ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಹೊಸ ರೇಷನ್ ಕಾರ್ಡ್(new ration card) ಗೆ ಅರ್ಜಿಯನ್ನು ಸಲ್ಲಿಸುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಹೊಸ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆಗಳನ್ನು ನಿಲ್ಲಿಸಲಾಗಿತ್ತು. ಈಗಾಗಲೇ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿರುವವರು ಕಾಡಿಸಬೇಕು ಪರದಾಡುವಂತಾಗಿದೆ. ಇನ್ನು ಈಗಾಗಲೇ ಕಾರ್ಡ್ ಇದ್ದವರು ತಿದ್ದುಪಡಿಗೆ ಸರ್ವರ್ ಸಮಸ್ಯೆಯಿಂದ ತಿದ್ದುಪಡಿ ಕೇಂದ್ರಗಳಿಗೆ ಅಲೆದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಒಂದು ಬಂಪರ್ ಗುಡ್ ನ್ಯೂಸ್ ಬಂದಿದ್ದು, ಶೀಘ್ರದಲ್ಲಿ ಎಪಿಎಲ್ ಮತ್ತು ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಹೊಸದಾಗಿ ಅರ್ಜಿ ಸ್ವೀಕಾರ ಆರಂಭಿಸುವುದಾಗಿ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಸದ್ಯದಲ್ಲೇ ಪರಿಷ್ಕೃತ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ.
ರಾಜ್ಯದಲ್ಲಿ ಹೊಸದಾಗಿ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಿದ ಜನರಿಗೆ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆಯ ಕಾರಣದಿಂದಾಗಿ ರೇಷನ್ ಕಾರ್ಡ್ ಗಳನ್ನು ವಿತರಿಸಲಿಲ್ಲ. ಈಗ ಹೊಸದಾಗಿ ಅರ್ಜಿಯನ್ನು ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿಯನ್ನು ವಿತರಿಸಿರುವಂತೆ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿರುವುದಾಗಿ ಆಹಾರ ಸಚಿವ ಕೆ ಹೆಚ್ ಮುನಿಯಪ್ಪನವರು ಸುದ್ದಿಗೋಷ್ಠಿ ಒಂದರಲ್ಲಿ ತಿಳಿಸಿದ್ದಾರೆ.
ಈಗಾಗಲೇ ಮೂರು ಲಕ್ಷಕ್ಕೆ ಹತ್ತಿರದ ಪಡಿತರ ಚೀಟಿಗಳ ಅರ್ಜಿಗಳು ಬಂದಿದ್ದು, ಅವುಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಬಿಪಿಎಲ್ ಕಾರ್ಡ್ಗಳನ್ನು ವಿತರಣೆ ಮಾಡಲಾಗುವುದು. ಇನ್ನೇನು ಒಂದು ತಿಂಗಳ ಒಳಗಾಗಿ ಅರ್ಜಿಯನ್ನು ಸಲ್ಲಿಸಿದ ಎಲ್ಲಾ ಜನರಿಗೆ ರೇಷನ್ ಕಾರ್ಡ್ ಗಳು ಬರುತ್ತವೆ. ನೀವೇನಾದರೂ ಬಿಪಿಎಲ್ ಕಾರ್ಡ್ಗಳನ್ನು ಪಡೆಯಲು ಅರ್ಹತೆಯನ್ನು ಉಲ್ಲವರಾಗಿದ್ದಾರೆ ಮಾತ್ರ ಅರ್ಜಿಯನ್ನು ಸಲ್ಲಿಸಿದವರಿಗೆ ಬಿಪಿಎಲ್ ಕಾರ್ಡ್ ಗಳನ್ನು ವಿತರಿಸಲಾಗುತ್ತದೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ :

ಮೇಲಿನ screenshot ಅನ್ನು ನೀವು ಗಮನಿಸಬಹುದು, ಗ್ರಾಮ ಒನ್, ಕರ್ನಾಟಕ ಒನ್, ಮತ್ತು ಬೆಂಗಳೂರು ಒನ್ ಕೇಂದ್ರಗಳ ಸೇವಾ ಸಿಂಧುವಿನಲ್ಲಿ ಈಗಾಗಲೇ ಹೊಸ ಪಡಿತರ ಚೀಟಿಗೆ ಅರ್ಜಿ ಹಾಕುವ ಫಾರಂ ಕಾಣಿಸಿಕೊಳ್ಳುತ್ತಿದೆ. ( application for new BPL ration card ) ಆದರೆ ಈಗ ಅರ್ಜಿ ಸಲ್ಲಿಸಲು ಪ್ರಯತ್ನಿಸಿದರೆ ಕೊನೆಯಲ್ಲಿ ಅರ್ಜಿ sumbit ಆಗುತ್ತಿಲ್ಲ, ಆದರೆ ಇದೇ ಬರುವ ಆಗಸ್ಟ್ 15ರ ನಂತರ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗುವ ಸಾಧ್ಯತೆ ಇದೆ, ಹಾಗಾಗಿ ಯಾರೆಲ್ಲಾ ಹೊಸ ರೇಷನ್ ಕಾರ್ಡ ಗೆ ಅರ್ಜಿ ಸಲ್ಲಿಸುವ ನಾಗರಿಕರು ಬೇಕಾದ ದಾಖಲಾತಿಗಳನ್ನು ಈಗಲೇ ಸಿದ್ದಪಡಿಸಿಕೊಳ್ಳುವುದು ಉತ್ತಮ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಹೊಸ ಸರ್ಕಾರ ಬಂದ ಮೇಲೆ ಅಂತಲೂ ರೇಷನ್ ಕಾರ್ಡ್ ಎಲ್ಲರಿಗೂ ತುಂಬಾ ಅವಶ್ಯವಿದೆ. ರೇಷನ್ ಕಾರ್ಡ್ ಇಲ್ಲದಿದ್ದರೆ ಯಾವ ಯೋಜನೆಯು ಕೂಡ ನಮಗೆ ದೊರೆಯುವುದಿಲ್ಲ. ಹಾಗಾಗಿ ಮೊನ್ನೆ ಅಷ್ಟೇ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶವನ್ನು ನೀಡಿದೆ. ಹಾಗೆಯೇ ಆಗಸ್ಟ್ 15 ರ ನಂತರ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದು ವರದಿಗಳು ತಿಳಿಸಿವೆ. ಮೂರು ತಿಂಗಳಗಳ ಹಿಂದೆ ಅಥವಾ ಅದಕ್ಕೂ ಮುಂಚೆ ಅರ್ಜಿಯನ್ನು ಸಲ್ಲಿಸಿದ ರೇಷನ್ ಕಾರ್ಡ್ ಗಳನ್ನು, ವಿಧಾನಸಭಾ ಚುನಾವಣೆಯ ನೀತಿ ಸಂಹಿತೆಯ ಉದ್ದೇಶದಿಂದಾಗಿ ವಿತರಣೆಯನ್ನು ತಡೆಗಿಡಿಯಲಾಗಿತ್ತು. ಆದರೆ ಈಗ ಪಡಿತರ ಚೀಟಿಯ ತಿದ್ದುಪಡಿ ಹಾಗೂ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸುವ(apply for new ration card) ಪ್ರಕ್ರಿಯೆ ಪುನರಾರಂಭಗೊಳ್ಳುತ್ತಿದೆ. ಹೊಸ ರೇಷನ್ ಕಾರ್ಡ್ ಗಳಿಗೆ ನೀವು ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸಿಟಿಜನ್ ಲಾಗಿನ್ ಅಂದರೆ ಗ್ರಾಹಕರು ಸ್ವತಃ ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗದು ಆದರೆ ನೀವು ಹತ್ತಿರದ ಮೇಲೆ ತಿಳಿಸಲಾದ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸುವ ಮುನ್ನ ಯಾವೆಲ್ಲ ಸಿದ್ಧತೆ ಇರಬೇಕು :
ಹೊಸ ರೇಷನ್ ಕಾರ್ಡಿಗೆ ಬಯೋಮೆಟ್ರಿಕ್ ಅವಶ್ಯಕತೆ ಇರುತ್ತದೆ. ಹಾಗಾಗಿ ಬಯೋಮೆಟ್ರಿಕ್ ನೀಡಲು ರೇಷನ್ ಕಾರ್ಡಿನಲ್ಲಿ ಇರಬೇಕಾದ ಸದಸ್ಯರು ಎಲ್ಲರೂ ಸರ್ಕಾರಿ ಕೇಂದ್ರಗಳಿಗೆ ಹೋಗಬೇಕಾಗುತ್ತದೆ.
ಐದು ವರ್ಷದ ಒಳಗಿನ ಮಕ್ಕಳಿಗೆ ಬಯೋಮೆಟ್ರಿಕ್ ಅವಶ್ಯಕತೆ ಇರುವುದಿಲ್ಲ ಆದರೆ ಅವರು ಕಡ್ಡಾಯವಾಗಿ ಆಧಾರ್ ಕಾರ್ಡನ್ನು ಹೊಂದಿರಬೇಕು. PHH ಅಂದರೆ ಬಿಪಿಎಲ್ ಪಡಿತರ ಚೀಟಿಯನ್ನು ಪಡೆಯಲು ಬಯಸುವ ಗ್ರಾಹಕರು ಆಧಾರ್ ಕಾರ್ಡ್ ಹಾಗೂ ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು. NPHH ಅಂದರೆ ಎಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಳ್ಳಲು ಆಧಾರ್ ಕಾರ್ಡ್(Aadhar card) ಅಗತ್ಯವಿದೆ. ಆಧಾರ್ ಕಾರ್ಡಿನಲ್ಲಿ ವಿಳಾಸವು ಸರಿಯಾಗಿರಬೇಕು.
ಬೇಕಾದ ದಾಖಲೆಗಳು :
ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ಕುಟುಂಬದಲ್ಲಿ ಯಾರಾದರೂ ಒಬ್ಬರ ಆದಾಯ ಪ್ರಮಾಣ ಪತ್ರ
ಮನೆಯಲ್ಲಿ ಆರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿದ್ದಲ್ಲಿ ಅವರ ಜನನ ಪ್ರಮಾಣ ಪತ್ರ,
ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ / ಇ-ಮೇಲ್ ಐಡಿ, ಮೇಲೆ ತಿಳಿಸಿದ ದಾಖಲೆಗಳನ್ನು ಹೊಂದಿರದಿದ್ದಲ್ಲಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ನೀವೇನಾದರೂ ಇನ್ನೂ ಹೊಸ ರೇಷನ್ ಕಾರ್ಡನ್ನು ಹೊಂದಿಲ್ಲವೆಂದರೆ ಹಾಗೂ ಅದಕ್ಕೆ ಅರ್ಜಿಯನ್ನು ಸಲ್ಲಿಸಲು ಕಾಯುತ್ತಿದ್ದರೆ, ಈ ಲೇಖನವು ನಿಮಗೆ ಸಹಾಯಮಾಡುತ್ತದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ನಿಮ್ಮ ಬ್ಯಾಂಕ್ ಅಕೌಂಟ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿದಿಯ ಎಂದು ತಿಳಿಯುವ ಲಿಂಕ್ ????
ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ ????
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group









