rain october 16th

ರಾಜ್ಯದ ಈ ಜಿಲ್ಲೆಗಳಲ್ಲಿಅಕ್ಟೋಬರ್ 16ರ ವರೆಗೆ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ!

Categories:
WhatsApp Group Telegram Group

ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಇಲ್ಲಿ ಗರಿಷ್ಠ ತಾಪಮಾನ 30°C ಮತ್ತು ಕನಿಷ್ಠ ತಾಪಮಾನ 20°C ಇರಬಹುದೆಂದು ನಿರೀಕ್ಷಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ರಾಜ್ಯದಲ್ಲಿ ‘ಯೆಲ್ಲೋ ಅಲರ್ಟ್’

ಮುಂದಿನ ಮೂರು ದಿನಗಳ ಕಾಲ (ಅಕ್ಟೋಬರ್ 16ರವರೆಗೆ) ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ, ಹವಾಮಾನ ಇಲಾಖೆಯು ಬೆಂಗಳೂರು, ಮೈಸೂರು ಸೇರಿದಂತೆ ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ. ನಾಳೆ (ಅಕ್ಟೋಬರ್ 14) ಸಹ ದಕ್ಷಿಣ ಮತ್ತು ಉತ್ತರ ಒಳನಾಡಿನ 25ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ.

ಅಕ್ಟೋಬರ್ 14ರ ಮಳೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ: ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ.

ಉತ್ತರ ಒಳನಾಡಿನಲ್ಲಿ (ಸಾಧಾರಣ ಮಳೆ/ಗುಡುಗು): ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳು.

ದಕ್ಷಿಣ ಒಳನಾಡಿನಲ್ಲಿ (ಭಾರೀ ಮಳೆ/ಗುಡುಗು): ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳು.

ಇತರೆ ಜಿಲ್ಲೆಗಳಲ್ಲಿ (ಗುಡುಗು ಸಹಿತ ಮಳೆ): ಬಳ್ಳಾರಿ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳು.

ಅಕ್ಟೋಬರ್ 15ರ ಮಳೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ: ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ.

ಉತ್ತರ ಒಳನಾಡಿನಲ್ಲಿ (ಗುಡುಗು ಸಹಿತ ಮಳೆ): ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳು.

ದಕ್ಷಿಣ ಒಳನಾಡಿನಲ್ಲಿ (ಭಾರೀ ಮಳೆ/ಗುಡುಗು): ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳು.

ಇತರೆ ಜಿಲ್ಲೆಗಳಲ್ಲಿ (ಗುಡುಗು ಸಹಿತ ಮಳೆ): ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳು.

ಅಕ್ಟೋಬರ್ 16ರ ಮಳೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ: ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ.

ಉತ್ತರ ಒಳನಾಡಿನಲ್ಲಿ (ಹಗುರದಿಂದ ಸಾಧಾರಣ ಮಳೆ/ಗುಡುಗು): ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳು.

ದಕ್ಷಿಣ ಒಳನಾಡಿನಲ್ಲಿ (ಭಾರೀ ಮಳೆ/ಗುಡುಗು): ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳು.

ಇತರೆ ಜಿಲ್ಲೆಗಳಲ್ಲಿ (ಬಿರುಗಾಳಿ/ಸಾಧಾರಣ ಮಳೆ/ಗುಡುಗು): ಬಳ್ಳಾರಿ, ಬೆಂಗಳೂರು, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳು.

ಅಕ್ಟೋಬರ್ 17, 18 ಮತ್ತು 19ರ ಮುನ್ಸೂಚನೆ

ಅಕ್ಟೋಬರ್ 17ರಂದು: ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ (ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ) ಮತ್ತು ದಕ್ಷಿಣ ಒಳನಾಡಿನ (ಬಳ್ಳಾರಿ, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ) ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಅಕ್ಟೋಬರ್ 18 ಮತ್ತು 19ರಂದು: ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ (ಬಾಗಲಕೋಟೆ, ಬೆಂಗಳೂರು, ಮೈಸೂರು, ಹಾಸನ, ಶಿವಮೊಗ್ಗ ಸೇರಿದಂತೆ) ಹಲವೆಡೆ ಹಗುರದಿಂದ ಸಾಧಾರಣ ಮಳೆ ಬೀಳುವ ನಿರೀಕ್ಷೆಯಿದೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories