Home » ಸರ್ಕಾರಿ ಯೋಜನೆಗಳು » Gruhalakshmi – ಮೆಸೇಜ್ ಇನ್ನೂ ಬಂದಿಲ್ವಾ..?? ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸುವ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ – ತಪ್ಪದೇ ಓದಿ

Gruhalakshmi – ಮೆಸೇಜ್ ಇನ್ನೂ ಬಂದಿಲ್ವಾ..?? ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸುವ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ – ತಪ್ಪದೇ ಓದಿ

Picsart 23 07 22 15 51 35 552 scaled

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(Gruhalakshmi Scheme)ಗೆ ಸಂಬಂಧಪಟ್ಟಂತೆ ಪ್ರಶ್ನೆ ಉತ್ತರಗಳನ್ನು ನಿಮಗೆ ತಿಳಿಸಲಾಗುತ್ತದೆ. ಅಷ್ಟೇ ಅಲ್ಲದೆ ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಮಿತಿಯನ್ನು ರದ್ದು ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಹಲವಾರು ಜನರಿಗೆ ಗೊಂದಲಗಳಿವೆ. ಆ ಗೊಂದಲಗಳನ್ನು ಬಗೆಹರಿಸಿಕೊಳ್ಳಲು ಈ ಲೇಖನದ ಪ್ರಶ್ನೆ ಉತ್ತರಗಳು ಸಹಾಯ ಮಾಡುತ್ತವೆ. ಇವುಗಳ ಬಗ್ಗೆ ತಿಳಿದುಕೊಳ್ಳಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟ ಗೊಂದಲಗಳಿಗೆ ಇಲ್ಲಿವೆ ಉತ್ತರ :

ಗೃಹಲಕ್ಷ್ಮಿ ಯೋಜನೆ ಎಂದರೆ ಹಲವರಿಗೆ 2000 ತೆಗೆದುಕೊಳ್ಳುವ ಒಂದು ಯೋಜನೆ ಎಂದು ಅಷ್ಟೇ ತಿಳಿದಿರುತ್ತದೆ. ಆದರೆ ಆ ಯೋಜನೆಗೆ ನೊಂದಣಿಯನ್ನು ಮಾಡಿಕೊಳ್ಳುವ ಮುಂಚೆ ಏನೆಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಬೇಕು?, ನೋಂದಣಿಯನ್ನು ಹೇಗೆ ಮಾಡಿಕೊಳ್ಳಬೇಕು?, ನೋಂದಣಿಯನ್ನು ಮಾಡಿಕೊಂಡ ನಂತರ ಏನೆಲ್ಲ ಮಾಡಬೇಕು?, ಹೇಗೆ ಹಣ ಜಮಾ ಆಗುತ್ತದೆ, ಹೀಗೆ ಹತ್ತು ಹಲವಾರು ಪ್ರಶ್ನೆಗಳು ಜನಸಾಮಾನ್ಯರನ್ನು ಕಾಡುತ್ತಿರುತ್ತವೆ. ಬಹು ನಿರೀಕ್ಷಿತ ಹಾಗೂ ಕಾತುರದಿಂದ ಕಾಯುತ್ತಿರುವ ಗೃಹಲಕ್ಷ್ಮಿ ಯೋಜನೆಗೆ (GruhaLakshmi Scheme) ನೋಂದಣಿ ಮಾಡಿಕೊಳ್ಳುವ ಮಹಿಳೆಯರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆಗಳಾಗದಂತೆ ಕರ್ನಾಟಕ ಸರ್ಕಾರ (Karnataka Government) ಪ್ರಮುಖ ಮಾರ್ಗಸೂಚಿಗಳನ್ನು (Guidelines) ಬಿಡುಗಡೆ ಮಾಡಿದೆ. ಜೊತೆಗೆ ಹಲವಾರು ಪ್ರಶ್ನೆಗಳಿಗೆ ಉತ್ತರವನ್ನು ಕೂಡ ನೀಡಿದೆ, ಅವುಗಳನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗುತ್ತದೆ.

whatss
ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಮಿತಿ ರದ್ದು :

ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಶುರು ಮಾಡಿದ ಪ್ರಾರಂಭದ ದಿನಗಳಲ್ಲಿ, ದಿನಕ್ಕೆ ಒಂದು ಸರ್ಕಾರಿ ಕೇಂದ್ರದಲ್ಲಿ 60 ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗುವುದು ಎಂಬ ಮಿತಿ ಇತ್ತು. ಒಂದು ಅರ್ಜಿಗಳಿಗಿಂತ ಜಾಸ್ತಿ ಅರ್ಜಿಗಳನ್ನು ಒಂದು ಸರ್ಕಾರಿ ಕೇಂದ್ರಗಳಲ್ಲಿ ಸ್ವೀಕರಿಸಿದರೆ, ಗೃಹಲಕ್ಷ್ಮಿ ಯೋಜನೆಯ ನೋಂದಣಿಯ ಸಿಬ್ಬಂದಿಗಳಿಗೆ ಹೊರೆ ಹೆಚ್ಚಾಗುತ್ತದೆ ಎಂದು ಈ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಆದರೆ, ಒಂದು ಸರ್ಕಾರಿ ಕೇಂದ್ರದಲ್ಲಿ 60 ಕ್ಕಿಂತಲೂ ಹೆಚ್ಚಿನ ಮಹಿಳೆಯರು ಕ್ಯೂ ನಿಲ್ಲುತ್ತಿದ್ದರು. ಆದಕಾರಣ ಸರ್ಕಾರವು ಈ 60 ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗುವುದು ಎಂಬ ಮಿತಿಯನ್ನು ರದ್ದುಗೊಳಿಸಿದೆ. ಈಗ ಒಂದು ಸರ್ಕಾರಿ ಕೇಂದ್ರದಲ್ಲಿ ಎಷ್ಟು ಅರ್ಜಿಯನ್ನು ಬೇಕಾದರೂ ಸಲ್ಲಿಸುವ ಅವಕಾಶವಿದೆ. ಅದಕ್ಕೆ ಮಿತಿ ಇಲ್ಲ.
ಗೃಹಲಕ್ಷ್ಮಿ ಯೋಜನೆಯ ಪ್ರಶ್ನೆಗಳಿಗೆ ನಮ್ಮ ಉತ್ತರ :

ಗೃಹ ಲಕ್ಷ್ಮಿ ಯೋಜನೆ ಎಂದರೇನು?
“ಗೃಹಲಕ್ಷ್ಮಿ ಯೋಜನ” ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ ಮಾಸಿಕ ರೂ. 2000/- ಹಣ ವಿತರಣೆ ಮಾಡಲಾಗುತ್ತದೆ.ನಾನು ಈ ಯೋಜನೆಗೆ ಅರ್ಹಳೇ?
ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿದ ಮಹಿಳೆ ಅರ್ಹಳು.
ಮನೆಯ ಯಜಮಾನಿ ಯಾರು?
ರೇಷನ್‌ ಕಾರ್ಡ್‌’ನಲ್ಲಿ ನಮೂದಿಸಿರುವ ಮನೆಯ ಯಜಮಾನಿಯನ್ನು ‘ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಎಂದು ಪರಿಗಣಿಸಲಾಗುತ್ತದೆ.

