“ಕಟ್ಟಡ ನಕ್ಷೆ ಇಲ್ಲದೆ ಮನೆ ಕಟ್ಟಬೇಡಿ”: ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್(DCM D.K. Shivakumar) ಮನವಿ
ಭಾರತದ ಸುಪ್ರೀಂ ಕೋರ್ಟ್(Suprem Court) ನೀಡಿರುವ ಹೊಸ ತೀರ್ಪು ದೇಶದ ನಿರ್ಮಾಣ ಕ್ಷೇತ್ರದಲ್ಲಿ ಭಾರೀ ಪರಿಣಾಮ ಬೀರುತ್ತಿದ್ದು, ರಾಜ್ಯಗಳ ಪಾಲಿಗೆ ಹೊಸ ಬಗೆಯ ಸವಾಲುಗಳನ್ನು ತಂದಿಟ್ಟಿದೆ. ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಕ್ಷೆ ಅನುಮತಿ (building plan approval) ಮತ್ತು ಸ್ವಾಧೀನ ಪ್ರಮಾಣ ಪತ್ರ (occupancy/completion certificate) ಇಲ್ಲದೆ ಯಾರೂ ಮನೆ ಕಟ್ಟಬಾರದು ಎಂಬ ತೀರ್ಪು ರಾಜ್ಯ ಸರ್ಕಾರಗಳ(State government) ಮೇಲೆ ಕಾನೂನು ಪಾಲನೆಯ ಹೊಣೆಗಾರಿಕೆಯನ್ನು ಹೆಚ್ಚಿಸಿದೆ. ಈ ತೀರ್ಪಿನ ಪ್ರಕಾರ ಇಂತಹ ಅಕ್ರಮ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂಬುದು ಸ್ಪಷ್ಟವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಈ ತೀರ್ಪು ಜಾರಿಯಾದ ಬಳಿಕ ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ವಿಧಾನಸೌಧದಲ್ಲಿ(Vidhanasawda) ಮಾತನಾಡಿದ್ದು, “ಇನ್ನು ಮುಂದೆ ಯಾವುದೇ ವ್ಯಕ್ತಿಯೂ ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಮನೆ ಕಟ್ಟಬಾರದು. ಸಾರ್ವಜನಿಕರು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು” ಎಂದು ಮನವಿ ಮಾಡಿದ್ದಾರೆ.
ಸುಪ್ರೀಂ ತೀರ್ಪಿನ ಪರಿಣಾಮ: ಲಕ್ಷಾಂತರ ಜನರು ಸಂಕಷ್ಟದಲ್ಲಿದಾರೆ
ಡಿ.ಕೆ.ಶಿವಕುಮಾರ್ ಅವರು ಹೇಳಿರುವ ಪ್ರಕಾರ, ಈಗಾಗಲೇ ರಾಜ್ಯದ ಹಳ್ಳಿಗಳು ಮತ್ತು ನಗರ ಪ್ರದೇಶಗಳಲ್ಲಿ ಸುಮಾರು 2.5 ಲಕ್ಷಕ್ಕೂ ಅಧಿಕ ಜನರು ಕಟ್ಟಡ ನಕ್ಷೆ ಅನುಮತಿ ಪಡೆಯದೇ ಮನೆ ಕಟ್ಟಿಕೊಂಡಿದ್ದಾರೆ. ಆದ್ದರಿಂದ ಈಗ ನೀರು ಹಾಗೂ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಹಾಕಿದ್ದಾರೆ. ಹೊಸ ತೀರ್ಪು ಜಾರಿಯಾದ ಹಿನ್ನೆಲೆಯಲ್ಲಿ ಇವರಿಗೆ ಮೂಲಭೂತ ಸೌಲಭ್ಯಗಳ ಲಭ್ಯತೆ ಪ್ರಶ್ನಾರ್ಥಕವಾಗಿದೆ.
“ಈ ಬಗ್ಗೆ ನಾವು ಕಾನೂನು ಸಲಹೆಗಾರರೊಂದಿಗೆ ಚರ್ಚೆ ನಡೆಸುತ್ತಿದ್ದೇವೆ. ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆ ಆಗಬಾರದು ಎಂಬುದೇ ನಮ್ಮ ಗುರಿ” ಎಂದು ಡಿಸಿಎಂ ಹೇಳಿದ್ದಾರೆ.
ಕೆಇಬಿಗೆ ಠೇವಣಿ ಪಾವತಿ ಮಾಡಿದವರ ಬಗ್ಗೆಯೂ ಚಿಂತನೆ:
ಕೆಲವರು ಕರ್ನಾಟಕ ವಿದ್ಯುತ್ ಮಂಡಳಿ (KEB) ಗೆ ಠೇವಣಿ ಪಾವತಿ ಮಾಡಿರುವುದರ ಕುರಿತು ಮಾತನಾಡಿದ ಡಿಸಿಎಂ, ಇದರ ಕುರಿತಾಗಿಯೂ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದೆ ಎಂದರು. “ಇತರ ರಾಜ್ಯಗಳು ಈ ತೀರ್ಪನ್ನು ಹೇಗೆ ಜಾರಿಗೆ ತರುತ್ತಿವೆ ಎಂಬುದರ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ” ಎಂದು ತಿಳಿಸಿದ್ದಾರೆ.
