Mudra Loan 2022 : ಸಣ್ಣ ವ್ಯಾಪಾರ ಮತ್ತು ಬಿಸಿನೆಸ್ ಗೆ 10 ಲಕ್ಷ ರೂ ಸಹಾಯಧನ ಪಡೆಯುವುದು ಹೇಗೆ ?

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಪ್ರಧಾನಮಂತ್ರಿ ಮುದ್ರಾ ಯೋಜನೆಯ ಬಗ್ಗೆ ಸಂಪೂರ್ಣ ವಿವರವನ್ನು ತಿಳಿಸಿಕೊಡಲಾಗುವುದು.ಹೌದು, ಈ ಯೋಜನೆಯ ಅಡಿಯಲ್ಲಿ ಹೇಗೆ ಸಾಲವನ್ನು ತೆಗೆದುಕೊಳ್ಳುವುದು?, ಇದಕ್ಕೆ ಬೇಕಾದ ದಾಖಲಾತಿಗಳು, ಬಡ್ಡಿ ಎಷ್ಟು ಇರುತ್ತದೆ? ಹೀಗೆ ಎಲ್ಲಾ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ  ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಮಂತ್ರಿ ಮುದ್ರಾ ಯೋಜನೆ 2022:

ಮುದ್ರಾ ಯೋಜನೆಯ ಬಗ್ಗೆ ನಿಮಗೆಲ್ಲ ತಿಳಿದೇ ಇರುತ್ತದೆ, ಮುದ್ರಾ (MUDRA) ಎಂದರೆ ಮೈಕ್ರೋ ಯುನಿಟ್ಸ್ ಡೆವಲಪ್ಮೆಂಟ್ ಅಂಡ್ ರಿಫಿನೆನ್ಸ್ ಏಜೆನ್ಸಿ ಎಂದು ಅರ್ಥ. ಸಾಕಷ್ಟು ಜನ ಓದಿರುತ್ತಾರೆ ಆದರೆ ಕೆಲಸ ಸಿಕ್ಕಿರುವುದಿಲ್ಲ, ಇನ್ನು ಕೆಲವು ಜನರಿಗೆ ಯಾವುದಾದರೂ ಒಂದು ಹೊಸದಾದ ವ್ಯಾಪಾರವನ್ನು ಶುರು ಮಾಡೋಣ ಎಂದರೆ ಅವರಿಗೂ ಎಲ್ಲಿಯೂ ಕೂಡ ಸಾಲ ದೊರೆಯುತ್ತಿರುವುದಿಲ್ಲ. ಇಂತಹ ಪರಿಸ್ಥಿತಿಯನ್ನು ಎದುರಿಸಲು ಹಾಗೂ ಸಣ್ಣ ಪುಟ್ಟ ವ್ಯಾಪಾರಗಳನ್ನು ಶುರು ಮಾಡುವಂತವರಿಗೆ ಅಥವಾ ಈಗಾಗಲೇ ಸಣ್ಣ ಮಟ್ಟದಲ್ಲಿ ಇರುವಂತಹ ಉದ್ಯಮವನ್ನು ವಿಸ್ತಾರ ಗೊಳಿಸಲು ಸಹಾಯ ಆಗಲೆಂದು ಮೋದಿಯವರು ಈ ಯೋಜನೆಯನ್ನು ಶುರು ಮಾಡಿದರು.

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಎಷ್ಟು ಸಾಲ ದೊರೆಯುತ್ತದೆ : ಈ ಮುದ್ರಾ ಯೋಜನೆಯ ಅಡಿಯಲ್ಲಿ 50,000 ಗಳಿಂದ ಹಿಡಿದು 10 ಲಕ್ಷದವರೆಗೂ ಸಾಲ ದೊರೆಯುತ್ತದೆ.

ಮೂರು ಸಾಲದ ವಿಭಾಗಗಳು :

  1. ಶಿಶು ಸಾಲ : ಈ ಸಾಲದ ಯೋಜನೆಯ ಅಡಿಯಲ್ಲಿ ನಿಮಗೆ 50,000 ವರೆಗೂ ಸಾಲ ದೊರೆಯುತ್ತದೆ
  2. ಕಿಶೋರ ಸಾಲ: ಈ ಸಾಲದ ಯೋಜನೆಯ ಅಡಿಯಲ್ಲಿ ನಿಮಗೆ 50,000 ದಿಂದ 5 ಲಕ್ಷ ವರೆಗೆ ಸಾಲವನ್ನು ಪಡೆದುಕೊಳ್ಳಬಹುದು.
  3. ತರುಣ್ ಸಾಲ : ಈ ಸಾಲದ ಯೋಜನೆಯ ಅಡಿಯಲ್ಲಿ ನಿಮಗೆ 5 ಲಕ್ಷ ರೂಗಳಿಂದ 10 ಲಕ್ಷದವರೆಗೆ ಸಾಲವನ್ನು ತೆಗೆದುಕೊಳ್ಳಬಹುದಾಗಿದೆ.