ಪಡಿತರ ಚೀಟಿಯಲ್ಲಿ ಅತ್ತೆ ಯಾಜಮಾನಿಯಾಗಿದ್ದು, ಸದಸ್ಯರ ಪಟ್ಟಿಯಲ್ಲಿ ಸೊಸೆಯ ಹೆಸರಿದ್ದು, ಸೊಸೆಯನ್ನೇ ಫಲಾನುಭವಿಯನ್ನಾಗಿಸುವ ಸೌಲಭ್ಯವಿದೆಯೇ?
ಇಲ್ಲ, ಪಡಿತರ ಚೀಟಿಯಲ್ಲಿಯ(Ration card) ಯಜಮಾನಿಯೇ ಈ ಯೋಜನೆ ಫಲಾನುಭವಿಯಾಗಿರುತ್ತಾರೆ.

ಕುಟುಂಬದ ಯಜಮಾನಿಯು ಇತ್ತೀಚೆಗೆ ನಿಧನರಾದರೆ, ಈ ಸನ್ನಿವೇಶದಲ್ಲಿ ಏನು ಮಾಡಬಹುದು?
ಪಡಿತರ ಚೀಟಿಯಲ್ಲಿ ಅಗತ್ಯ ತಿದ್ದು ಪಡಿಯಾದ ನಂತರ ನೊಂದಾಯಿಸಬಹುದು. ಮೊದಲನೆಯದಾಗಿ ಮರಣ ಪತ್ರವನ್ನು ಮಾಡಿಸಬೇಕಾಗುತ್ತದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಕುಟುಂಬದ ಯಜಮಾನಿಯು ಮರಣ ಹೊಂದಿದಲ್ಲಿ ಮುಂದಿನ ಕ್ರಮವೇನು?
ಕುಟುಂಬದ ಯಜಮಾನಿಯು ಮರಣ ಹೊಂದಿದಲ್ಲಿ ಯೋಜನೆಯ ಸೌಲಭ್ಯ ಸ್ಥಗಿತಗೊಳಿಸಲಾಗುವುದು

ಕುಟುಂಬದ ಮುಖ್ಯಸ್ಥರು ಮೃತ ಪಟ್ಟರು ಸಹ ಪಡಿತರ ಚೀಟಿಯಿಂದ ಅವರ ಹೆಸರನ್ನು ತೆಗೆಯದಿರುವ ಪಡಿತರ ಚೀಟಿಗಳನ್ನು ಪರಿಗಣಿಸಲಾಗುತ್ತದೆಯೇ?
ನಿಮ್ಮ ಸಮೀಪದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಕಛೇರಿಯನ್ನು

ಸಂಪರ್ಕಿಸುವುದು.

ಈ ಯೋಜನೆಗೆ ನೋಂದಾಯಿಸುವುದು ಹೇಗೇ?
ಈ ಯೋಜನೆಯನ್ನು ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಿಬಿಎಂಪಿ ವಾರ್ಡ್ ಕಛೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಛೇರಿಗಳ ಮೂಲಕ ಉಚಿತವಾಗಿ ನೋಂದಾಯಿಸಬಹುದು. ಅಥವಾ ಸ್ಥಳೀಯ ಮಟ್ಟದಲ್ಲಿ ಸರ್ಕಾರದಿಂದ ನೇಮಕವಾದ ಪ್ರಜಾ ಪ್ರತಿನಿಧಿಗಳು ಮನೆಮನಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಕೊಳ್ಳುತ್ತಾರೆ.

ಈ ಯೋಜನೆಯ ಪ್ರಯೋಜನವನ್ನು ಸೇವಾ ಕೇಂದ್ರಗಳಿಗೆ ಹೋಗದೇ ಪಡೆಯಬಹುದೇ? 

 ಹೌದು, ಸ್ಥಳೀಯ ಮಟ್ಟದಲ್ಲಿ ಸರ್ಕಾರದಿಂದ ನೇಮಕಗೊಂಡ ಪ್ರಜಾಪ್ರತಿನಿಧಿಗಳು ಮನೆಮನೆಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಕೊಳ್ಳಲಿದ್ದಾರೆ.

ಈ ಯೋಜನೆ ಪಡೆಯಲು ಯಾವ ದಾಖಲೆಗಳನ್ನು ಸಲ್ಲಿಸಬೇಕು?
ರೇಷನ್ ಕಾರ್ಡ್ ಪ್ರತಿ, ಯಜಮಾನಿ ಮತ್ತು ಆಕೆಯ ಪತಿಯ ಆಧಾರ್ ಕಾರ್ಡ್‌ ಪ್ರತಿ ಮತ್ತು ಯೋಜನೆಯ ನಗದು ಸೌಲಭ್ಯ ಪಡೆಯಲು ಇಚ್ಛಿಸುವ ಬ್ಯಾಂಕ್‌ ಖಾತೆಯ ಪಾಸ್ ಬುಕ್ ಪ್ರತಿ ಆಗತ್ಯವಿದೆ.

ಯೋಜನೆಗೆ ನೋಂದಾಯಿಸುವಾಗ ಶುಲ್ಕ ಪಾವತಿಸಬೇಕೆ?
ಈ ಯೋಜನೆಯ ನೋಂದಣಿ ಸಂಪೂರ್ಣ ಉಚಿತ. (ಯಾವುದೇ ಕಾರಣಕ್ಕೂ ಯಾರಿಗೂ ಹಣ ನೀಡಬೇಡಿ).