ಅಕ್ರಮ ಕಟ್ಟಡಗಳಿಗೆ ಯಾವುದೇ ಸಹಾನುಭೂತಿ ಇಲ್ಲ: ಕಟ್ಟಡ ಅನುಮತಿ ತಪ್ಪದೇ ಬೇಕು
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದು, “ಯಾರೂ ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಮನೆ ಕಟ್ಟಬಾರದು. ಈಗಾಗಲೇ ಅಕ್ರಮ ಕಟ್ಟಡಗಳನ್ನು ಸಕ್ರಮ ಮಾಡುವುದು ಕಷ್ಟವಾಗಲಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಇಂತಹ ಸಾಹಸದಿಂದ ದೂರವಿರಬೇಕು. ಕಾನೂನು ಉಲ್ಲಂಘನೆ ಮಾಡಿದರೆ ನೀರು ಮತ್ತು ವಿದ್ಯುತ್ ಸಂಪರ್ಕ ಸಿಗುವುದಿಲ್ಲ” ಎಂದು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಅಕ್ರಮ ಸಕ್ರಮ ಬಿಲ್ ಮತ್ತು ಸುಪ್ರೀಂ ತಡೆ:
“ಅಕ್ರಮ ಕಟ್ಟಡಗಳಿಗೆ ಸಕ್ರಮ ಮಾಡುವುದು ಸುಲಭವಲ್ಲ. ಈ ಸಂಬಂಧ ನಿಯಮಿತಗೊಳಿಸಲು ತಂದಿದ್ದ ‘ಅಕ್ರಮ ಸಕ್ರಮ ಬಿಲ್’ ಮೇಲೆ ಈಗಾಗಲೇ ಸುಪ್ರೀಂ ಕೋರ್ಟ್ ತಡೆ ವಿಧಿಸಿದೆ. ಸರ್ಕಾರ ಎ ಖಾತಾ, ಬಿ ಖಾತಾ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಚರ್ಚೆ ನಡೆಸುತ್ತಿದೆ” ಎಂದ ಡಿಸಿಎಂ, ಈ ನಿರ್ಧಾರದಿಂದ BWSSB (ಬೆಂಗಳೂರು ನೀರುಮಾರ್ಗ ಮಂಡಳಿ) ಗೆ ಕೆಲಸ ನಿರ್ವಹಿಸಲು ಅಡೆತಡೆ ಉಂಟಾಗಿದೆ ಎಂದರು.
ಆದೇಶ ಜಾರಿಗೆ ಆತುರವೇ?
ಇನ್ನು, “ಈ ಆದೇಶವನ್ನು ನ್ಯಾಯಾಲಯದಿಂದಲೇ ಕರ್ನಾಟಕ ರಾಜ್ಯಕ್ಕೆ(Karnataka government) ಕಳುಹಿಸಲಾಗಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಕೆಆರ್ಸಿ(KRC) ಮೂಲಕ ಆದೇಶ ಜಾರಿಗೊಳಿಸುವಂತೆ ಸೂಚನೆ ಬಂದಿದೆ. ಅಧಿಕಾರಿಗಳು ಕಾನೂನು ಪಾಲನೆ ಮಾಡದಿದ್ದರೆ ಭವಿಷ್ಯದಲ್ಲಿ ತೊಂದರೆ ಆಗಬಹುದು ಎಂಬ ಭಯದಿಂದಲೇ ತಕ್ಷಣದ ನಿರ್ಧಾರ ತೆಗೆದುಕೊಂಡಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.
ಒಟ್ಟಾರೆಯಾಗಿ, ಈ ತೀರ್ಪು ಜನ ಸಾಮಾನ್ಯರ ಜೀವನದ ಮೇಲೆ ತಕ್ಷಣದ ಪರಿಣಾಮ ಬೀರುವಷ್ಟು ಮಹತ್ವದ್ದಾಗಿದೆ. ಸರ್ಕಾರ ಈ ಸಮಸ್ಯೆ ಬಗೆಹರಿಸಲು ಕಾನೂನು ಬುದ್ಧಿವಂತಿಕೆ ಬಳಸುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(DCM D.K. Shivakumar) ಪುನರುಚ್ಛರಿಸಿದ್ದಾರೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Sagari leads the ‘Government Schemes’ vertical at NeedsOfPublic.in, where she decodes the latest Central and State government policies for the common citizen. She has over 3 years of experience tracking welfare programs like PM Kisan, Ayushman Bharat, and State Ration updates. Her goal is to ensure every reader understands their eligibility and benefits without confusion. Sagari strictly verifies all updates from official government portals before publishing. Outside of work, she is an advocate for digital literacy in rural India.”
Connect with Sagari:


WhatsApp Group




