ಬಡತನ ರೇಖೆಗಿಂತ ಕೆಳಗಿರುವ ಜನರಿಗೆ (Below Poverty line) ಕರ್ನಾಟಕ ಪಡಿತರ ಚೀಟಿ(Ration card) ಮೂಲವಾಗಿದೆ. ಈ ಕಾರ್ಡ್ನೊಂದಿಗೆ ಬಡವರು ಕರ್ನಾಟಕ ರಾಜ್ಯ ಸರ್ಕಾರವು ನೀಡುವ ಸಬ್ಸಿಡಿ(subsidy) ಸರಕುಗಳನ್ನು ಸುಲಭವಾಗಿ ಪಡೆಯಬಹುದು. ಕರ್ನಾಟಕ ರಾಜ್ಯದ ನೂತನ ಸಿಎಂ ಅನ್ನ ಭಾಗ್ಯ ಯೋಜನೆ ಜಾರಿಗೆ ತಂದಿದ್ದಾರೆ. ಈ ಯೋಜನೆಯಲ್ಲಿ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ(Bank account )ಯಲ್ಲಿರುವ ಹಣದ ರೂಪದಲ್ಲಿ 5 ಕೆಜಿ ಪಡಿತರ ಅಕ್ಕಿಯ ಲಾಭವನ್ನು ಪಡೆಯಬಹುದು. ಅಷ್ಟೇ ಅಲ್ಲದೆ ಸರ್ಕಾರದ ವಿವಿಧ ಯೋಜನೆಗಳಿಗಾಗಿ ಪಡಿತರ ಚೀಟಿ ಒಂದು ಪ್ರಮುಖ ಗುರುತಿನ ಪುರಾವೆಯಾಗಿದೆ. ದುರದೃಷ್ಟವಶಾತ್, ಇನ್ನೂ ಸಾಕಷ್ಟು ಜನರಿಗೆ ಪಡಿತರ ಚೀಟಿಗಳಿಲ್ಲ. ಈ ಕಾರಣದಿಂದಾಗಿ, ಅವರು ಈ ಯೋಜನೆಯಿಂದ ವಂಚಿತರಾಗುತ್ತಾರೆ ಮತ್ತು ಅಗತ್ಯವಿರುವ ಆಹಾರವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಹೀಗಿರುವಾಗ , ಕರ್ನಾಟಕ ಸರ್ಕಾರವು ಹೊಸ ರೇಷನ್ ಕಾರ್ಡ್(New Ration card)ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಆದರೆ ಇತ್ತೀಚಿಗೆ ನಡೆದ ಕರ್ನಾಟಕ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಶಾಸಕಿ ನಯನಾ ಮೋಟಮ್ಮ ಅವರು ಬಿಪಿಎಲ್(BPL) ಮತ್ತು ಎಪಿಎಲ್(APL) ರೇಷನ್ ಕಾರ್ಡ್ಗಳ ಅರ್ಜಿಗಳ ತಾಂತ್ರಿಕ ಸಮಸ್ಯೆಗಳ ಬಗ್ಗೆ ಸಚಿವರ ಗಮನ ಸೆಳೆದರು. ಅನ್ನಭಾಗ್ಯ ಯೋಜನೆ(Annabhagya Scheme) ಜಾರಿಯಾಗಿ ಇಷ್ಟು ತಿಂಗಳಾದರೂ ಅರ್ಹರಿಗೆ 5 ಕೆಜಿ ಅಕ್ಕಿ ಹಣ ಇನ್ನೂ ಅವರ ಬ್ಯಾಂಕ್ ಖಾತೆಗೆ (Bank Account) ಜಮಾ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯ ಪ್ರತಿಪಕ್ಷದ ನಾಯಕ ಆರ್ ಅಶೋಕ್(R Ashok) ಅವರು ಕೂಡ ಈ ಬಗ್ಗೆ ಮಾತನಾಡಿ, ಬಿಪಿಎಲ್ ರೇಷನ್ ಕಾರ್ಡ್ (BPL Ration Card) ವಿತರಣೆಯನ್ನು ಸರ್ಕಾರವು ನಿಲ್ಲಿಸಿದೆ ಎಂದು ಆರೋಪಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ. ಎಚ್ ಮುನಿಯಪ್ಪ(K H muniyappa) ಅವರು ಸುಮಾರು 2.5 ಲಕ್ಷ ಬಿಪಿಎಲ್(BPL) ಕಾರ್ಡ್ ಗಳನ್ನ ಈ ವರ್ಷ ವಿತರಿಸಲಾಗಿದೆ ಎಂದು ಪ್ರಕಟಿಸಿದ್ದಾರೆ. ಇನ್ನುಳಿದ ಅರ್ಜಿಗಳನ್ನು ಮಾರ್ಚ್ 31 ರೊಳಗಾಗಿ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಲಾಗಿದೆ, ಏಪ್ರಿಲ್ 1 ರಿಂದಲೇ ಬಿಪಿಎಲ್(BPL) ಮತ್ತು ಎಪಿಎಲ್(APL) ರೇಷನ್ ಕಾರ್ಡ್ ಗಳನ್ನು (Ration card) ವಿತರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಈಗಾಗಲೇ ಸಾರ್ವಜನಿಕರಿಂದ ಹೊಸ ಪಡಿತರ ಚೀಟಿ ಪಡೆಯಲು ಸಲ್ಲಿಕೆಯಾಗಿರುವ ಅರ್ಜಿದಾರರಿಗೆ ರೇಶನ್ ಕಾರ್ಡ ವಿತರಣೆ ಮಾಡುವುದರ ಜೊತೆಗೆ ಈ ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಮುಗಿದ ಬಳಿಕ ಅಂದರೆ ಏಪ್ರಿಲ್ 1 2024ರ ನಂತರ ಹೊಸ ಕಾರ್ಡುಗಳಿಗೆ ಅರ್ಜಿಯನ್ನು ಕೂಡ ಆಹ್ವಾನಿಸಲು ಅವಕಾಶ ಕಲ್ಪಿಸಲಾಗಿದೆ.
