ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನದ ವೇಳೆ..? ಜ್ಯೋತಿಯ ಮಹತ್ವ, ಸ್ಪಷ್ಟ ಮಾಹಿತಿ ಇಲ್ಲಿದೆ

jyothi

WhatsApp Group Telegram Group

ಸೂರ್ಯನು ಮಕರ ರಾಶಿಯನ್ನು ( Makara Rashi ) ಪ್ರವೇಶಿಸಿದಾಗ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿಯನ್ನು ದೇಶದ ವಿವಿಧ ರಾಜ್ಯಗಳಲ್ಲಿ ಒಂದೊಂದು ವಿಧವಾಗಿ ಆಚರಣೆ ಮಾಡಲಾಗುತ್ತದೆ. ಉತ್ತರಾಯಣ ( Uttarayana ), ಪೊಂಗಲ್ ( Pongal ), ಸಂಕ್ರಾಂತಿ ಮುಂತಾದ ಹಲವು ಹೆಸರುಗಳಿಂದ ಈ ಹಬ್ಬವನ್ನು ಕರೆಯಲಾಗುತ್ತದೆ.

ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ( South India ) ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ(sankranti Festival) ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ( Hindu Religion ) ಆಚರಿಸಲ್ಪಡುತ್ತದೆ. ಕರ್ನಾಟಕ ( Karnataka ), ಆಂಧ್ರ ಪ್ರದೇಶ ( Andra Pradesh ) ಮತ್ತು ತಮಿಳುನಾಡುಗಳ ( Thamil Nadu ) ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಮಕರ ಸಂಕ್ರಾಂತಿಯು ಹಿಂದೂ ಸುಗ್ಗಿಯ ಹಬ್ಬವಾಗಿದ್ದು ( Suggi Fest ), ಇದನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ಮುಖ್ಯವಾಗಿ ಸಂಕ್ರಾಂತಿ ಎಂದರೆ ಸೂರ್ಯನ ಚಲನೆ, ಮಕರ ಸಂಕ್ರಾಂತಿ ಎಂದರೆ ವರ್ಷದಲ್ಲಿ ಬರುವ ಎಲ್ಲಾ 12 ಸಂಕ್ರಾಂತಿಗಳಲ್ಲಿ ಪ್ರಮುಖವಾಗಿದೆ.

ಮಕರ ಸಂಕ್ರಾಂತಿ ಹಬ್ಬದ ಈ ವರ್ಷದ ದಿನಾಂಕ ( Date ) :

ಪ್ರತಿ ವರ್ಷ ಜನವರಿ 14 ರಂದು ಮಕರ ಸಂಕ್ರಾಂತಿ ಬರುತ್ತದೆ. ಆದರೆ, ಈ ವರ್ಷದ ದಿನಾಂಕದ ಬಗ್ಗೆ ಜನರಲ್ಲಿ ಸಾಕಷ್ಟು ಗೊಂದಲಗಳಿವೆ. ಮಕರ ಸಂಕ್ರಾಂತಿ ಸಾಮಾನ್ಯವಾಗಿ ಪ್ರತಿ ವರ್ಷ ಜನವರಿ 14 ರಂದು ಬರುತ್ತದೆ. ಆದರೆ ದೃಕ್ ಪಂಚಾಂಗದ ಪ್ರಕಾರ, ಈ ವರ್ಷ ಜನವರಿ 14 ರಂದು ನಡೆಯುವ ಸಂಕ್ರಾಂತಿ ಹಬ್ಬವನ್ನು ಜನವರಿ 15 ರಂದು ಆಚರಿಸಲಾಗುತ್ತದೆ.

ಮಕರ ಸಂಕ್ರಾಂತಿಯು ಪ್ರಾರಂಭವಾಗುವ ದಿನಾಂಕ , ಶುರುವಾಗುವ ಸಮಯ ( Starting Time ) ಮತ್ತು ಕೊನೆಗೊಳ್ಳುವ ಸಮಯ ( Ending Time ) :

ದೃಕ್ ಪಂಚಾಂಗದ ( Druk Panchang ) ಪ್ರಕಾರ, ಸಂಕ್ರಾಂತಿ ತಿಥಿಯು ಜನವರಿ 15 ರಂದು ಬೆಳಿಗ್ಗೆ 2:45 ರಿಂದ ಪ್ರಾರಂಭವಾಗುತ್ತದೆ. ಇನ್ನು ಮಕರ ಸಂಕ್ರಾಂತಿ ಪುಣ್ಯಕಾಲವು ಬೆಳಿಗ್ಗೆ 7:15 ರಿಂದ ರಾತ್ರಿ 8:07 ರವರೆಗೆ 10 ಗಂಟೆ 31 ನಿಮಿಷಗಳವರೆಗೆ ಇರುತ್ತದೆ. ಮಕರ ಸಂಕ್ರಾಂತಿ ಮಹಾ ಪುಣ್ಯಕಾಲ 7:15 ಕ್ಕೆ ಪ್ರಾರಂಭವಾಗಿ, 1 ಗಂಟೆ 45 ನಿಮಿಷಗಳ ಕಾಲ ಅಂದರೆ 9.00 ಕ್ಕೆ ಮುಕ್ತಾಯಗೊಳ್ಳುತ್ತದೆ.

