ರೈಲ್ವೆ ನೇಮಕಾತಿ ಪರೀಕ್ಷೆಯ ಹೊಸ ಮಾರ್ಗಸೂಚಿ ಕುರಿತು ವಿವಾದ: ಮಂಗಳಸೂತ್ರ, ಜನಿವಾರ ಧರಿಸಲು ಅಡ್ಡಿ ಇಲ್ಲ
ಭಾರತದಲ್ಲಿ ಭದ್ರತಾ ಕ್ರಮಗಳನ್ನು (Safety measures) ಕಟ್ಟುನಿಟ್ಟಾಗಿ ಪಾಲಿಸಲು ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿಶೇಷ ನಿಯಮಾವಳಿಗಳನ್ನು ಜಾರಿಗೆ ತರಲಾಗುತ್ತಿದೆ. ಈ ನಿಟ್ಟಿನಲ್ಲಿ, ಕೇಂದ್ರ ರೈಲ್ವೆ ನೇಮಕಾತಿ ಮಂಡಳಿ (Central Recruitment Board) ನಡೆಸುತ್ತಿರುವ ಪರೀಕ್ಷೆಯಲ್ಲೂ ನಯವಾದ ನಿಯಮ ಜಾರಿಯಾಗಿದೆ. ಆದರೆ, ಈ ನಿಯಮಗಳಲ್ಲಿ ಧಾರ್ಮಿಕ ಸಂಕೇತಗಳ ಕುರಿತು ವಿಧಿಸಲಾಗಿರುವ ನಿರ್ಬಂಧಗಳು ಹೊಸದೊಂದು ವಿವಾದಕ್ಕೆ ಕಾರಣವಾಗಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರೈಲ್ವೆ ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ (For the posts of Nursing Superintendent in the Railway Department) ಸಂಬಂಧಿಸಿದಂತೆ, ದೇಶದಾದ್ಯಂತ ನಾಳೆ ನಡೆಯಲಿರುವ ಪರೀಕ್ಷೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ, ಮಂಗಳಸೂತ್ರ ಮತ್ತು ಇತರ ಧರ್ಮದ ಸಂಕೇತಗಳನ್ನು ಧರಿಸಬಾರದು ಎಂಬ ಸೂಚನೆ ನೀಡಲಾಗಿದೆ. ಪರೀಕ್ಷಾ ಪ್ರವೇಶ ಪತ್ರದ 7ನೇ ಕ್ರಮಾಂಕದ ಸೂಚನೆಯಲ್ಲಿ ಈ ವಿಷಯವನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.
ಈ ನಿಯಮವು ಪ್ರಕಟವಾದ ನಂತರ, ಹಲವಾರು ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮಂಗಳಸೂತ್ರ ಮತ್ತು ಜನಿವಾರ ಧಾರ್ಮಿಕ ಪಹರಿನಿಯಾಗಿದೆ ಮತ್ತು ಇದನ್ನು ತೆಗೆದುಹಾಕುವಂತೆ ಒತ್ತಾಯಿಸುವುದು ಭಕ್ತಿಯ ಭಂಗಕ್ಕೆ ಕಾರಣವಾಗುತ್ತದೆ.
ಇದನ್ನು ಮನಗಂಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ (Captain brijesh chouta) ಅವರು ಈ ವಿಷಯವನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಗಮನಕ್ಕೆ ತಂದಿದ್ದಾರೆ. ತಮ್ಮ ಪ್ರತಿಕ್ರಿಯೆಯಲ್ಲಿ ಸಚಿವ ಸೋಮಣ್ಣ ಅವರು ತಕ್ಷಣ ಕ್ರಮ ತೆಗೆದುಕೊಂಡು, ರೈಲ್ವೆ ನೇಮಕಾತಿ ಅಧಿಕಾರಿಗಳಿಗೆ ಮಂಗಳಸೂತ್ರ ಮತ್ತು ಜನಿವಾರ ತೆಗೆಸಬಾರದೆಂದು ಸೂಚನೆ ನೀಡಿದ್ದಾರೆ.
ಸದ್ಯ, ನಾಳೆ ದೇಶದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗಳ ಪರೀಕ್ಷೆ ನಡೆಯಲಿದ್ದು, ಈ ಹೊಸ ನಿರ್ಧಾರ ಪರೀಕ್ಷಾರ್ಥಿಗಳಿಗೆ (Examiners) ಯಾವುದೇ ತೊಂದರೆಯಾಗದಂತೆ ತಡೆಯುತ್ತದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Sagari leads the ‘Government Schemes’ vertical at NeedsOfPublic.in, where she decodes the latest Central and State government policies for the common citizen. She has over 3 years of experience tracking welfare programs like PM Kisan, Ayushman Bharat, and State Ration updates. Her goal is to ensure every reader understands their eligibility and benefits without confusion. Sagari strictly verifies all updates from official government portals before publishing. Outside of work, she is an advocate for digital literacy in rural India.”
Connect with Sagari:


WhatsApp Group




