ಕರ್ನಾಟಕ ರಾಜ್ಯದಲ್ಲಿ ಈ ವರ್ಷದ ಮುಂಗಾರು ಮಳೆಯು ಉತ್ತಮವಾಗಿದ್ದು, ಬಹುತೇಕ ಪ್ರಮುಖ ಜಲಾಶಯಗಳು ಈಗಾಗಲೇ ತುಂಬಿ ತುಳುಕುತ್ತಿವೆ. ಈ ಹಿನ್ನೆಲೆಯಲ್ಲಿ, ನವೆಂಬರ್ 16ರ ದಿನಾಂಕದಂದು ರಾಜ್ಯದ ಪ್ರಮುಖ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಎಷ್ಟಿದೆ ಎಂಬ ಕುರಿತು ಇತ್ತೀಚಿನ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಈ ಬಾರಿಯ ಮಳೆಗಾಲದಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ನದಿ-ಕೊಳ್ಳಗಳು ಮತ್ತು ಕೆರೆಕಟ್ಟೆಗಳು ಭರ್ತಿಯಾಗಿದ್ದು, ಜಲಾಶಯಗಳು ತುಂಬಿರುವುದರಿಂದ ರೈತಾಪಿ ಸಮುದಾಯದಲ್ಲಿ ಸಂತಸ ಮನೆಮಾಡಿದೆ. ಆದರೆ, ಕಳೆದ ಕೆಲವು ದಿನಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಚಳಿಯ ವಾತಾವರಣ ಪ್ರಾರಂಭವಾಗಿದೆ. ಆದರೂ, ರಾಜ್ಯದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಮುಂದುವರಿದಿದೆ. ಮಳೆ ಕಡಿಮೆಯಾದ ಕಾರಣ ಜಲಾಶಯಗಳಿಗೆ ನೀರಿನ ಒಳಹರಿವಿನ ಪ್ರಮಾಣವೂ ಇಳಿಕೆಯಾಗಿದೆ.
ಪ್ರಮುಖ ಜಲಾಶಯಗಳ ಇಂದಿನ (ನವೆಂಬರ್ 16) ನೀರಿನ ಮಟ್ಟ
1. ಕೆಆರ್ಎಸ್ ಜಲಾಶಯ (ಕೃಷ್ಣರಾಜ ಸಾಗರ)
ಬೆಂಗಳೂರು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಜೀವನಾಡಿ ಎಂದೇ ಪ್ರಸಿದ್ಧವಾಗಿರುವ ಈ ಜಲಾಶಯದ ಪ್ರಸ್ತುತ ಮಾಹಿತಿ ಇಲ್ಲಿದೆ:
- ಗರಿಷ್ಠ ನೀರಿನ ಮಟ್ಟ: 124.80 ಅಡಿ
- ಒಟ್ಟು ಸಾಮರ್ಥ್ಯ: 49.45 ಟಿಎಂಸಿ (TMC)
- ಇಂದಿನ ನೀರಿನ ಮಟ್ಟ: 124.44 ಅಡಿ
- ಒಳಹರಿವು: 3,596 ಕ್ಯೂಸೆಕ್ (Cusec)
- ಹೊರಹರಿವು: 5,646 ಕ್ಯೂಸೆಕ್
2. ಕಬಿನಿ ಜಲಾಶಯ
- ಗರಿಷ್ಠ ನೀರಿನ ಮಟ್ಟ: 65 ಅಡಿ
- ಇಂದಿನ ನೀರಿನ ಮಟ್ಟ: 61.97 ಅಡಿ
- ಒಳಹರಿವು: 516 ಕ್ಯೂಸೆಕ್
- ಹೊರಹರಿವು: 2,250 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
- ಗರಿಷ್ಠ ನೀರಿನ ಮಟ್ಟ: 1,819 ಅಡಿ
- ಒಟ್ಟು ಸಾಮರ್ಥ್ಯ: 151.75 ಟಿಎಂಸಿ
- ಇಂದಿನ ನೀರಿನ ಮಟ್ಟ: 1812.50 ಅಡಿ
