆಗಳನ್ನು ಸಲ್ಲಿಸಿದ ನಂತರ ಜಿಲ್ಲಾ ಉಸ್ತುವಾರಿ ಸಚಿವರು ಪ್ರಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ಸಾವಿರ ಜನಸಂಖ್ಯೆಗಿಂತ ಕಡಿಮೆ ಅಥವಾ ಅದಕ್ಕೆ ಸಮನಾದ ಪ್ರತಿ ಗ್ರಾಮಕ್ಕೆ ಎರಡು ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತದೆ. ನೀವೇನಾದರೂ ಪ್ರಜಾಪ್ರತಿನಿಧಿಗಳಾಗಲು ಬಯಸಿದರೆ,  ಮೇಲಿನ ಹಂತಗಳನ್ನು ಅನುಸರಿಸಿಕೊಂಡು ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಇನ್ನು ಮುಂದೆ ಮೆಸೇಜ್ ಬೇಡ :

ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾದಾಗ, ಕಡ್ಡಾಯವಾಗಿ ಮೆಸೇಜನ್ನು ಕಳುಹಿಸಿ ನಂತರ ನಮಗೆ ಸರ್ಕಾರದ ವತಿಯಿಂದ ಸ್ಥಳ ದಿನಾಂಕ ಹಾಗೂ ಸಮಯದ ಮೆಸೇಜ್ ಬಂದ ನಂತರ ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿಯನ್ನು ಸಲ್ಲಿಸಬೇಕಿತ್ತು. ಈ ಮೆಸೇಜ್ ಕಳುಹಿಸುವ ಕ್ರಮದಿಂದಾಗಿ ಅದೆಷ್ಟೋ ಜನರಿಗೆ ಗೊಂದಲ ಉಂಟಾಗಿತ್ತು. ಏಕೆಂದರೆ ಕೆಲವರಿಗೆ ಸರ್ಕಾರದ ವತಿಯಿಂದ ಮೆಸೇಜ್ ಬರುತ್ತಿರಲಿಲ್ಲ. ಇನ್ನು ಕೆಲವರಿಗೆ ಮೆಸೇಜ್ ಮಾಡುವುದು ಹೇಗೆ ಎಂದೇ ತಿಳಿದಿರುತ್ತಿರಲಿಲ್ಲ. ಇಂತಹ ಕೆಲಸದಿಂದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ತಡವಾಗುತ್ತಿತ್ತು. ಆದರೆ ಇನ್ನು ಮುಂದೆ ಇಂತಹ ಮೆಸೇಜ್ ಗಳನ್ನು ಕಳುಹಿಸುವ ಅವಶ್ಯಕತೆ ಇಲ್ಲ. ಇಂತಹ ಗೊಂದಲಗಳನ್ನು ತಪ್ಪಿಸಿ ಸುಲಭವಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ನೆರವಾಗಲೆಂದು, ಎಸ್‌ಎಂಎಸ್‌ ಇಲ್ಲದೆ ನೇರವಾಗಿ ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ಇಂತಹ ಉತ್ತಮ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

Picsart 23 07 16 14 24 41 584 transformed 1

 ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

Leave a Reply

Your email address will not be published. Required fields are marked *

error: Content is protected !!