ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿ ಮತ್ತು ಕಡಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮತ್ತು ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಎಲ್ಲ ಪುರಸಭೆಗಳಲ್ಲಿ ಬೀದಿ ನಾಯಿ ಕಚ್ಚಿ ಗಾಯಗೊಂಡವರಿಗೆ ಸರ್ಕಾರದಿಂದಲೇ ನೇರ ಪರಿಹಾರ ಧನ ನೀಡಲಾಗುವುದು. ಈ ಕುರಿತು ನವೆಂಬರ್ 19, 2025ರಂದು ಅಧಿಕೃತ ಆದೇಶ ಹೊರಡಿಸಲಾಗಿದ್ದು, ತಕ್ಷಣದಿಂದಲೇ ಜಾರಿಗೆ ಬಂದಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.……..
ಸಾಮಾನ್ಯ ಬೀದಿ ನಾಯಿ ಕಡಿತದಿಂದ ಗಾಯಗೊಂಡವರಿಗೆ ₹5,000 ಪರಿಹಾರ ನೀಡಲಾಗುತ್ತದೆ. ಇದರಲ್ಲಿ ₹3,500 ನೇರವಾಗಿ ಗಾಯಗೊಂಡ ವ್ಯಕ್ತಿಗೆ ಜಮಾ ಮಾಡಲಾಗುವುದು ಮತ್ತು ಉಳಿದ ₹1,500 ಅನ್ನು ರೇಬಿಸ್ ವಿರೋಧಿ ಚಿಕಿತ್ಸೆಗಾಗಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ಗೆ ವರ್ಗಾಯಿಸಲಾಗುವುದು. ಇದರಿಂದ ಗಾಯಗೊಂಡವರು ತಕ್ಷಣ ಚಿಕಿತ್ಸೆ ಪಡೆಯಲು ಸಹಾಯವಾಗಲಿದೆ.

ಅತ್ಯಂತ ಗಂಭೀರ ಪ್ರಕರಣಗಳಲ್ಲಿ, ಬೀದಿ ನಾಯಿ ದಾಳಿಯಿಂದ ವ್ಯಕ್ತಿ ಮೃತಪಟ್ಟರೆ ಅಥವಾ ರೇಬಿಸ್ (ಕುಕ್ಕುಜ್ವರ) ಕಾಯಿಲೆಗೆ ತುತ್ತಾದರೆ ಕುಟುಂಬಕ್ಕೆ ₹5 ಲಕ್ಷ ರೂಪಾಯಿ ಪರಿಹಾರ ಧನ ನೀಡಲಾಗುವುದು. ಈ ಪರಿಹಾರವು ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಎಲ್ಲ ಪುರಸಭೆಗಳಿಗೆ ಅನ್ವಯವಾಗುತ್ತದೆ. ಆದರೆ ರಾಜ್ಯದ ಇತರ ಜಿಲ್ಲೆಗಳಿಗೆ ಇದು ಇನ್ನೂ ವಿಸ್ತರಣೆಯಾಗಿಲ್ಲ.
ಪರಿಹಾರ ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ಪ್ರತಿ ಪಾಲಿಕೆ ವ್ಯಾಪ್ತಿಯಲ್ಲಿ ವಿಶೇಷ ಪರಿಶೀಲನಾ ಸಮಿತಿ ರಚನೆ ಮಾಡಲು ಸರ್ಕಾರ ಸೂಚನೆ ನೀಡಿದೆ. ಈ ಸಮಿತಿಯು ನಾಯಿ ಕಡಿತ ಪ್ರಕರಣಗಳನ್ನು ಪರಿಶೀಲಿಸಿ, ದಾಖಲೆಗಳನ್ನು ದೃಢಪಡಿಸಿ, ತಕ್ಷಣ ಪರಿಹಾರ ಧನವನ್ನು ಬಿಡುಗಡೆ ಮಾಡಲಿದೆ. ಗಾಯಗೊಂಡವರು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, FIR ಅಥವಾ MLC (ಮೆಡಿಕೋ-ಲೀಗಲ್ ಸರ್ಟಿಫಿಕೇಟ್) ಪಡೆದರೆ ಪರಿಹಾರ ಪ್ರಕ್ರಿಯೆ ವೇಗವಾಗಿ ನಡೆಯಲಿದೆ.
ಬೆಂಗಳೂರಿನಲ್ಲಿ ಈ ವರ್ಷ ಸಾವಿರಾರು ನಾಯಿ ಕಡಿತ ಪ್ರಕರಣಗಳು ವರದಿಯಾಗಿದ್ದು, ಮಕ್ಕಳು ಮತ್ತು ವೃದ್ಧರು ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಇದರಿಂದ ನಾಗರಿಕರು ಭಯವಿಲ್ಲದೆ ರಸ್ತೆಯಲ್ಲಿ ಓಡಾಡಬಹುದು ಮತ್ತು ತುರ್ತು ಸಂದರ್ಭದಲ್ಲಿ ಸರ್ಕಾರದ ಬೆಂಬಲ ಸಿಗಲಿದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ. ಪತ್ರಿಕೋದ್ಯಮದಲ್ಲಿ 6 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ವಿಶ್ಲೇಷಿಸಿ, ಜನಸಾಮಾನ್ಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಅದರ ಪ್ರಯೋಜನಗಳನ್ನು ಸುಲಭವಾಗಿ ಅರ್ಥೈಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು, ಪರೀಕ್ಷಾ ಫಲಿತಾಂಶಗಳು ಮತ್ತು ವಿಶ್ವಾಸಾರ್ಹ ದೈನಂದಿನ ಹವಾಮಾನ ವರದಿಯನ್ನು ಒದಗಿಸುತ್ತಾರೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಇವರ ಮುಖ್ಯ ಗುರಿಯಾಗಿದೆ.”


WhatsApp Group