- ಒಳಹರಿವು: 2,080 ಕ್ಯೂಸೆಕ್
- ಹೊರಹರಿವು: 3842.30 ಕ್ಯೂಸೆಕ್
4. ಆಲಮಟ್ಟಿ ಜಲಾಶಯ
- ಗರಿಷ್ಠ ನೀರಿನ ಮಟ್ಟ: 186 ಅಡಿ
- ಒಟ್ಟು ಸಾಮರ್ಥ್ಯ: 71.54 ಟಿಎಂಸಿ
- ಇಂದಿನ ನೀರಿನ ಮಟ್ಟ: 183.8 ಅಡಿ
- ಒಳಹರಿವು: 425 ಕ್ಯೂಸೆಕ್
- ಹೊರಹರಿವು: 3,388 ಕ್ಯೂಸೆಕ್
ಈ ಬಾರಿ ಮುಂಗಾರು ಜೂನ್ ತಿಂಗಳ ಆರಂಭದಲ್ಲೇ ರಾಜ್ಯ ಪ್ರವೇಶಿಸಿತು. ತೀವ್ರ ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ಅವಾಂತರಗಳು ಸಂಭವಿಸಿದರೂ, ಪ್ರಮುಖ ಜಲಾಶಯಗಳು ಹಾಗೂ ಇತರ ಜಲಮೂಲಗಳು ಭರ್ತಿಯಾಗಿದ್ದು, ಮುಂದಿನ ವರ್ಷಕ್ಕೆ ನೀರಿನ ಕೊರತೆ ಉಂಟಾಗುವ ಆತಂಕ ದೂರವಾಗಿದೆ. ಸದ್ಯ ಮಳೆಯ ಅಬ್ಬರ ತಗ್ಗಿರುವುದರಿಂದ ಒಳಹರಿವಿನ ಪ್ರಮಾಣ ಕಡಿಮೆ ಆಗಿದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಲಿಂಗರಾಜ ರಾಮಪುರ (Lingaraj Ramapur) ಅವರು NeedsOfPublic.in ನ ಸಂಸ್ಥಾಪಕರು ಮತ್ತು ಪ್ರಧಾನ ಸಂಪಾದಕರಾಗಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಿಂದ ಐಟಿ (BCA, MCA) ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಸ್ನಾತಕೋತ್ತರ (M.A) ಪದವಿ ಪಡೆದಿರುವ ಇವರು ತಾಂತ್ರಿಕ ಮತ್ತು ಮಾಧ್ಯಮ ರಂಗದ ಅಪರೂಪದ ಸಂಗಮವಾಗಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮಕ್ಕೆ ಕಾಲಿಡುವ ಮುನ್ನ ಬೆಂಗಳೂರಿನ ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿಗಳಾದ Infosys ಮತ್ತು Concentrix ನಲ್ಲಿ ತಾಂತ್ರಿಕ ಹುದ್ದೆಗಳಲ್ಲಿ ಕೆಲಸ ಮಾಡಿದ ಜಾಗತಿಕ ಅನುಭವ ಇವರಿಗಿದೆ. 2017 ರಿಂದ ಮಾಧ್ಯಮ ರಂಗದಲ್ಲಿದ್ದು, ಕಳೆದ 9 ವರ್ಷಗಳಿಂದ ಡೇಟಾ-ಆಧಾರಿತ ವರದಿಗಾರಿಕೆ, ನಿಖರವಾದ ಫ್ಯಾಕ್ಟ್-ಚೆಕಿಂಗ್ ಮತ್ತು ಸಾರ್ವಜನಿಕರಿಗೆ ವಿಶ್ವಾಸಾರ್ಹ ಮಾಹಿತಿಯನ್ನು ತಲುಪಿಸುವ ಸಂಪಾದಕೀಯ ಜವಾಬ್ದಾರಿಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.


WhatsApp Group




