monta cyclone

ರಾಜ್ಯದಲ್ಲಿ ಮೊಂತಾ ಚಂಡಮಾರುತ, ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.! ಎಲ್ಲೆಲ್ಲಿ.?

Categories:
WhatsApp Group Telegram Group

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ‘ಮೋಂತಾ’ ಚಂಡಮಾರುತವು ಈಗ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯತ್ತ ಸಾಗುತ್ತಿದೆ. ಈ ಚಂಡಮಾರುತದ ಕೇಂದ್ರಭಾಗ ನೇರವಾಗಿ ಕರ್ನಾಟಕದ ಮೇಲೆ ಬೀಳುವ ಸಾಧ್ಯತೆ ಇಲ್ಲದಿದ್ದರೂ, ಇದರ ಪರೋಕ್ಷ ಪ್ರಭಾವದಿಂದ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆ ಆಗುವ ಸಾಧ್ಯತೆ ಇದೆ ಎಂದು ಕೇಂದ್ರದ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಯಾವ ಜಿಲ್ಲೆಗಳಲ್ಲಿ ಮಳೆಯಾಗಬಹುದು?

ಆಂಧ್ರಪ್ರದೇಶ ಮತ್ತು ತೆಲಂಗಾಣ ಗಡಿಯನ್ನು ಹೊಂದಿರುವ ಕರ್ನಾಟಕದ ಜಿಲ್ಲೆಗಳು ಚಂಡಮಾರುತದ ಪ್ರಭಾವಕ್ಕೆ ಹೆಚ್ಚು ಒಳಪಡಬಹುದು. ಇದರ under ಯಲ್ಲಿ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಮತ್ತು ಬೀದರ್ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗುವ ಸಂಭವವಿದೆ.

ಚಂಡಮಾರುತವು ಹೆಚ್ಚು ಶಕ್ತಿಯುತವಾಗಿ ಬೆಳೆದರೆ, ಶಿವಮೊಗ್ಗ, ಚಿಕ್ಕಮಗಳೂರು, ಮತ್ತು ಹಾಸನನಂಥ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಬಹುದು. ಬೆಂಗಳೂರು (ಗ್ರಾಮೀಣ ಮತ್ತು ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆಗಳಿವೆ.

ಮಳೆಯ ಪರಿಣಾಮ ಎಷ್ಟು ದಿನ ಇರುತ್ತದೆ?

ಹವಾಮಾನ ತಜ್ಞರ ಪ್ರಕಾರ, ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿ ಅಕ್ಟೋಬರ್ 28 ಮತ್ತು 29 ರ ವರೆಗೆ ಇರಲಿದೆ. ಚಂಡಮಾರುತದ ವೇಗ ಕುಗ್ಗಿದರೂ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಈ ಎರಡು ದಿನಗಳವರೆಗೆ ಮೋಡಮುಸುಕಿದ ವಾತಾವರಣ ಮುಂದುವರಿಯಲಿದೆ.

ಮೋಂತಾ ಚಂಡಮಾರುತವು ವಿಶಾಖಪಟ್ಟಣಂ, ಚೆನ್ನೈ, ಕಾಕಿನಾಡ ಮತ್ತು ಗೋಪಾಲಪುರದಂಥ ಕರಾವಳಿ ಪ್ರದೇಶಗಳ ಮೇಲೆ ಗಮನಾರ್ಹ ಪ್ರಭಾವ ಬೀರಲಿದೆ. ಈ ಪರಿಸ್ಥಿತಿಯನ್ನು ಎದುರಿಸಲು ಸಂಬಂಧಿತ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ತಂಡಗಳನ್ನು ಸಜ್ಜುಗೊಳಿಸಲಾಗಿದೆ ಮತ್ತು ಮೀನುಗಾರರಿಗೆ ಸಮುದ್ರಕ್ಕೆ ಬಯಲು ಏರದಂತೆ ಕಟ್ಟುನಿಟ್ಟಾದ ಎಚ್ಚರಿಕೆ ನೀಡಲಾಗಿದೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories