ಗ್ರಾಮೀಣ ಪ್ರದೇಶಗಳ ಕೃಷಿ ಬೆಳವಣಿಗೆಯಲ್ಲಿ ನೀರಾವರಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ವಿಶೇಷವಾಗಿ ಬೊರೆವೆಲ್ ಆಧಾರಿತ ಕೃಷಿಯಲ್ಲಿ, ವಿಶ್ವಾಸಾರ್ಹ ವಿದ್ಯುತ್ ಸಂಪರ್ಕವಿಲ್ಲದೆ ಉತ್ಪಾದಕತೆಗೆ ದೊಡ್ಡ ಅಡ್ಡಿಯಾಗುತ್ತದೆ. ರೈತರ ಈ ಅವಶ್ಯಕತೆಯನ್ನು ಗಮನದಲ್ಲಿಟ್ಟುಕೊಂಡು, ಮೆಸ್ಕಾಂ (MESCOM) ಸಂಸ್ಥೆ ಸಾಮಾನ್ಯ ಯೋಜನೆಗಳ ಜೊತೆಗೆ ಸಮಾಜ ಕಲ್ಯಾಣಕ್ಕೆ ಸಂಬಂಧಿಸಿದ ಎಸ್ಸಿಪಿ (SCSP) ಮತ್ತು ಟಿಎಸ್ಪಿ (TSP) ಯೋಜನೆಗಳಡಿಯಲ್ಲಿ ರೈತರಿಗೆ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ನೀಡಲು ಹೊಸ ಅರ್ಜಿಗಳನ್ನು ಆಹ್ವಾನಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಈ ಯೋಜನೆಯಡಿಯಲ್ಲಿ, ಹಿಂದೆ ಗಂಗಾಕಲ್ಯಾಣ, ಎಸ್ಸಿಪಿ/ಟಿಎಸ್ಪಿ ಯೋಜನೆಗಳ ಮೂಲಕ ವಿದ್ಯುತ್ ಸಂಪರ್ಕ ಪಡೆಯದ ಅರ್ಹ ರೈತರಿಗೆ ಈಗ ಮತ್ತೊಂದು ಉತ್ತಮ ಅವಕಾಶ ಲಭಿಸಿದೆ. ಇದರ ಮೂಲಕ ನೀರಾವರಿ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಕೃಷಿ ಉತ್ಪಾದನೆ ಹೆಚ್ಚಿಸಲು ಸರ್ಕಾರದಿಂದ ಸೌಲಭ್ಯ ಒದಗಿಸಲಾಗುತ್ತಿದೆ.
ಈ ಯೋಜನೆ ಅನ್ವಯಿಸುವ ಪ್ರದೇಶಗಳು ಯಾವುವು?:
ಈ ಅರ್ಜಿಹಾಕುವ ಅವಕಾಶ ಕೆಳಗಿನ ಪ್ರದೇಶಗಳ ರೈತರಿಗೆ ಮಾತ್ರ ಅನ್ವಯಿಸುತ್ತದೆ,
ಅಬ್ಬಲಗೆರೆ
ಪಿಳ್ಳಂಗಿರಿ
ಹೊಳಲೂರು
ಗಾಜನೂರು
ಸಂತೇಕಡೂರು (ಘಟಕ–2)
ಈ ಎಲ್ಲವು ತಾಲೂಕು ಗ್ರಾಮೀಣ ಮೆಸ್ಕಾಂ ಉಪವಿಭಾಗ ಮತ್ತು ಅದರ ಅಡಿಪಡೆದ ಪಂ/ಪ.ಜಾ. ವ್ಯಾಪ್ತಿ ಒಳಪಡುವ ಗ್ರಾಮಗಳಿಗೆ ಸೇರಿವೆ.
ಯಾರೆಲ್ಲಾ ಅರ್ಜಿ ಹಾಕಬಹುದು?:
ಎಸ್ಸಿಪಿ/ಟಿಎಸ್ಪಿ ಯೋಜನೆಯಡಿಯಲ್ಲಿ ವಿದ್ಯುತ್ ಸಂಪರ್ಕವನ್ನು ಮೊದಲೇ ಪಡೆಯದ ರೈತರು.
ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ವಿದ್ಯುತ್ ಸೌಲಭ್ಯ ಲಭಿಸದವರು.
ಬೊರೆವೆಲ್ ಹೊಂದಿರುವ ಮತ್ತು ಕೃಷಿ ಉದ್ದೇಶಕ್ಕೆ ವಿದ್ಯುತ್ ಅಗತ್ಯವಿರುವ ರೈತರು.
ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು?:
ಅರ್ಜಿಯೊಂದಿಗೆ ಕೆಳಗಿನ ದಾಖಲೆಗಳನ್ನು ಕಡ್ಡಾಯವಾಗಿ ಸೇರಿಸಬೇಕು,
ಆರ್ಟಿಸಿ (RTC)
ಆಧಾರ್ ಕಾರ್ಡ್
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ರೈತನ ಫೋಟೋ
ಬಿಪಿಎಲ್ ರೇಷನ್ ಕಾರ್ಡ್
ಬ್ಯಾಂಕ್ ಪಾಸ್ಬುಕ್ ಜೆರಾಕ್ಸ್
ಬೊರೆವೆಲ್ ಜೊತೆ ರೈತನ ಜಿಪಿಎಸ್ ಫೋಟೋ
ಫೋನ್ ಸಂಖ್ಯೆ
ಇನ್ನು ಈ ಯೋಜನೆಗೆ ಗ್ರಾಮೀಣ ಉಪವಿಭಾಗ ಮೆಸ್ಕಾಂ ಕಚೇರಿಯಲ್ಲಿ ಅರ್ಜಿ ಲಭ್ಯವಾಗುತ್ತದೆ.
ಅರ್ಜಿಸಲ್ಲಿಕೆಯ ಕೊನೆಯ ದಿನಾಂಕ :
ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 15 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಈ ಕುರಿತು ಗ್ರಾಮೀಣ ಉಪವಿಭಾಗ ಮೆಸ್ಕಾಂ ಪಾಲನೆ ಮತ್ತು ನಿರ್ವಹಣೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆ ಹೊರಡಿಸಿದ್ದಾರೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group




Leave a Reply