Karnataka Rain: ರಾಜ್ಯದ ಈ 14 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ.

rain alert today

ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಒಣಹವೆ ಮುಂದುವರೆದಿದೆ. ಈ ನಡುವೆಯೂ ಹವಾಮಾನ ಇಲಾಖೆ ರಾಜ್ಯದ ನಾಲ್ಕು ಜನಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Karnataka weather Updates : ಕರ್ನಾಟಕ ಹವಾಮಾನ ವರದಿ

ಕಳೆದ ಎರಡು ದಿನಗಳಲ್ಲಿ ಮಡಿಕೇರಿ ಮತ್ತು ಮಂಗಳೂರಿನ ಆಸುಪಾಸಿನಲ್ಲಿ ಮಳೆಯಾಗಿದ್ದು ಬಿಟ್ಟರೆ ಬೇರೆಲ್ಲಿಯೂ ಮಳೆಯಾಗಿಲ್ಲ. ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ ಸಾಮಾನ್ಯವಾಗಿ ಬಿಸಿಲಿನ ವಾತಾವರಣದ ನಂತರ ಮಳೆ ಬರುವುದು ವಾಡಿಕೆ, ಇಂದಿನಿಂದ 14 ಜಿಲ್ಲೆಗಳಲ್ಲಿ ಅಧಿಕ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಾವಣಗೆರೆ ಸೇರಿದಂತೆ ಹಾವೇರಿ, ಗದಗ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ,ಚಿತ್ರದುರ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬರುವ ಏಪ್ರಿಲ್ 9 ರಂದು ಮೈಸೂರು ಸೇರಿದಂತೆ ಮಂಡ್ಯ, ಚಿಕ್ಕಮಂಗಳೂರು, ಕೊಡಗು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು, ಗ್ರಾಮಾಂತರ ಬೆಂಗಳೂರು ನಗರ,  ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಹಗುರ ಮಳೆ ಆಗಲಿದೆ.

ಮತ್ತು ಮುಂದಿನ ಎರಡು ದಿನಗಳಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮತ್ತಷ್ಟು ಬಿಸಿ ಹೆಚ್ಚಾಗಲಿದೆ. ಮತ್ತು ಹಾವೇರಿ ಸೇರಿದಂತೆ ಗದಗ ಬಾಗಲಕೋಟೆಯ ಕಲಬುರ್ಗಿ ಕೊಪ್ಪಳ ರಾಯಚೂರು ಯಾದಗಿರಿ ವಿಜಯಪುರ ವಿಜಯನಗರ ಚಿತ್ರದುರ್ಗ ದಾವಣಗೆರೆ ಮತ್ತು ತುಮಕೂರು ಜಿಲ್ಲೆ ಗಳಲ್ಲಿ ಉಷ್ಣ ಅಲೆ ಬೀಸಲಿದೆ.

ಬೆಂಗಳೂರಿನಲ್ಲಿ ಮಳೆ ಯಾವಾಗ?

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ ಏಪ್ರಿಲ್ ಎರಡನೇ ವಾರದಲ್ಲಿ ಬೆಂಗಳೂರಿನಾದ್ಯಂತ ಅತ್ಯಂತ ಗುಡುಗು ಸಹಿತ ಮಳೆ ಆಗುವ ಮುನ್ಸೂಚನೆ ನೀಡಿದ್ದು. ತಿಂಗಳ ಅಂತ್ಯದವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಿದೆ.

ಬೆಂಗಳೂರಿನ ಐಎಂಡಿಯ ಹಿರಿಯ ವಿಜ್ಞಾನಿ ಎ.ಪ್ರಸಾದ್, “ಯುಗಾದಿ ಹಬ್ಬದ ದಿನದಿಂದ ಪ್ರತ್ಯೇಕ ಪ್ರದೇಶಗಳಲ್ಲಿ ಕೆಲವು ಲಘು ಮಳೆಯೊಂದಿಗೆ ಮಳೆ ಪ್ರಾರಂಭವಾಗಬಹುದು ಮತ್ತು ಹಬ್ಬದ ವಾರದ ದ್ವಿತೀಯಾರ್ಧದಲ್ಲಿ ಕ್ರಮೇಣ ಮಧ್ಯಮ ಮಳೆಯಾಗಬಹುದು” ಎಂದು ಹೇಳಿದರು.

2024 ರಲ್ಲಿ ಉತ್ತಮ ಮಳೆ

ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆಯಂತೆ ಮಳೆಯಾಗದೆ ಇರುವ ಕಾರಣ ತೀರ್ವ ಬರಗಾಲ ಉಂಟಾಯಿತು. ಆದರೆ 2024ರಲ್ಲಿ ಒಳ್ಳೆಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ಮಾರ್ಚ್ ಎಲ್ ನಿನೋ ಪ್ರಭಾವ ತಗ್ಗಿ ಮುಂಗಾರು ಉತ್ತಮವಾಗಲಿದೆ. ಹೌದು 2023 ಜನವರಿ 1 ರಿಂದ ಡಿಸೆಂಬರ್ 31ರವರೆಗೆ ರಾಜ್ಯದಲ್ಲಿ ವಾಡಿಕೆಯ ಪ್ರಕಾರ, 1153 ಮಿ.ಮೀ. ಮಳೆ ಸುರಿಯಬೇಕು. ಆದರೆ, ಕೇವಲ 872 ಮಿ.ಮೀ. ಮಾತ್ರ ಮಳೆಯಾಗಿದೆ. 19 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾದರೆ, 12 ಜಿಲ್ಲೆಗಧಿಳಲ್ಲಿಸಾಮಾನ್ಯ ಮಳೆ ಕೊರತೆ ಉಂಟಾಗಿದೆ. ಅತಿ ಹೆಚ್ಚು ಮಳೆಯಾಗುವ ಕರಾವಳಿಯಲ್ಲಿ ಶೇ. 19ರಷ್ಟು ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಶೇ.35ರಷ್ಟು ಮಳೆ ಕೊರತೆ ಉಂಟಾಗಿದೆ.

2023 ರಲ್ಲಿ ಬೆಂಗಳೂರಿನಲ್ಲಿ ಕೇವಲ 1020.2 ಮಿಮೀ ಮಳೆಯಾಗಿದೆ. ಇದು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕನಿಷ್ಠ ವಾರ್ಷಿಕ ಮಳೆ. ಜೂನ್ ಮತ್ತು ಸೆಪ್ಟೆಂಬರ್ ನಡುವೆ (ನೈಋತ್ಯ ಮಾನ್ಸೂನ್) 474.6 ಮಿಮೀ ಮಳೆ ದಾಖಲಾಗಿದ್ದರೆ, ಅಕ್ಟೋಬರ್ ಮತ್ತು ನವೆಂಬರ್ನಲ್ಲಿ (ಈಶಾನ್ಯ ಮಾನ್ಸೂನ್) 202.9 ಮಿಮೀ ಮಳೆ ದಾಖಲಾಗಿದೆ. ಇಡೀ ವರ್ಷ, ಬೆಂಗಳೂರು ನಗರದಲ್ಲಿ ಕೇವಲ 54 ದಿನ ಮಾತ್ರ ಮಳೆ ಬಿದ್ದಿತ್ತು ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!