ನೀವು ಯಾವ ರೀತಿಯ ವ್ಯವಹಾರವನ್ನು ಮಾಡಲು ಇಚ್ಚಿಸುತ್ತೀರಾ ಹಾಗೂ ಎಷ್ಟು ಬಂಡವಾಳ ಹೂಡುತ್ತಿರ ಎನ್ನುವುದರ ಮೇಲೆ ಈ ವಿಧಾನದ ಸಾಲಗಳನ್ನು ನೀವು ಆಯ್ಕೆ ಮಾಡಿಕೊಳ್ಳಬಹುದು.

ಯಾವ ವ್ಯಾಪಾರಗಳಿಗೆ ಅಥವಾ ಉದ್ದಿಮೆಗಳಿಗೆ ಸಾಲ ದೊರೆಯುತ್ತದೆ?:

ಕಿರಾಣಿ ಅಂಗಡಿ, ಆಟೋರಿಕ್ಷಾ ಅಥವಾ ಟ್ಯಾಕ್ಸಿಗಳನ್ನು ತೆಗೆದುಕೊಂಡು ಬಾಡಿಗೆಗೆ ಬಿಡುವಂತಹ ವ್ಯಾಪಾರ, ಟೈಲರಿಂಗ್ ಅಂಗಡಿ, ಬ್ಯೂಟಿ ಪಾರ್ಲರ್ ಹಾಗೂ ಸಲೂನ್ಗಳು, ಗ್ಯಾರೇಜ್ ಅಂಗಡಿ, ಜೆರಾಕ್ಸ್ ಶಾಪ್, ಹಪ್ಪಳ ಹಾಗೂ ಉಪ್ಪಿನಕಾಯಿ ತಯಾರಿಸುವ ಫ್ಯಾಕ್ಟರಿ, ಆಹಾರ ಉತ್ಪನ್ನಗಳ ತಯಾರಿ, ಜವಳಿ ಕ್ಷೇತ್ರ, ಸಮುದಾಯ, ವ್ಯಾಯಾಮ ಶಾಲೆ, ಕೋಳಿ ಸಾಕಣೆ, ಸಣ್ಣ ಪುಟ್ಟ ಉತ್ಪಾದಕ ಅಂಗಡಿ, ಬಟ್ಟೆ ನೇಯುವಂತಹ ಸಣ್ಣ ಉದ್ಯಮ ಇಂತಹ ಹಲವಾರು ಸಣ್ಣಪುಟ್ಟ ಉದ್ದಿಮೆಗಳನ್ನು ಪ್ರಾರಂಭಿಸಲು ಸಾಲವನ್ನು ನೀಡಲಾಗುತ್ತದೆ.

ಇದನ್ನೂ ಓದಿ: ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ 

app download scaled

ಈ ಸಾಲವನ್ನು ಪಡೆಯಲು ಬೇಕಾಗಿರುವ ಮುಖ್ಯ ದಾಖಲೆಗಳು :

ನಿಮ್ಮ ಊರಿನಲ್ಲಿ ಪಬ್ಲಿಕ್ ಸೆಕ್ಟರ್ ಯೂನಿಯನ್ ಬ್ಯಾಂಕಿನಲ್ಲಿ ಮುದ್ರಾ ಯೋಜನೆಯ ಸಾಲವನ್ನು ಪಡೆಯಲು ಫಾರ್ಮನ್ನು ಕೊಡಬೇಕಾಗುತ್ತದೆ. ವಯೋಮಿತಿ, ಕನಿಷ್ಠ 18 ವರ್ಷ ತುಂಬಿರಬೇಕು. ಜೊತೆಗೆ, ಈ ಕೆಳಗಿನ ದಾಖಲೆಗಳು ಬೇಕಾಗುತ್ತವೆ.