ಈ ಯೋಜನೆಗೆ ನೋಂದಾಯಿಸಲು ಕೊನೆಯ ದಿನಾಂಕ ಯಾವಾಗ?
ಈ ಯೋಜನೆಗೆ ಯಾವುದೇ ಕೊನೆಯ ದಿನಾಂಕದ ಮಿತಿಯಿಲ್ಲ, ಯಾವುದೇ ಸಮಯದಲ್ಲಿ ಬೇಕಿದ್ದರೂ ನೋಂದಾಯಿಸಬಹುದು.

ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿ ಕಾಯುತ್ತಿರುವವರು ಅರ್ಹರೇ?
ಇಲ್ಲ, ಸದ್ಯದ ಮಾರ್ಗಸೂಚಿ ಪುಕಾರ ಅರ್ಜಿ ಸಲ್ಲಿಸಿ ಕಾಯುತ್ತಿರುವವರು ಅರ್ಹರಲ್ಲ.

tel share transformed
ಕುಟುಂಬದ ಮುಖ್ಯಸ್ಮರಿಗಾಗಿ ನಾವು ಈಗ ರೇಷನ್ ಕಾರ್ಡ್ ನಲ್ಲಿ ಬದಲಾವಣೆಗಳನ್ನು ಮಾಡಬಹುದೇ. (ಉದಾ: ಪತಿ ಕುಟುಂಬದ ಮುಖ್ಯಸ್ಥ)
ನಿಮ್ಮ ಸಮೀಪದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಕಛೇರಿಯನ್ನು
ಸಂಪರ್ಕಿಸುವುದು.ನೋಂದಣಿ ನಂತರ ನಾನು ಯಾವುದೇ ಸ್ವೀಕೃತಿಯನ್ನು ಪಡೆಯಬಹುದೇ?
ಹೌದು, ನೋಂದಣಿ ಸಮಯದಲ್ಲಿ ಮೆಸೇಜ್/ಎಸ್.ಎಂ.ಎಸ್ ಅನ್ನು ಫಲಾನುಭವಿಗಳಿಗೆ ನೀಡಲಾಗುತ್ತದೆ.
ಫಲಾನುಭವಿಗಳಿಗೆ ಹಣ ಹೇಗೆ ತಲುಪುತ್ತದೆ?
ಅರ್ಹ ಕುಟುಂಬದ ಯಜಮಾನಿಯ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (DBT) ಅಥವಾ ಆಧಾರ್ ಲಿಂಕ್ ಆಗದಿರುವ ಬ್ಯಾಂಕ್‌ ಖಾತೆಗೆ ಆರ್.ಟಿ.ಜಿ.ಎಸ್ (RTGS) ಮೂಲಕ ಮಾಸಿಕ ರೂ. 2000/- ವಿತರಿಸಲಾಗುತ್ತದೆ.
ಕುಟುಂಬದ ಯಜಮಾನಿ ಬೇರೆ ಸದಸ್ಯರ ಬ್ಯಾಂಕ್‌ ಖಾತೆ ನೀಡಬಹುದಾ?
ಇಲ್ಲ. ಕುಟುಂಬದ ಯಜಮಾನಿ ತಮ್ಮದೇ ಬ್ಯಾಂಕ್ ಖಾತೆಯನ್ನು ನೀಡಬೇಕು.

ಗಂಡ ಮತ್ತು ಹೆಂಡತಿ ಜಂಟಿ ಖಾತೆಯನ್ನು ಹೊಂದಿದ್ದರೆ, ಜಂಟಿ ಖಾತೆ ವಿವರಗಳನ್ನು ನೊಂದಾಯಿಸಲು ಒದಗಿಸಬಹುದೇ?
ಇಲ್ಲ, ಯೋಜನೆಯಡಿ ನೊಂದಾಯಿಸಿಕೊಳ್ಳುವವರು ಹೊಸ ಬ್ಯಾಂಕ್‌ ಖಾತೆಯನ್ನು ತೆರೆದು ಪಾಸ್ ಪುಸ್ತಕದ ಪ್ರತಿಯನ್ನು ಒದಗಿಸಬೇಕು.

ಮಹಿಳೆಯ ಪತಿ ಅಥವಾ ಪುತ್ರ ಜಿಎಸ್‌ಟಿ ಪಾವತಿದಾರ ಆಗಿದ್ದರೆ ಯೋಜನೆಯ ಹಣ  ಸಿಗುತ್ತದೆಯೇ?
ಇಲ್ಲ

ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯನ್ನು ಮಾಡಿಕೊಳ್ಳಲು ಮೆಸೇಜ್ ಕಳುಹಿಸಿದ ನಂತರ ಸರ್ಕಾರದಿಂದ ನಿಮಗೆ ಕೆಲವೊಮ್ಮೆ ಏಕೆ ಮೆಸೇಜ್ ಬರುವುದಿಲ್ಲ?
ನೋಂದಣಿ ಮಾಡಿಕೊಳ್ಳುವಾಗ ಬ್ಯಾಂಕ್‌ ಖಾತೆಗೆ ನೀಡಿರುವ ನಿಮ್ಮ ಮೊಬೈಲ್ ಸಂಖ್ಯೆ ಸರಿಯಾಗಿ ಇದೆಯೇ ಎಂಬುದನ್ನು ಪರೀಕ್ಷಿಸಿಕೊಳ್ಳಿ. ಇಲ್ಲದಿಲ್ಲ ಒಟಿಪಿ ಬರುತ್ತಿಲ್ಲ

ನಿಮ್ಮ ಬಳಿ ಬೇಸಿಕ್ ಮೊಬೈಲ್ ಸೆಟ್ ಇದ್ದರೆ ಆ ಫೋನ್‌ನಲ್ಲಿರುವ ಮೆಸೇಜ್ ಬ್ಯಾಕ್ಸ್ ಫುಲ್ ಆಗಿದ್ದರೆ ನೋಂದಣಿ ಬಗ್ಗೆ ಮಾಹಿತಿ ಅಥವಾ ಒಟಿಪಿ ಬರುವುದಿಲ್ಲ. ಹೀಗಾಗಿ ಮೆಸೇಜ್ ಬಾಕ್ಸ್ ಫುಲ್ ಆಗಿದ್ದರೆ ಹಳೆಯ ಮೆಸೇಜ್‌ಗಳನ್ನು ಡಿಲೀಟ್ ಮಾಡಿ. ನಿಮ್ಮ ಮೊಬೈಲ್‌ನಲ್ಲಿ ಇಂಟರ್‌ನೆಟ್ ಪ್ಯಾಕ್ ಇದೆಯೇ ಎಂಬುದನ್ನು ಮೊದಲ ಖಚಿತಪಡಿಸಿಕೊಳ್ಳಿ. ಒಂದು ವೇಳೆ ನೆಟ್ ಇಲ್ಲದಿದ್ದರೆ ರಿಚಾರ್ಜ್ ಮಾಡಿಸಿಕೊಳ್ಳಿ.

ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಯಲ್ಲಿ ನಿಮ್ಮ ಹೆಸರು ಬೇರೆ ಬೇರೆ ಇದ್ದರೆ ಹಣ ಬರುತ್ತದೆಯೇ?
ಇಲ್ಲ, ಒಂದು ವೇಳೆ ಹೆಸರುಗಳು ಬೇರೆ ಬೇರೆ ಇದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ರೂಪಾಯಿ ಬರುವುದಿಲ್ಲ.

ಗೃಹಲಕ್ಷ್ಮಿ ಯೋಜನೆಯ ನಂದಣಿಗೆ ಮೆಸೇಜ್ ಕಳುಹಿಸದಿದ್ದರೂ ಕೂಡ ನೊಂದಣಿಯನ್ನು ಮಾಡಿಕೊಳ್ಳಬಹುದೇ?
ಹೌದು, ನಿಮಗೆ ಒಂದು ವೇಳೆ ಮೆಸೇಜ್ ಕಳುಹಿಸಲು ಸಾಧ್ಯವಾಗದಿದ್ದರೆ ನೀವು ಗ್ರಾಮವನ್, ಬೆಂಗಳೂರು ಒನ್, ಬಾಪೂಜಿ ಸೇವಾ, ನಿಮ್ಮ ಹತ್ತಿರದಲ್ಲಿರುವ ಈ ಯಾವುದಾದರೂ ಒಂದು ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ನಾನು ರಾಷ್ಟ್ರೀಕೃತ / ಷೆಡ್ಯೂಲ್ಡ್ ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿದ್ದೇನೆ, ನಾನು ಗೃಹಲಕ್ಷ್ಮಿ ಯೋಜನೆಗೆ ಖಾತೆಯನ್ನು ಬಳಸಬಹುದೇ ?
ಹೌದು, ಬಳಸಬಹುದು.

ಮಗ/ಮಗಳು ತೆರಿಗೆ ಪಾವತಿದಾರನಾಗಿದ್ದರೆ ಅಥವಾ ಐಟಿ ರಿಟರ್ನ್ಸ್ ಸಲ್ಲಿಸಿದರೆ, ತಾಯಿ ಗೃಹಲಕ್ಷ್ಮಿ ಯೋಜನೆಗೆ ಅರ್ಹರಾಗುತ್ತಾರೆಯೇ?
ಹೌದು ಅರ್ಹರಾಗುತ್ತಾರೆ.

ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ ಏನು ಮಾಡಲಾಗುವುದು?
ಈಗಾಗಲೇ ಪಾವತಿಸಲಾಗಿರುವ ಹಣವನ್ನು ಫಲಾನುಭವಿಗಳಿಂದ ವಸೂಲು ಮಾಡಲಾಗುವುದು. ಮತ್ತು ಅಂತಹವರ ವಿರುದ್ಧ ಕಾನೂನು ರೀತಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಆಧಾರ್ ಮತ್ತು ಪಡಿತರ ಚೀಟಿಯಲ್ಲಿ ಹೆಸರು/ವಿಳಾಸ ಹೊಂದಿಕೆಯಾಗದಿದ್ದರೆ ಅಂತಹವರನ್ನು ನೊಂದಣಿ ಮಾಡಿಕೊಳ್ಳಲಾಗುತ್ತದೆಯೇ?
ನೊಂದಣಿ ಪ್ರಕ್ರಿಯೆಗೊಳಿಸಲಾಗುತ್ತದೆಯೇ?

ಈಗಾಗಲೇ ಆಧಾರ್‌ ಮತ್ತು ಪಡಿತರ ಚೀಟಿ ಜೋಡಣೆಯಾಗಿರುವುದರಿಂದ ಈ ಪ್ರಶ್ನೆ
ಉದ್ಭವಿಸುವುದಿಲ್ಲ.

ನನ್ನ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿತ್ತು. ಆದರೆ ಪುಸ್ತುತ ಸದರಿ ಮೊಬೈಲ್ ಸಂಖ್ಯೆ ನಿಷ್ಕ್ರಿಯಗೊಂಡಿದೆ. ನಾನು ಹೇಗೆ ನೋಂದಾಯಿಸಬೇಕು?
ಆಧಾರ್ ಸಂಖ್ಯೆಗೆ ಜೋಡಣೆಯಾಗಿದ್ದ ಮೊಬೈಲ್ ಸಂಖ್ಯೆಯು ಪ್ರಸ್ತುತ ನಿಷ್ಕ್ರಿಯಗೊಂಡಿದ್ದಲ್ಲಿ ನೀವು ನೋಂದಣಿ ಕೇಂದ್ರಗಳಲ್ಲಿರುವ ಬಯೋಮೆಟ್ರಿಕ್‌ ಉಪಕರಣಕ್ಕೆ ನಿಮ್ಮ ಬೆರಳಚ್ಚು ನೀಡಿ, ಆಧಾರ್ ದೃಢೀಕರಣ ಮಾಡಬಹುದು.

Picsart 23 07 16 14 24 41 584 transformed 1
ಯೋಜನೆಯಡಿ ನೊಂದಾಯಿಸಿಕೊಳ್ಳಲು ಗಂಡನ ವಿವರಗಳು ಕಡ್ಡಾಯವಾಗಿದೆ. ವಿಚ್ಛೇದನದ ಪ್ರಕರಣವು ಬಾಕಿ ಉಳಿದಿದ್ದರೆ ಅಥವಾ ನ್ಯಾಯಾಲಯದಲ್ಲಿ ಪ್ರಕ್ರಿಯೆಯಲ್ಲಿದ್ದರೆ ಏನು ಮಾಡಬೇಕು?
ಕಾನೂನು ರೀತಿ ವಿಚ್ಚೇದನ ಆಗಿದ್ದಲ್ಲಿ ಗಂಡನ ವಿವರಗಳನ್ನು ಸಲ್ಲಿಸುವ ಅಗತ್ಯವಿಲ್ಲ.ನಾಗರಿಕರು ಆಸ್ತಿ ತೆರಿಗೆಯನ್ನು ಪಾವತಿಸುತ್ತಿದ್ದರೆ ಅವರು ನೊಂದಾಯಿಸಿಕೊಳ್ಳಲು ಅರ್ಹರಾಗುತ್ತಾರೆಯೇ?
ಹೌದು, ಅರ್ಹರಿರುತ್ತಾರೆ.
ನಾಗರಿಕರು ಸರ್ಕಾರಿ ಮತ್ತು ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡಿದ್ದರೆ, ಈಗ ಅವರು ನಿವೃತ್ತರಾಗಿದ್ದರೆ ಮತ್ತು ಪಿಂಚಣಿ ನೊಂದಾಯಿಸಿಕೊಳ್ಳಲು ಅರ್ಹರಾಗುತ್ತಾರೆಯೇ?
ಪಡೆಯುತ್ತಿರುವವರು ಯೋಜನಗೆ ಅವರು ಯಾವುದೇ ಆದಾಯ ತೆರಿಗೆಯನ್ನು ಪಾವತಿಸದಿದ್ದರೆ ಅರ್ಹರಾಗುತ್ತಾರೆ.
ಒಂದಕ್ಕಿಂತ ಹೆಚ್ಚು ಕುಟುಂಬದ ಮುಖ್ಯಸ್ಮರಿರುವ ಪಡಿತರ ಚೀಟಿಗಳು ಯೋಜನೆಗೆ ಪರಿಗಣಿಸಲಾಗುತ್ತದೆಯೇ?
ನಿಮ್ಮ ಸಮೀಪದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಛೇರಿಯನ್ನು ಸಂಪರ್ಕಿಸುವುದು.

ಕುಟುಂಬದ ಮುಖ್ಯಸ್ಮರ ಆಧಾರ್ ಅನ್ನು ನವೀಕರಿಸದ ಮತ್ತು ಆಧಾರ್ ನೊಂದಿಗೆ ಜೋಡಣೆ ಮಾಡಿರದ ಪಡಿತರ ಚೀಟಿಗಳನ್ನು ಯೋಜನೆಗೆ ಪರಿಗಣಿಸಲಾಗುತ್ತದೆಯೇ?
ನಿಮ್ಮ ಸಮೀಪದ ಆಧಾರ್ ಕೇಂದ್ರಕ್ಕೆ ಸಂಪರ್ಕಿಸಿ, ಆಧಾರ್ ಅನ್ನು ನವೀಕರಿಸಿಕೊಳ್ಳುವುದು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಛೇರಿಯನ್ನು ಸಂಪರ್ಕಿಸಿ, ಪಡಿತರ ಚೀಟಿಗೆ

ಜೋಡಣೆ ಮಾಡಿಸಿಕೊಳ್ಳುವುದು.

ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರು ಮಹಿಳೆಯಾಗಿದ್ದು ಆಧಾರ್ ಕಾರ್ಡ್ ನಲ್ಲಿ ಪುರುಷ/ತೃತೀಯ ಲಿಂಗಿಯಾಗಿರುವ ಪ್ರಕರಣಗಳನ್ನು ಪರಿಗಣಿಸಲಾಗುತ್ತದೆಯೇ?
ಯೋಜನೆಗೆ ನಿಮ್ಮ ಸಮೀಪದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಛೇರಿಯನ್ನು ಸಂಪರ್ಕಿಸುವುದು.

ತಡೆಹಿಡಿಯಲಾದ ರದ್ದುಗೊಳಿಸಿದ ಪಡಿತರ ಚೀಟಿಯನ್ನು ಪರಿಗಣಿಸಲಾಗುತ್ತದೆಯೇ?
ಈ ಯೋಜನೆಗೆ ಅರ್ಹರಿರುವುದಿಲ್ಲ.

ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆಯಾಗಿದ್ದು, ಪಡಿತರ ಚೀಟಿಯಲ್ಲಿ ಲಿಂಗ ಪುರುಷ ಎಂದು ನಮೂದಾಗಿದ್ದರೆ ಯೋಜನೆಗೆ ಪರಿಗಣಿಸಲಾಗುತ್ತದೆಯೇ?
ನಿಮ್ಮ ಸಮೀಪದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಕಛೇರಿಯನ್ನು ಸಂಪರ್ಕಿಸಲು ಕೋರಿದೆ.

ನನ್ನ ನೋಂದಣಿಗಾಗಿ ನಿಗದಿಪಡಿಸಿದ ದಿನಾಂಕ ಮತ್ತು ಸಮಯವನ್ನು ನಾನು ಎಲ್ಲಿ ತಿಳಿದುಕೊಳ್ಳಬಹುದು?
ನಿಮ್ಮ ಪಡಿತರ ಚೀಟಿಯೊಂದಿಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಗೆ ನೋಂದಣಿ

ವೇಳಾ ಪಟ್ಟಿಯ ಸಂದೇಶ ಕಳುಹಿಸಲಾಗಿದೆ. ಅಲ್ಲದೇ, ನಿಮ್ಮ ನೋಂದಣಿ ವೇಳಾ ಪಟ್ಟಿಯನ್ನು ನೀವು ಈ ಕೆಳಗಿನ ವಿಧಾನಗಳಲ್ಲಿ ಪರಿಶೀಲಿಸಬಹುದು (ಎ) ನಿಮ್ಮ ವೇಳಾಪಟ್ಟಿಯನ್ನು ತಿಳಿಯಲು 1902 ಗೆ ಕರೆ ಮಾಡಿ ಹಾಗೂ ನೀಡಲಾಗುವ ಸೂಚನೆಗಳನ್ನು ಅನುಸರಿಸಿ. (ಬಿ) ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು 8147-500-500 ಗೆ SMS ಮಾಡಿ ಮತ್ತು
ನಿಗದಿಪಡಿಸಲಾದ ದಿನಾಂಕ ಮತ್ತು ಸಮಯದ ಮಾಹಿತಿ ಪಡೆಯಿರಿ.
(ಸಿ) ಪಡಿತರ ಚೀಟಿ ಸಂಖ್ಯೆಯನ್ನು ಬಳಸಿ, ಸೇವಾಸಿಂಧು ಪೋರ್ಟಲ್ ನಲ್ಲಿ ಹುಡುಕಿ.