whatss

ಮಕರ ಸಂಕ್ರಾಂತಿಯಂದು ಮಕರಜ್ಯೋತಿಗೆ ಹೆಚ್ಚಿನ ಮಹತ್ವ ( Importance of Makara Jyothi ) :

ಮಕರ ಸಂಕ್ರಾಂತಿಯಂದು (Makar Sankranti) ಶಬರಿಮಲೆಯ ಅಯ್ಯಪ್ಪ ಸ್ವಾಮಿ (Sabarimala Ayyappa) ಜ್ಯೋತಿ ಮೂಲಕ ದರ್ಶನ ನೀಡುತ್ತಾರೆ. ಈ ಮಕರ ಜ್ಯೋತಿಯ ದರ್ಶನಕ್ಕಾಗಿ ಅಯ್ಯಪ್ಪನ ಭಕ್ತರು ಕಾದು ಕುಳಿತಿರುತ್ತಾರೆ. ಇನ್ನು ಶಬರಿ ಮಲೆಯಲ್ಲಿ ಮೂಡುವ ಈ ಜ್ಯೋತಿಯನ್ನು (Jyothi) ನೇರವಾಗಿ ಕಣ್ತುಂಬಿಕೊಳ್ಳಲು ವಿವಿಧ ರಾಜ್ಯಗಳ ( Different State ) ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆ ಯಾತ್ರೆ ಕೈಗೊಳ್ಳುತ್ತಾರೆ. 41ದಿನಗಳ ಕಠಿಣ ವ್ರತವನ್ನು ನಡೆಸಿದ ಭಕ್ತರು ಇರುಮುಡಿ ಹೊತ್ತು ಶಬರಿಮಲೆಗೆ ಹೋಗುತ್ತಾರೆ. ಕಾಡು ಮೇಡುಗಳ ಈ ಪ್ರಯಾಣ ಸುಲಭದಲ್ಲ. ಇದಾದ ಬಳಿಕ ದೇವರ ದರ್ಶನಕ್ಕೆ ಮುನ್ನ 18 ಪವಿತ್ರ ಮಟ್ಟಿಲುಗಳನ್ನು (18 Steps) ಹತ್ತಿ ಅಯ್ಯಪ್ಪನ ದರ್ಶನ ಪಡೆದು ಪುನೀತರಾಗುತ್ತಾರೆ. ಈ 18 ಮೆಟ್ಟಿಲುಗಳು ದೇವರ ದರ್ಶನಕ್ಕೆ ಇರುವ ಮಾರ್ಗ ಅಷ್ಟೇ ಅಲ್ಲ, ಧಾರ್ಮಿಕ- ಲೌಕಿಕ ಜೀವನ ಸಾರವನ್ನು ಹೊಂದಿದೆ. ಮಕರ ಜ್ಯೋತಿಗೆ “ಮಕರ ವಿಳಕ್ಕು” ( Makara Vilakku ) ಎಂದು ಕರೆಯಲ್ಪಡುವ ಈ ಜ್ಯೋತಿಯು ಶಬರಿಮಲೆಯ ( Shabari mala ) ಬೆಟ್ಟದಿಂದ ಮೂರು ಬಾರಿ ಗೋಚರವಾಗುತ್ತದೆ.

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ ಯಾವಾಗ?

ಹಾಗೆಯೇ ಇದೀಗ ಎಲ್ಲರೂ ಶಬರಿಮಲೆಗೆ ಹೊರಡುವ ಸಮಯವಾಗಿದೆ. ಹಾಗೆಯೇ ಶಬರಿಮಲೆ ದೇವಸ್ಥಾನದ ಮೂಲಗಳ ಪ್ರಕಾರ ಜನವರಿ 15ರಂದು ಪೊನ್ನಂಬಲ ಮೇಡುವಿನಲ್ಲಿ ( Ponnambela Medu ) ಮಕರ ಜ್ಯೋತಿ ದರ್ಶನವಾಗಲಿದೆ. ಜನವರಿ 15ರಂದು, ಅಂದರೆ ಇಂದು ಸಂಜೆ 6.30 ರಿಂದ 7ಗಂಟೆ ಒಳಗೆ ಮಕರ ಜ್ಯೋತಿಯ ದರ್ಶನವಾಗಲಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

Leave a Reply

Your email address will not be published. Required fields are marked *

error: Content is protected !!