  1. ಆಧಾರ್ ಕಾರ್ಡ್
  2. ಪ್ಯಾನ್ ಕಾರ್ಡ್
  3. ಕಾಯಂ ವಿಳಾಸ
  4. ವ್ಯಾಪಾರದ ವಿಳಾಸ ಮತ್ತು
  5. ಮಾಲಿಕತ್ವದ ಪುರಾವೆ
  6.  3 ವರ್ಷಗಳ ಬ್ಯಾಲೆನ್ಸ್ ಶೀಟ್
  7.  ಆದಾಯ ತೆರಿಗೆ ರಿಟರ್ನ್ಸ್
  8.  ಸ್ವಯಂ ಮೌಲ್ಯಮಾಪನ ರಿಟರ್ನ್ಸ್
  9. ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋ

ಮುದ್ರಾ ಯೋಜನೆಯ ಉಪಯೋಗಗಳು ಹಾಗೂ ವಿಶೇಷತೆ :

ಕೆಲವು ಪ್ರತಿಭಾವಂತ ವ್ಯಕ್ತಿಗಳಿಗೆ ಓದು ಮುಗಿದ ನಂತರ ಕೆಲಸವು ಸಿಗುತ್ತಿರುವುದಿಲ್ಲಾ ಹಾಗೂ ಇನ್ಯಾವುದಾದರೂ ಸ್ವಂತ ವ್ಯಾಪಾರವನ್ನು ಶುರು ಮಾಡೋಣ ಎಂದರೆ ಹಣದ ಮುಗ್ಗಟ್ಟು ಇರುತ್ತದೆ ಇಂತಹ ವ್ಯಕ್ತಿಗಳಿಗೆ ಈ ಸಾಲದಿಂದ ತುಂಬಾ ಉಪಯೋಗಕರವಾಗಿದೆ. ಅಲ್ಲದೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಈ ಯೋಜನೆಯ ಅಡಿಯಲ್ಲಿ ತುಂಬಾ ಸುಲಭವಾಗಿ ಸಾಲದ ಸೌಲಭ್ಯ ದೊರೆಯುತ್ತದೆ. ಈ ಯೋಜನೆಯ ಅಡಿಯಲ್ಲಿ ಸಾಲವನ್ನು ತೆಗೆದುಕೊಂಡರೆ ಬಡ್ಡಿಯು ಕಡಿಮೆ ಇರುತ್ತದೆ.
ಉಪವ್ಯಕ್ತಿಗೆ ಒಂದೇ ಸಾಲ ದೊರೆಯುತ್ತದೆ. ತರುಣ್ ಸಾಲಕ್ಕೆ ಸಾಲದ ಮೊತ್ತದ ಶೇಕಡ 0.5 0 ಬಡ್ಡಿ ವಿಧಿಸಲಾಗುತ್ತದೆ. ಸರಕಾರಿ ಯೋಜನೆಗಳ ಲಿಂಕ್ ಆಗಿದ್ದ ವೇಳೆ ಅದರಲ್ಲಿ ಸರಕಾರದ ಬಂಡವಾಳ ಸಬ್ಸಿಡಿ ಒದಗಿಸುವ ಆಯ್ಕೆ ಇದ್ದರೆ ಸಬ್ಸಿಡಿಯನ್ನು ಪರಿಗಣಿಸಲಾಗುತ್ತದೆ. ಈ ಸಾಲದ ಬಡ್ಡಿ ದರವು ಖಾತೆದಾರರ ಬ್ಯಾಂಕ್ ವ್ಯವಹಾರ, ಕ್ರೆಡಿಟ್ ಸ್ಕೋರ್ ಗಳ ಮೇಲೆ ಅವಲಂಬಿಸಿರುತ್ತದೆ.

telee

ಈ ಸಾಲವನ್ನು ಕೊಡುವ ಬ್ಯಾಂಕುಗಳು :

ಸಾರ್ವಜನಿಕ ವಲಯದ ಬ್ಯಾಂಕುಗಳು:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ,

ಬ್ಯಾಂಕ್ ಆಫ್ ಇಂಡಿಯಾ,

ಬ್ಯಾಂಕ್ ಆಫ್ ಮಹಾರಾಷ್ಟ್ರ,

ಬ್ಯಾಂಕ್ ಆಫ್ ಬರೋಡ,

ಕಾರ್ಪೊರೇಷನ್ ಬ್ಯಾಂಕ್,

ಕೆನರಾ ಬ್ಯಾಂಕ್.

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು :

ಆಂಧ್ರ ಪ್ರಗತಿ ಗ್ರಾಮೀಣ ಬ್ಯಾಂಕ್,

ಚೈತನ್ಯ ಗೋದಾವರಿ ಗ್ರಾಮೀಣ ಬ್ಯಾಂಕ್,

ಡೆಕ್ಕನ್ ಗ್ರಾಮೀಣ ಬ್ಯಾಂಕ್,

ಬಿಹಾರ ಗ್ರಾಮೀಣ ಬ್ಯಾಂಕ್,

ಸಪ್ತಗಿರಿ ಗ್ರಾಮೀಣ ಬ್ಯಾಂಕ್.