ನನಗೆ ನಿಗದಿಪಡಿಸಲಾದ ದಿನಾಂಕ ಮತ್ತು ಸಮಯದಲ್ಲಿ ನೋಂದಾಯಿಸುವುದು ಅಗತ್ಯವೇ?
ಹೌದು, ಸುಗಮ ನೋಂದಣಿಯನ್ನು ಖಚಿತಪಡಿಸಿಕೊಳ್ಳಲು ವೇಳಾಪಟ್ಟಿಯನ್ನು ಮಾಡಲಾಗಿದೆ. ದಯವಿಟ್ಟು ನಿಗದಿಪಡಿಸಿದ ವೇಳಾ ಪಟ್ಟಿಯನ್ನು ಅನುಸರಿಸಿ,

ಸೂಚಿಸಿದ ದಿನಾಂಕ ಮತ್ತು ಸಮಯದಂದು ನಿಗದಿಪಡಿಸಿದ ಕೇಂದ್ರಕ್ಕೆ ಭೇಟಿ ನೀಡಲು ನನಗೆ ಸಾಧ್ಯವಾಗಲಿಲ್ಲ. ನಾನು ಹೇಗೆ ನೋಂದಾಯಿಸಿಕೊಳ್ಳಬಹುದು?
ನಿಮಗೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಲ್ಲಿ ನೋಂದಾಯಿಸಲು ಸಾಧ್ಯವಾಗದಿದ್ದಲ್ಲಿ ನೀವು ಯಾವುದೇ ಕೆಲಸದ ದಿನದಂದು ಸಂಜೆ 5 ಗಂಟೆಯ ನಂತರ ನಿಮಗೆ ನಿಗದಿಪಡಿಸಿದ ಕೇಂದ್ರಕ್ಕೆ ಭೇಟಿ ನೀಡಬೇಕು ಮತ್ತು ನೋಂದಾಯಿಸಿಕೊಳ್ಳಬೇಕು.

ನಾನು ಬೇರೆ ಗ್ರಾಮ / ಪಟ್ಟಣ / ತಾಲೂಕು ಅಥವಾ ಜಿಲ್ಲೆಗೆ ಸ್ಥಳಾಂತರಗೊಂಡಿದ್ದೇನೆ ಆದರೆ ನಾನು ಪಡಿತರ ಚೀಟಿಯಲ್ಲಿ ವಿಳಾಸವನ್ನು ನವೀಕರಿಸಿಲ್ಲ.
(ಎ) ನನ್ನ ನೋಂದಣಿಯನ್ನು ಎಲ್ಲಿ ನಿಗದಿಪಡಿಸಲಾಗುವುದು?

ನಿಮ್ಮ ನೋಂದಣಿ ವೇಳಾಪಟ್ಟಿಯು ನಿಮ್ಮ ಪಡಿತರ ಚೀಟಿಯ ವಿಳಾಸಕ್ಕೆ ಸಮೀಪವಿರುವ ಕೇಂದ್ರದಲ್ಲಿರುತ್ತದೆ. (ಹತ್ತಿರದ ಗ್ರಾಮ ಪಂಚಾಯತ್ ಕಛೇರಿ/ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್/ನಗರ ಸ್ಥಳೀಯ ಸಂಸ್ಥೆಯ ಆಡಳಿತ ಕಛೇರಿ)
(ಬಿ) ನನ್ನ ಪ್ರಸ್ತುತ ವಸತಿ ಸ್ಥಳದಲ್ಲಿ ನೋಂದಾಯಿಸಲು ಸಾಧ್ಯವೇ?
ಹೌದು, ವೇಳಾಪಟ್ಟಿಯ ಮೂಲಕ ದಾಖಲಾತಿಗಳು ಪೂರ್ಣಗೊಂಡ ನಂತರವೇ ಈ ಅವಕಾಶವನ್ನು ನೀಡಲಾಗುತ್ತದೆ.ಈ ಸೌಲಭ್ಯವು ಆಗಸ್ಟ್ 2023 ರ 2ನೇ ವಾರದಲ್ಲಿ ಲಭ್ಯವಾಗಲಿದೆ)

(ಸಿ) ಪಡಿತರ ಚೀಟಿಯಲ್ಲಿ ನನ್ನ ಪಸ್ತುತ ವಿಳಾಸವನ್ನು ನವೀಕರಿಸಲು ನನಗೆ ಅವಕಾಶವಿದೆಯೇ?
ದಯವಿಟ್ಟು ನಿಮ್ಮ ಸಮೀಪದ ಆಹಾರ ಮತ್ತು ನಾಗರಿಕ ಸರಬರಾಜು
ಇಲಾಖೆಯ ಕಛೇರಿಗೆ ಭೇಟಿ ನೀಡಿ.

whatss

(ಡಿ) ನಾನು ಈಗ ಪಡಿತರ ಚೀಟಿಯಲ್ಲಿ ನನ್ನ ಪ್ರಸ್ತುತ ವಿಳಾಸವನ್ನು ನವೀಕರಿಸಿದರೆ, ನನ್ನ ನೋಂದಣಿ ಕೇಂದ್ರವು ಸ್ವಯಂಚಾಲಿತವಾಗಿ ಹೊಸ ವಿಳಾಸಕ್ಕೆ ಬದಲಾಗುತ್ತದೆಯೆ?
ಇಲ್ಲ, ಆಗಸ್ಟ್ 2 ನೇ ವಾರದ ನಂತರ ನಿಮಗೆ ಹತ್ತಿರವಿರುವ ಯಾವುದೇ ಕೇಂದ್ರದಲ್ಲಿ ದಾಖಲಾಗಲು ನಿಮಗೆ ಆಯ್ಕೆಯನ್ನು ನೀಡಲಾಗುತ್ತದೆ.

ನನ್ನ ಪಡಿತರ ಚೀಟಿಗಾಗಿ ನಾನು ವೇಳಾಪಟ್ಟಿಯನ್ನು ಹುಡುಕಿದಾಗ ನನ್ನ ಪಡಿತರ ಚೀಟಿಯನ್ನು ತಡೆಹಿಡಿಯಲಾಗಿದೆ/ರದ್ದುಗೊಂಡಿದೆ ಎಂದು ತೋರಿಸುತ್ತದೆ. ಗೃಹಲಕ್ಷ್ಮಿ ಯೋಜನೆಗೆ ದಾಖಲಾಗಲು ನಾನು ಅರ್ಹಳೇ?
ಇಲ್ಲ, ಸಕ್ರಿಯ ಪಡಿತರ ಚೀಟಿಗಳ ಯಜಮಾನಿ ಮಾತ್ರ ನೋಂದಣಿಗೆ ಅರ್ಹರು.

ನಾನು ಯಾವುದೇ ನೋಂದಣಿ ವೇಳಾಪಟ್ಟಿಯನ್ನು ಸ್ವೀಕರಿಸಿಲ್ಲ. ಆದರೆ 1 ಆಗಸ್ಟ್ 2023 ರ ನಂತರ ಪರಿಶೀಲಿಸಲು ನನಗೆ ತಿಳಿಸಲಾಗಿದೆ. ಅದು ಏಕೆ?
ನೋಂದಣಿಗಾಗಿ ಪಡಿತರ ಚೀಟಿಗಳನ್ನು Random ಆಗಿ (ಯಾದೃಚ್ಛಿಕವಾಗಿ) ಅವರಿಗೆ ಹತ್ತಿರವಿರುವ ಕೇಂದ್ರಕ್ಕೆ ನಿಗದಿಪಡಿಸಲಾಗಿದೆ. ಇದನ್ನು ವಿವಿಧ ಹಂತಗಳಲ್ಲಿ ಮಾಡಲಾಗುತ್ತಿದೆ. ಆದ್ದರಿಂದ, ಮುಂದಿನ ಸುತ್ತಿನ ಹಂಚಿಕೆಯಲ್ಲಿ ನಿಯೋಜಿಸಬೇಕಾದ ಪಡಿತರ ಚೀಟಿಗಳನ್ನು 1 ಆಗಸ್ಟ್ 2023 ರ ನಂತರ ಪರಿಶೀಲಿಸಲು ತಿಳಿಸಲಾಗಿದೆ.

ನಾನು ಸಕ್ರಿಯ ಪಡಿತರ ಚೀಟಿಯನ್ನು ಹೊಂದಿದ್ದೇನೆ ಆದರೆ ಪುರುಷ ಸದಸ್ಯರು ಕುಟುಂಬದ ಮುಖ್ಯಸ್ಥರಾಗಿದ್ದಾರೆ. ನಾನು ಗೃಹಲಕ್ಷ್ಮಿ ಯೋಜನೆಗೆ ಅರ್ಹಳೇ?
ಇಲ್ಲ, ಪಡಿತರ ಚೀಟಿಯಲ್ಲಿ ಯಜಮಾನಿ ಎಂದು ನಮೂದಿಸಿದವರು ಮಾತ್ರ ಅರ್ಹರು.

ನಾನು ಸಕ್ರಿಯ ಪಡಿತರ ಚೀಟಿಯನ್ನು ಹೊಂದಿದ್ದೇನೆ. ಆದರೆ ಅದರಲ್ಲಿ ಯಾವುದೇ ಸದಸ್ಯರನ್ನು ಕುಟುಂಬದ ಯಜಮಾನಿ ಎಂದು ನಮೂದಿಸಿಲ್ಲ. ನಾನು ಗೃಹಲಕ್ಷ್ಮಿ ಯೋಜನೆಗೆ ಅರ್ಹಳೇ?
ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಮರ ಮಾಹಿತಿಯನ್ನು ನವೀಕರಿಸಿದ ನಂತರ ನೀವು ನೋಂದಾಯಿಸಬಹುದು.

ನಾನು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದೇನೆ ಆದರೆ ಇನ್ನೂ ನೀಡಿಲ್ಲ, ನಾನು ಯೋಜನೆಗೆ ನೋಂದಾಯಿಸಬಹುದೇ?
ನಿಮಗೆ ಪಡಿತರ ಚೀಟಿ ನೀಡಿದ ನಂತರ ನೀವು ನೋಂದಾಯಿಸಬಹುದು.

ನನ್ನ ಬಿಪಿಎಲ್/ಎಪಿಎಲ್ ಪಡಿತರ ಚೀಟಿ ರದ್ದುಗೊಂಡಿದೆ. ಆದರೆ ನನ್ನ ಕುಟುಂಬ ಕರ್ನಾಟಕದಲ್ಲಿ ವಾಸಿಸುತ್ತಿದೆ. ನಾನು ಯೋಜನೆಗೆ ನೋಂದಾಯಿಸಬಹುದೇ?
ಇಲ್ಲ, ಸಕ್ರಿಯ ಪಡಿತರ ಚೀಟಿಯಲ್ಲಿರುವ ಕುಟುಂಬದ ಮಹಿಳಾ ಯಜಮಾನಿ ಮಾತ್ರ ನೋಂದಾಯಿಸಬಹುದು.

ನಾನು ಮಹಿಳೆ ಮತ್ತು ಕುಟುಂಬದ ಯಜಮಾನಿ, ಆದರೆ ಆದಾಯ ತೆರಿಗೆ ಪಾವತಿಸುತ್ತಿದ್ದೇನೆ. ನಾನು ಯೋಜನೆಗೆ ಅರ್ಹಳೇ?
ಇಲ್ಲ, ಕುಟುಂಬದ ಯಜಮಾನಿ ಆದಾಯ ತೆರಿಗೆ ಪಾವತಿಸುತ್ತಿದ್ದಲ್ಲಿ ಯೋಜನೆಗೆ ಅರ್ಹರಲ್ಲ.

ನಾನು ಮಹಿಳೆ ಮತ್ತು ಕುಟುಂಬದ ಯಜಮಾನಿ, ಆದರೆ GST ರಿಟರ್ನ್ಸ್ ಸಲ್ಲಿಸುತ್ತಿದ್ದೇನೆ. ನಾನು ಯೋಜನೆಗೆ ಅರ್ಹಳೇ?
ಇಲ್ಲ, ಕುಟುಂಬದ ಯಜಮಾನಿ ಜಿ.ಎಸ್.ಟಿ ರಿಟರ್ನ್ಸ್ ಸಲ್ಲಿಸುತ್ತಿದ್ದಲ್ಲಿ ಯೋಜನೆಗೆ ಅರ್ಹರಲ್ಲ.