ಹೊಸ ಪಡಿತರ ಚೀಟಿಯನ್ನು ಪಡೆಯಲು ಬೇಕಾದ ದಾಖಲೆಗಳು (documents to get new ration card):
ಆಧಾರ್ ಕಾರ್ಡ್(Adhar card)
ಮತದಾರರ ಗುರುತಿನ ಚೀಟಿ(Voting card)
ಚಾಲನಾ ಪರವಾನಿಗೆ (Driving license)
ಸ್ವಯಂ ಘೋಷಿತ ಪ್ರಮಾಣ ಪತ್ರ
ಇತ್ತಿಚಿನ ಪಾಸ್ಪೋರ್ಟ್ ಗಾತ್ರದ ಭಾವಚಿತ್ರ(passport photos)
ಮೊಬೈಲ್ ನಂಬರ್ (Mobile Number)
ಮನೆಯ ಸದಸ್ಯರ ಮಾಹಿತಿ ನೀಡಬೇಕಾಗುತ್ತದೆ.
ಹೊಸ ಪಡಿತರ ಚೀಟಿಗೆ ಇರಬೇಕಾದ ಅರ್ಹತೆಗಳು ಈ ಕೆಳಗಿನಂತೆ(eligibility to get new ration card) :
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
ಈಗಾಗಲೇ ಪಡಿತರ ಚೀಟಿ ಹೊಂದಿರುವವರು ಅರ್ಜಿ ಸಲ್ಲಿಸುವಂತಿಲ್ಲ.
ನೂತನವಾಗಿ ಮದುವೆ ಆದ ದಂಪತಿಗಳು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು.
ಕುಟುಂಬದ ಆದಾಯವನ್ನು ಪರಿಗಣಿಸಿ ಬಿಪಿಎಲ್ ಪಡಿತರ ಚೀಟಿ ನೀಡಬೇಕೋ ಅಥವಾ ಎಪಿಎಲ್ ಪಡಿತರ ಚೀಟಿ ನೀಡಬೇಕೋ ಎಂದು ಅಧಿಕಾರಿಗಳು ನಿರ್ಧಾರ ಮಾಡುತ್ತಾರೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹೀಗೆ ಮಾಡಿ :
ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವರಾಗಿದ್ದರೆ ಈ ಕೆಳಗೆ ನೀಡಿರುವ ಲಿಂಕ್ ಬಳಸಿ ಅರ್ಜಿಯನ್ನು ಸಲ್ಲಿಸಬಹುದು: ಲಿಂಕ್: https://ahara.kar.nic.in/
ಮತ್ತು ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಮಹಿಳೆಯರಿಗೆ ಗುಡ್ ನ್ಯೂಸ್, ಸ್ವಂತ ವ್ಯಾಪಾರ ಪ್ರಾರಂಭಿಸಲು ಸಿಗಲಿದೆ 3 ಲಕ್ಷ ರೂಪಾಯಿ. ಹೀಗೆ ಅರ್ಜಿ ಹಾಕಿ
- ಸಾಲಕ್ಕೆ ಅರ್ಜಿ ಸಲ್ಲಿಸುವಾಗ, ಸಿಬಿಲ್ ಸ್ಕೋರ್ ಹೆಚ್ಚು ಮಾಡುವ ಸೀಕ್ರೆಟ್ ಟ್ರಿಕ್ಸ್ ಇಲ್ಲಿದೆ
- ‘RBI’ ನಿಂದ ‘ಪೇಟಿಎಂ ಬ್ಯಾಂಕ್’ಗೆ ನಿರ್ಬಂಧ, ಫೆ.29 ರಿಂದ ಬಂದ್ ಆಗುತ್ತಾ?
- ಯಾವುದೇ ಗ್ಯಾರಂಟಿ ಇಲ್ಲದೇ ಸಿಗಲಿದೆ 2 ಲಕ್ಷ ರೂ.ವರೆಗೆ ಸಾಲ..! ಮೋದಿ ಸರ್ಕಾರದ ಹೊಸ ಯೋಜನೆ
- ರಾಜ್ಯಾದ್ಯಂತ ರೈತರ ಜಮೀನಿನ ಪಹಣಿಯಲ್ಲಿನ ಲೋಪದೋಷ ಸರಿಪಡಿಸಲು ಕಂದಾಯ ಅದಾಲತ್
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group