ಖಾಸಗಿ ವಲಯದ ಬ್ಯಾಂಕ್ ಗಳು:

ಆಕ್ಸಿಸ್ ಬ್ಯಾಂಕ್ ಲಿಮಿಟೆಡ್ ,

ಹೆಚ್ ಡಿ ಎಫ್ ಸಿ ಬ್ಯಾಂಕ್ ಲಿಮಿಟೆಡ್,

ಸಿಟಿ ಯೂನಿಯನ್ ಬ್ಯಾಂಕ್ ಲಿಮಿಟೆಡ್,

ಡಿಸಿಬಿ ಬ್ಯಾಂಕ್ ಲಿಮಿಟೆಡ್,

ಕ್ಯಾಥೋಲಿಕ್ ಸೀರಿಯಲ್ ಬ್ಯಾಂಕ್ ಲಿಮಿಟೆಡ್,

ಫೆಡರಲ್ ಬ್ಯಾಂಕ್ ಲಿಮಿಟೆಡ್ .

ಸಹಕಾರಿ ಬ್ಯಾಂಕುಗಳು:

ಗುಜರಾತ್ ಸ್ಟೇಟ್ ಕೋ – ಆಫ್ ಬ್ಯಾಂಕ್,

ರಾಜಕೋಟ್ ನಾಗರಿಕ ಸಹಕಾರಿ ಬ್ಯಾಂಕ್,

ಕಳುಪ್ಪುರ್ ಕಮರ್ಷಿಯಲ್ ಸಹಕಾರ ಬ್ಯಾಂಕ್,

ಎಂ ಎಫ್ ಐ, ಹಾಗೂ

ಎಂಬಿಎಫ್‌ಸಿ ವಲಯದ ಫೈನಾನ್ಸಿಯಲ್ ಕಂಪನಿಗಳು.

ಆಸಕ್ತವುಳ್ಳ ಅಭ್ಯರ್ಥಿಗಳು ಈ ಕೆಳಗಿನ ಅಧಿಕೃತ ವೆಬ್ ಸೈಟಿಗೆ  ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವೆಬ್ ಸೈಟ್ ಗೆ ಭೇಟಿ ನೀಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Untitled 1 scaled

ಮುದ್ರಾ ಸಾಲಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅರ್ಜಿದಾರರು ಅಧಿಕೃತ ಬ್ಯಾಂಕ್‌ಗಳ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಮುದ್ರಾ ಸಾಲಕ್ಕೆ ಅರ್ಜಿ ಸಲ್ಲಿಸಬಹುದು. ನಿಮ್ಮ ಅಗತ್ಯತೆ ಮತ್ತು ಸಾಲದ ಯೋಜನೆಯ ಪ್ರಮಾಣವನ್ನ ಅವಲಂಬಿಸಿ ಶಿಶು, ಕಿಶೋರ್ ಅಥವಾ ತರುಣ್ ಸಾಲ ಯೋಜನೆಗಾಗಿ ನೀವು ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಮುದ್ರಾ ಲೋನ್‌ಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ

ಹಂತ 1: ನೀವು ಮುದ್ರಾ ಸಾಲವನ್ನು ಪಡೆಯಲು ಬಯಸುವ PMMY-ಅಧಿಕೃತ ಹಣಕಾಸು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ https://www.mudra.org.in/ ಭೇಟಿ ನೀಡಿ. ಸಂಬಂಧಿತ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿ.

ಹಂತ 2: ನಿಮಗೆ ಅಗತ್ಯವಿರುವ ಸಾಲದ ಫಾರ್ಮ್ ಅನ್ನು (ಶಿಶು, ತರುಣ್ ಅಥವಾ ಕಿಶೋರ್) ಡೌನ್‌ಲೋಡ್ ಮಾಡಿ ಮತ್ತು ಮುದ್ರಾ ಲೋನ್ ಅಪ್ಲಿಕೇಶನ್‌ನಲ್ಲಿ ನಿಮ್ಮ ಹೆಸರು, ಹುಟ್ಟಿದ ದಿನಾಂಕ, ವಸತಿ/ವ್ಯಾಪಾರ ವಿಳಾಸ ಮತ್ತು ಶೈಕ್ಷಣಿಕ ಅರ್ಹತೆಗಳಂತಹ ವೈಯಕ್ತಿಕ ಮತ್ತು ವ್ಯವಹಾರದ ವಿವರಗಳನ್ನು ನಮೂದಿಸಿ.

ಹಂತ 3: ನಂತರ, ಅರ್ಜಿ ನಮೂನೆಯನ್ನು ಸಲ್ಲಿಸಿ. ಬ್ಯಾಂಕ್ ಅಥವಾ ಸಾಲ ನೀಡುವ ಸಂಸ್ಥೆಗೆ ಸಲ್ಲಿಸುವಾಗ ನೀವು ಅಗತ್ಯ ದಾಖಲೆಗಳನ್ನು ಹೊಂದಿರುವಿರಾ ಎಂದು ಖಚಿತಪಡಿಸಿಕೊಳ್ಳಿ.

ಹಂತ 4: ಮುದ್ರಾ ಸಾಲದ ಅರ್ಜಿ ನಮೂನೆ ಮತ್ತು ಲಗತ್ತಿಸಲಾದ ದಾಖಲೆಗಳನ್ನು ಪ್ರಕ್ರಿಯೆಗೊಳಿಸಿದ ನಂತರ ಮತ್ತು ಪರಿಶೀಲಿಸಿದಾಗ, ಸಾಲವನ್ನು ಅನುಮೋದಿಸಲಾಗುತ್ತದೆ ಮತ್ತು ನಿಮ್ಮ ಬ್ಯಾಂಕ್ ಖಾತೆಗೆ ವಿತರಿಸಲಾಗುತ್ತದೆ.

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Untitled 1 scaled

ಮುದ್ರಾ ಸಾಲಕ್ಕೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ

ಹಂತ 1: ನಿಮ್ಮ ಆಯ್ಕೆಯ PMMY-ಅಧಿಕೃತ ಬ್ಯಾಂಕ್ ಅಥವಾ NBFC ಗೆ ಭೇಟಿ ನೀಡಿ.

ಹಂತ 2: ನೀವು ಸ್ವಯಂ-ಲಿಖಿತ ವ್ಯಾಪಾರ ಯೋಜನೆಯನ್ನು ಹೊಂದಿರುವಿರಾ ಎಂದು ಖಚಿತಪಡಿಸಿಕೊಳ್ಳಿ.

ಹಂತ 3: ಮುದ್ರಾ ಸಾಲದ ಅರ್ಜಿ ನಮೂನೆಯನ್ನು ಕೇಳಿ ಮತ್ತು ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.

ಹಂತ 4: ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಸಲ್ಲಿಸಿ.

ಹಂತ 5: ಒಮ್ಮೆ ಎಲ್ಲಾ ದಾಖಲೆಗಳನ್ನು ಯಶಸ್ವಿಯಾಗಿ ಪರಿಶೀಲಿಸಿದ ನಂತರ, ಸಾಲವನ್ನು ಅನುಮೋದಿಸಲಾಗುತ್ತದೆ ಮತ್ತು ಬಯಸಿದ ಮೊತ್ತವನ್ನು ನಮೂದಿಸಿದ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಒಂದು ಬಾರಿ  ಅರ್ಜಿಯನ್ನು ಸಲ್ಲಿಸಿದ ಮೇಲೆ ನಿಮಗೆ ಏಳರಿಂದ 16 ದಿನಗಳ ಒಳಗಾಗಿ ಅನುಮೋದನೆ ಆಗುತ್ತದೆ. ಇದು ಆಯಾ ಬ್ಯಾಂಕಿಗೆ ಸಂಬಂಧಪಟ್ಟರುವುದಾಗಿರುತ್ತದೆ. ನೀವೇನಾದರೂ 10 ಲಕ್ಷದ ಒಳಗಡೆ ನಿಮ್ಮ ಕನಸಿನ ಉದ್ದಿಮೆಯನ್ನು ಶುರು ಮಾಡಲು ಸಾಲವನ್ನು ಪಡೆಯಬೇಕು ಎಂದಿದ್ದರೆ, ಈ ಯೋಜನೆಯ ಸರ್ಕಾರದ ಒಂದು ಉಪಯುಕ್ತಕರ ಯೋಜನೆಯಾಗಿದೆ. ಆದರಿಂದ ಇಂತಹ ಮುಖ್ಯವಾದ ಯೋಜನೆಯ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಲೇಖನವನ್ನು ಈ ಕೂಡಲೇ ಎಲ್ಲಾ ಸ್ನೇಹಿತ ಮಿತ್ರರಿಗೆ ಶೇರ್ ಮಾಡಿ, ಧನ್ಯವಾದಗಳು.

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Untitled 1 scaled

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 : ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ, ಅರ್ಜಿ ಸಲ್ಲಿಸುವ ವಿಧಾನ

 

Leave a Reply

Your email address will not be published. Required fields are marked *