ಬೆಂಗಳೂರು: ಸರಕಾರಿ ನೌಕರರಿಗೆ ಒಂದು ಸಂತೋಷದ ಸುದ್ದಿ. 2006ರ ಏಪ್ರಿಲ್ 1ರ ನಂತರ ನೇಮಕಗೊಂಡ 13 ಸಾವಿರಕ್ಕೂ ಹೆಚ್ಚು NPS(ರಾಷ್ಟ್ರೀಯ ಪಿಂಚಣಿ ಯೋಜನೆ) ನೌಕರರನ್ನು ಹಳೆಯ ಪಿಂಚಣಿ ಯೋಜನೆಗೆ (OPS) ಸೇರಿಸಲು ಸರ್ಕಾರ ನಿರ್ಣಯಿಸಿದೆ. ಈ ನಿರ್ಣಯವು ಬೆಂಗಳೂರು ನೀರು ಸರಬರಾಜು ಮಂಡಳಿ (BWSSB) ಸೇರಿದಂತೆ ಹಲವು ಸರ್ಕಾರಿ ಇಲಾಖೆಗಳಿಗೆ ಅನ್ವಯಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
2006ರ ಏಪ್ರಿಲ್ 1ರ ಮೊದಲು ನೇಮಕಗೊಂಡ ನೌಕರರು, ಆದರೆ ನಂತರ ಸೇವೆಗೆ ಸೇರಿದವರನ್ನು ಕೆಲವು ಷರತ್ತುಗಳೊಂದಿಗೆ ಹಳೆಯ ಯೋಜನೆಗೆ ಸೇರಿಸಲಾಗುವುದು. ಇದಕ್ಕಾಗಿ ನೌಕರರು ತಮ್ಮ ಸಮ್ಮತಿ ನೀಡಬೇಕು. ಹೊಸ ಯೋಜನೆಯಡಿಯಲ್ಲಿ ಕಡಿತವಾದ ಪಿಂಚಣಿ ಹಣವನ್ನು ಹಿಂಪಡೆಯಲು ಸಹ ಅವಕಾಶವಿದೆ.
BWSSBನ 104 ನೌಕರರಿಗೆ ಈ ಯೋಜನೆ ಅನ್ವಯಿಸುತ್ತದೆ. ಇವರಲ್ಲಿ 102 ನೌಕರರು ಇನ್ನೂ ಸೇವೆಯಲ್ಲಿದ್ದರೆ, ಇಬ್ಬರು ನಿವೃತ್ತರಾಗಿದ್ದಾರೆ. ಸರ್ಕಾರದ ನಿರ್ದೇಶನದಂತೆ, ಇವರ ಎನ್ಪಿಎಸ್ ಖಾತೆಯಲ್ಲಿರುವ ಹಣವನ್ನು ಹಿಂತೆಗೆದುಕೊಳ್ಳಲು ಪ್ರಕ್ರಿಯೆ ಆರಂಭವಾಗಿದೆ.
ನಗರಾಭಿವೃದ್ಧಿ ಇಲಾಖೆ ಮತ್ತು ಇತರ ಸಂಬಂಧಿತ ಸಂಸ್ಥೆಗಳು ಈ ನಿರ್ಣಯವನ್ನು ಅನುಷ್ಠಾನಗೊಳಿಸಲು ಹಂತಹಂತವಾಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ನೌಕರ ಸಂಘಗಳು ದೀರ್ಘಕಾಲದಿಂದ ಈ ಬದಲಾವಣೆಗಾಗಿ ಒತ್ತಾಯಿಸಿದ್ದವು.
ಈ ನಿರ್ಣಯದಿಂದ ಸರ್ಕಾರಿ ನೌಕರರ ಪಿಂಚಣಿ ಭದ್ರತೆ ಹೆಚ್ಚುತ್ತದೆ ಎಂದು ನಿರೀಕ್ಷಿಸಲಾಗಿದೆ. ಹಳೆಯ ಯೋಜನೆಯಡಿಯಲ್ಲಿ ನೌಕರರು ನಿವೃತ್ತಿಯ ನಂತರ ನಿಗದಿತ ಪಿಂಚಣಿ ಪಡೆಯುತ್ತಾರೆ, ಇದು ಹಣಕಾಸು ಸ್ಥಿರತೆಗೆ ಸಹಾಯಕವಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group




Leave a Reply