ಇದೀಗ ಸಿಹಿ ಸುದ್ದಿ ತಿಳಿದು ಬಂದಿದೆ. ಕೃಷಿ ಇಲಾಖೆಯಿಂದ ಕೃಷಿ ನವೋದ್ಯಮ ಯೋಜನೆಯಡಿ ( Krushi Navodhyama Scheme ) ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆ ಅಡಿಯಲ್ಲಿ 50 ಲಕ್ಷದ ( 50 Lack ) ವರೆಗೆ ಸಹಾಯಧನ ಸಿಗಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕೃಷಿ ನವೋದ್ಯಮ ಯೋಜನೆ:
ಮುಖ್ಯವಾಗಿ ಈ ಕೃಷಿ ನವೋದ್ಯಮ ಯೋಜನೆಯ ಅಡಿಯಲ್ಲಿ ಆರ್ಥಿಕ ನೆರವು ನೀಡುವುದು ಎಂದು ತಿಳಿಸದ್ದಾರೆ. ಅದಕ್ಕಾಗಿ ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿಪರ ರೈತರು, ನವೋದ್ಯಮಿಗಳು ಮತ್ತು ಇತರೆ ಫಲಾನುಭವಿಗಳಿಗಾಗಿ ಕೃಷಿ ನವೋದ್ಯಮ ಯೋಜನೆಯಡಿ ಅವರಿಗೆ ಆರ್ಥಿಕ ಸೌಲಭ್ಯವನ್ನು ನೀಡುವುದಾಗಿದೆ.
ಈ ಯೋಜನೆಯ ಮುಖ್ಯ ಉದ್ದೇಶಗಳು ( Purpose ):
ಕೃಷಿಯಲ್ಲಿನ ಹೊಸ ತಾಂತ್ರಿಕತೆಗಳು ( Technical ) ಹಾಗೂ ನೂತನ ಪರಿಕಲ್ಪನೆಗಳಿಂದ ಕೃಷಿಯಲ್ಲಿ ನವೋದ್ಯಮಗಳನ್ನು ಪ್ರಾರಂಭಿಸಿ ಕೃಷಿ ವಲಯದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸುವುದಾಗಿದೆ.
ಹಾಗೂ ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿಪರ ರೈತರು ಕೃಷಿಯಲ್ಲಿ ನವೋದ್ಯಮ ಆರಂಭಿಸಿಸಲು ಸಹಾಯ ನೀಡಿ ಗ್ರಾಮೀಣ ಭಾಗದಲ್ಲಿ ಉದ್ಯೋಗವನ್ನು ಪಡೆದುಕೊಳ್ಳುವ ಉದ್ದೇಶವಾಗಿದೆ.
ಕೃಷಿ ವಿಶ್ವ ವಿದ್ಯಾಲಯಗಳಲ್ಲಿ ಹಾಗೂ ಇತರ ಸಂಶೋದನಾ ಸಂಸ್ಥೆಗಳಲ್ಲಿ ಅಭಿವೃದ್ಧಿಪಡಿಸಲಾದ ನೂತನ ವಾಣಿಜ್ಯಕರಣವನ್ನು ಉತ್ತೇಜಿಸುವುದು ಈ ಒಂದು ಕೃಷಿ ನವೊದ್ಯಮ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಕೃಷಿ ನವೋದ್ಯಮಗಳಿಗೆ 50 ಲಕ್ಷದರೆಗೆ ಸಹಾಯಧನ (Subsidy):
ಹೊಸ ಕೃಷಿ ನವೋದ್ಯಮಿಗಳಿಗೆ ಅನುಮೋದಿತ ಯೋಜನಾ ವರದಿಯ ಶೇ. 50 ರಷ್ಟು ಸಹಾಯಧನವನ್ನು ಕನಿಷ್ಠ ರೂ 5.0 ಲಕ್ಷದಿಂದ ಗರಿಷ್ಠ ರೂ 20.0 ಲಕ್ಷಗಳವರೆಗೆ ಬ್ಯಾಂಕ ಮುಖಾಂತರ ಸಾಲ(loan)ದ ನೀಡಲಾಗುವುದು.
ಈಗಾಗಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆ ಹಾಗೂ ಉನ್ನತೀಕರಣಕ್ಕಾಗಿ ಯೋಜನಾ ವರದಿಯ ಶೇ. 50 ರಷ್ಟು ಸಹಾಯಧನವನ್ನು ಒದಗಿಸಲಾಗುತ್ತದೆ.
ಕನಿಷ್ಠ ರೂ 20.0 ಲಕ್ಷದಿಂದ ಗರಿಷ್ಠ ರೂ 50.0 ಲಕ್ಷಗಳವರೆಗೆ. ಆಯ್ಕೆಯಾದ ನವೋದ್ಯಮಿಗಳ ಸಾಮಥ್ರ್ಯಾಭಿವೃದ್ಧಿಗೆ ಕೃಷಿ ವಿಶ್ವವಿದ್ಯಾಲಯ, ಐಸಿಎಆರ್ ( ICAR ) ಹಾಗೂ ಇತರೆ ಸಂಶೋಧನಾ ಸಂಸ್ಥೆಗಳ ಮೂಲಕ ತರಬೇತಿಗಳನ್ನು ನೀಡಲಾಗುತ್ತದೆ.
ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ?
ಕೃಷಿ ಇಲಾಖೆಯ ವತಿಯಿಂದ ಅಭಿವೃದ್ಧಿಪಡಿಸಲಾದ ಕಿಸಾನ ವೆಬ್ ಸೈಟ್ ( Kisan website ) ಭೇಟಿ ನೀಡಿ: https://www.mofpi.gov.in/pmfme/ ಈ ಜಾಲತಾಣದ ಪುಟದ ಮುಖಾಂತರ ಅರ್ಜಿಗಳನ್ನು ಆನಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಯಾವುದೇ ಮಾಹಿತಿಗಾಗಿ :
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- SC-ST ಮಹಿಳೆಯರಿಗೆ 25 ಸಾವಿರ ರೂ. ಸಾಲ & ಸಬ್ಸಿಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ
- ವಸತಿ ಸಹಿತ ಉಚಿತ ಡ್ರೈವಿಂಗ್ ತರಬೇತಿಗೆ ಅರ್ಜಿ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ!
- ಕೇವಲ 1500 ರೂ ಹೂಡಿಕೆ ಮಾಡಿದ್ರೆ ಸಿಗಲಿದೆ ಬರೋಬ್ಬರಿ 35 ಲಕ್ಷ ರೂ, ಇಲ್ಲಿದೆ ಮಾಹಿತಿ.
- 4ನೇ ಕಂತಿನ ಗೃಹಲಕ್ಷ್ಮಿ 2000/- ರೂ ಈ ಜಿಲ್ಲೆಯ ಮಹಿಳೆಯರ ಖಾತೆಗೆ ಜಮಾ, ಡಿಬಿಟಿ ಚೆಕ್ ಮಾಡಿ
- ಏರ್ಟೆಲ್ ಗ್ರಾಹಕರೇ ಗಮನಿಸಿ, ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ! ಬರೀ 5 ರೂಪಾಯಿ ಅಷ್ಟೇ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group