ನಾನು ಕುಟುಂಬದ ಮಹಿಳಾ ಯಜಮಾನಿ ಮತ್ತು ನನ್ನ ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ. ನಾನು ಯೋಜನೆಗೆ ಅರ್ಹಳೇ?
ಇಲ್ಲ, ಕುಟುಂಬದ ಯಜಮಾನಿ ಪತಿ ಆದಾಯ ತೆರಿಗೆ ಸಲ್ಲಿಸುತ್ತಿದ್ದಲ್ಲಿ ಯೋಜನೆಗೆ ಅರ್ಹರಲ್ಲ.

ನಾನು ಕುಟುಂಬದ ಮಹಿಳಾ ಯಜಮಾನಿ ಮತ್ತು ನನ್ನ ಪತಿ GST ರಿಟರ್ನ್ಸ್ ಸಲ್ಲಿಸುತ್ತಿದ್ದಾರೆ. ನಾನು ಯೋಜನೆಗೆ ಅರ್ಹಳೇ?
ಇಲ್ಲ, ಕುಟುಂಬದ ಯಜಮಾನಿ ಪತಿ ಜಿ.ಎಸ್.ಟಿ. ರಿಟರ್ನ್ ಸಲ್ಲಿಸುತ್ತಿದ್ದಲ್ಲಿ ಯೋಜನೆಗೆ ಅರ್ಹರಲ್ಲ.

ನನಗೆ ನೋಂದಣಿಗಾಗಿ ನಿಗದಿಪಡಿಸಿದ ಕೇಂದ್ರವು ನನ್ನ ಗ್ರಾಮ/ಗ್ರಾಮ ಪಂಚಾಯತ್‌ನ ಹೊರಗಿದೆ ಏಕೆ?
ಸಾಧ್ಯವಾದಷ್ಟು ನಿಮ್ಮ ಪಡಿತರ ಚೀಟಿಯ ವಿಳಾಸದನ್ವಯ ನೋಂದಣಿ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಅದು ಸಾಧ್ಯವಿಲ್ಲದ ಕಡೆ ನೀವು ಪಡಿತರ ಪಡೆಯುವ ನ್ಯಾಯಬೆಲೆ ಅಂಗಡಿ ವ್ಯಾಪ್ತಿಗೆ ಬರುವ ಇತರ ಗ್ರಾಮ ಪಂಚಾಯತಿಯ ನೋಂದಣಿ ಕೇಂದ್ರವನ್ನು ನಿಗದಿಪಡಿಸಲಾಗಿದೆ.

ನನಗೆ ನಿಯೋಜಿಸಲಾದ ಕೇಂದ್ರಕ್ಕೆ ಭೇಟಿ ನೀಡಲು ಅನಾರೋಗ್ಯದ ಕಾರಣದಿಂದ ಅಥವಾ ದೂರ ಇರುವುದರಿಂದ ನೋಂದಾಯಿಸಲು ಸಾಧ್ಯವಾಗುವುದಿಲ್ಲ, ನಾನು ಹೇಗೆ ನೋಂದಾಯಿಸಬಹುದು?
ಗ್ರಹಲಕ್ಷ್ಮಿ ಯೋಜನೆಯ ಸಂಪೂರ್ಣ ಯಶಸ್ವಿಗಾಗಿ ಸರ್ಕಾರವು ಅದೇ ಗ್ರಾಮದ ಪ್ರಜಾ ಪುತಿನಿಧಿಗಳನ್ನು ನೇಮಿಸುತ್ತಿದೆ, ಅವರು ನೋಂದಣಿಗಾಗಿ ಮನೆಗಳಿಗೆ ಭೇಟಿ ನೀಡುತ್ತಾರೆ. ನೀವು ಅವರ ಸಹಾಯದಿಂದ ನೋಂದಾಯಿಸಿಕೊಳ್ಳಬಹುದು

ಗೃಹಲಕ್ಷ್ಮಿ ಯೋಜನೆ ನೊಂದಣಿ ವೇಳಾಪಟ್ಟಿಯನ್ನು ನೋಡುವ ವಿಧಾನ :

ಹಂತ 1: ಮೊದಲಿಗೆ ಗೃಹಲಕ್ಷ್ಮಿ ಯೋಜನೆಯ ಸೇವಾ ಸಿಂಧುವಿನ ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ. 

https://sevasindhugs1.karnataka.gov.in/gl-stat-sp/Slot_Track

s1 1

ಹಂತ 2: ನಂತರ ನಿಮ್ಮ ಪಡಿತರ ಚೀಟಿ(Ration card)ಯ 12 ಸಂಖ್ಯೆಗಳನ್ನು ನಮೂದಿಸಬೇಕು. ನಂತರ ಕೆಳಗಿನ ಭಾಗದಲ್ಲಿ ಕ್ಯಾಪ್ಚವನ್ನು ಎಂಟರ್ ಮಾಡಿ, ಸ್ಥಿತಿಯನ್ನು ಪರಿಶೀಲಿಸಿ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

s2

ಹಂತ 4: ನಂತರ ಪುಟದಲ್ಲಿ, ಗೃಹಲಕ್ಷ್ಮಿ ಯೋಜನೆಗೆ ನೊಂದಣಿಯನ್ನು ಮಾಡಿಕೊಳ್ಳಲು ಸ್ಥಳ, ದಿನಾಂಕ ಹಾಗೂ ಸಮಯವನ್ನು ನೀಡಲಾಗಿರುತ್ತದೆ.

ಗೃಹಲಕ್ಷ್ಮಿ ಯೋಜನೆಯ ನೋಂದಣಿ ಮಾಡಿಕೊಳ್ಳಲು ಮಹಿಳೆಯರಿಗೆ ಯಾವುದೇ ಸಮಸ್ಯೆಗಳು ಆಗದಂತೆ ಇವಿಷ್ಟು ಪ್ರಶ್ನೆ ಉತ್ತರಗಳನ್ನು ಸರ್ಕಾರದಿಂದ ಒದಗಿಸಿದ್ದಾರೆ. ನಿಮಗೇನಾದರೂ ಇನ್ನೂ ಗೊಂದಲವಿದ್ದಲ್ಲಿ ಈ ಕೆಳಗಿನ ಸಂಖ್ಯೆಗೆ ಕಾಲ್ ಮಾಡುವ ಮೂಲಕ ಬಗೆಹರಿಸಿಕೊಳ್ಳಿ : 1902. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೂ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು. 

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

tel share transformed

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

About

Lingaraj Ramapur BCA, MCA, MA ( Journalism )

Leave a Reply

Your email address will not be published. Required fields are marked *