ಮುಖ್ಯ ವಿವರಗಳು:
ಕರ್ನಾಟಕ ಸರ್ಕಾರವು ಹಿಂದಿನ ಡಿಫೈನ್ ಪಿಂಚಣಿ ಯೋಜನೆಗೆ (Defined Pension Scheme) ಒಳಪಟ್ಟ ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಣಯ ತೆಗೆದುಕೊಂಡಿದೆ. ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 247-A ಅನ್ವಯವಾಗಿ, ನೌಕರರ ಅರ್ಹತಾದಾಯಕ ಸೇವೆಯನ್ನು ಪಿಂಚಣಿ ಸೌಲಭ್ಯಕ್ಕಾಗಿ ಪರಿಗಣಿಸಲು ಹೊಸ ಆದೇಶ ಹೊರಡಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಯಾವಾಗ ಈ ಯೋಜನೆ ಜಾರಿಗೆ ಬಂದಿದೆ?
- 01.04.2006 ರಂದು ಅಥವಾ ಅನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ನೌಕರರಿಗೆ ನೂತನ ವ್ಯಾಖ್ಯಾನಿತ ಅಂಶದಾಯಿ ಕೊಡುಗೆ ಯೋಜನೆ (NPS) ಕಡ್ಡಾಯವಾಗಿ ಅನ್ವಯಿಸಲಾಗುತ್ತದೆ.
- ಆದರೆ, 31.03.2006 ರೊಳಗೆ ನೇಮಕಗೊಂಡ ನೌಕರರು ಹಿಂದಿನ ಡಿಫೈನ್ ಪಿಂಚಣಿ ಯೋಜನೆಗೆ ಒಳಪಟ್ಟಿರುತ್ತಾರೆ.
ವಿಶೇಷ ಸಂದರ್ಭಗಳಿಗೆ ಸಡಿಲಿಕೆ:
ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ, 1.4.2006 ರ ನಂತರ ನೇಮಕಗೊಂಡ ನೌಕರರನ್ನು ಸಹ ಡಿಫೈನ್ ಪಿಂಚಣಿ ಯೋಜನೆಗೆ ಸೇರಿಸಲು ಅನುಮತಿ ನೀಡಲಾಗಿದೆ. ಇದಕ್ಕೆ ಕೆಲವು ಷರತ್ತುಗಳು ಅನ್ವಯಿಸುತ್ತವೆ.
OPS ಯೋಜನೆಯೊಂದಿಗೆ ಸಂಬಂಧ:
- 17.02.2021 ಮತ್ತು 24.01.2024 ರ ಸರ್ಕಾರಿ ಆದೇಶಗಳ ಪ್ರಕಾರ, ಹಳೆಯ ಪಿಂಚಣಿ ಯೋಜನೆ (OPS)ಗೆ ಸೇರಿದ ನೌಕರರಿಗೆ ಎಲ್ಲಾ ಸೌಲಭ್ಯಗಳನ್ನು ವಿಸ್ತರಿಸಲಾಗಿದೆ.
- 11-05-2025 ರಂದು ಹೊಸ ಆದೇಶ ಹೊರಡಿಸಿ, ಡಿಫೈನ್ ಪಿಂಚಣಿ ಯೋಜನೆಗೆ ಸೇರಿದ ನೌಕರರಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 2-C ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಬದಲಿಗೆ, ನಾಲ್ಕನೇ ಭಾಗದ (Part IV) ನಿಯಮಗಳು ಅನ್ವಯಿಸುತ್ತವೆ.


ಮುಂದಿನ ಕ್ರಮ:
ಈ ನಿರ್ಣಯಕ್ಕೆ ಅನುಗುಣವಾಗಿ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಲಾಗುವುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Shivaraj is the Lead Editor at NeedsOfPublic.in with over 4 years of experience tracking Indian government schemes and educational updates. He specializes in simplifying complex notifications from the Central and State governments to help the public understand their benefits. Before joining NeedsOfPublic, Shivaraj worked as a Content Writer focusing on Civic issues. When he isn’t decoding the latest circulars, he enjoys reading about digital literacy.”
Follow Shivaraj on:


WhatsApp Group




