ರಾಜ್ಯದ ಈ ಜಿಲ್ಲೆಗಳಿಗೆ ಇಂದಿನಿಂದ ಭಾರೀ ಮಳೆ ಮುನ್ಸೂಚನೆ, ಈ ಜಿಲ್ಲೆಗಳ ಶಾಲಾ -ಕಾಲೇಜುಗಳಿಗೆ ರಜೆ

Picsart 25 06 12 23 55 43 329

WhatsApp Group Telegram Group

ಕರ್ನಾಟಕದಲ್ಲಿ ಜೂನ್ 13ರಿಂದ ಭಾರೀ ಮಳೆ: ಕೊಡಗು, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯಾದ್ಯಂತ ಮುಂಗಾರು ಮಳೆಯು ಮತ್ತೊಮ್ಮೆ ಚುರುಕುಗೊಳ್ಳುತ್ತಿದೆ. ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ನೀಡಿರುವ ಮುನ್ಸೂಚನೆಯಂತೆ, ಜೂನ್ 13ರಿಂದ ಜೂನ್ 16ರವರೆಗೆ ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆವಿದೆ. ಹಾಗಿದ್ದರೆ ಯಾವ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ? ಯಾವೆಲ್ಲ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹೌದು ಜೂನ್ ತಿಂಗಳಲ್ಲಿ ವರುಣಾರ್ಭಟ ಜೋರಾಗಿದ್ದು, ರಾಜ್ಯಾದ್ಯಂತ ಇನ್ನೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂಗಾರು ಚುರುಕುಗೊಳ್ಳುತ್ತಿರುವಂತೆ, ಹವಾಮಾನದಲ್ಲಿ ತೀವ್ರ ಬದಲಾವಣೆಗಳು ಕಾಣಿಸಿಕೊಳ್ಳುತ್ತಿದ್ದು, ಇದರ ಪರಿಣಾಮವಾಗಿ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಮತ್ತು ಸಾರ್ವಜನಿಕ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ, ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಜನತೆಗೆ ಎಚ್ಚರಿಕೆಯ ಸೂಚನೆಗಳನ್ನೂ ನೀಡಲಾಗಿದೆ.

ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಮತ್ತು KSNDMC:

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಮತ್ತು ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಜೂನ್ 13ರಿಂದ ಜೂನ್ 16ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಮಳೆಯಾಗುವ ಸಂಭವವಿದೆ. ಕರಾವಳಿ ಭಾಗ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ರೆಡ್, ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರಿಂದಾಗಿ, ಮುಂಜಾಗೃತ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗುತ್ತಿದೆ.

ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್(Red Alert), ಶಾಲಾ-ಕಾಲೇಜುಗಳಿಗೆ ರಜೆ:

ಕೊಡಗು ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳವರೆಗೆ  ಭಾರೀ ಮಳೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ವೆಂಕಟ ರಾಜಾ(District Collector venkata raja) ಅವರು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ನದಿತೀರ ಪ್ರದೇಶ ಹಾಗೂ ಬೆಟ್ಟಗುಡ್ಡಗಳಲ್ಲಿ ವಾಸಿಸುತ್ತಿರುವವರಿಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲಾಡಳಿತ ತುರ್ತು ಕ್ರಮಗಳನ್ನು ಕೈಗೊಂಡಿದೆ.

ಉತ್ತರ ಕನ್ನಡ: ಐದು ತಾಲೂಕುಗಳಲ್ಲಿ ರೆಡ್ ಅಲರ್ಟ್

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕುಗಳಲ್ಲಿ ಜೂನ್ 17ರ ತನಕ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ(District Collector Lakshmi Priya) ಅವರು ಈ ಪ್ರದೇಶಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಭಾರೀ ಮಳೆಯಿಂದಾಗಿ ರಸ್ತೆಗಳ ಮೇಲೆ ನೀರಿನ ಹರಿವು, ಸಂಚಾರದ ಅಡಚಣೆ ಮತ್ತು ಸಾರ್ವಜನಿಕ ಸೇವೆಗಳ ತೊಂದರೆಯ ಸಾಧ್ಯತೆ ಇದ್ದುದ್ದು, ಜನಸಾಮಾನ್ಯರು ಹೆಚ್ಚು ಎಚ್ಚರಿಕೆ ಇಂದ ಇರಬೇಕು.

ಉಡುಪಿಯಲ್ಲಿ ಮುಂಜಾಗ್ರತಾ ಕ್ರಮ:

ಶಾಲೆಗಳಿಗೆ ರಜೆ
ಕರಾವಳಿ ಜಿಲ್ಲೆಯಾದ ಉಡುಪಿಯಲ್ಲೂ ತೀವ್ರ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ವಿದ್ಯಾ ಕುಮಾರಿ(District Collector Vidya Kumari) ಅವರು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಗುಡುಗು-ಸಿಡಿಲು ಸಹಿತ ಮಳೆಯಾಗುವ ಕಾರಣದಿಂದಾಗಿ ಸಾರ್ವಜನಿಕರಿಗೆ ಮುಂಜಾಗೃತ ಕ್ರಮವಾಗಿ ಮನೆಗಳಿಂದ ಹೊರಬರದಂತೆ ಸೂಚನೆ ನೀಡಲಾಗಿದೆ.

ರಾಜ್ಯವ್ಯಾಪಿ ಮುಂಗಾರು ಚಟುವಟಿಕೆ:

ಸರ್ಕಾರದ ಎಚ್ಚರಿಕೆ
ರಾಜ್ಯಾದ್ಯಂತ ಮುಂಗಾರು ಚಟುವಟಿಕೆಗಳು ಚುರುಕುಗೊಂಡಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದರೆ, ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯ ತೀವ್ರ ಎಚ್ಚರಿಕೆಯನ್ನು ನೀಡಲಾಗಿದೆ. ಸಾರ್ವಜನಿಕರು ನಿರ್ದಿಷ್ಟ ಮುನ್ನೆಚ್ಚರಿಕೆಗಳನ್ನು ಪಾಲಿಸಬೇಕು. ರಸ್ತೆ ಸಂಚಾರದ ವೇಳೆ ಎಚ್ಚರಿಕೆ ವಹಿಸುವುದು, ನದಿತೀರ ಪ್ರದೇಶಗಳಿಗೆ ಹೋಗದಿರುವುದು, ತಗ್ಗು ಪ್ರದೇಶಗಳಲ್ಲಿ ಜಾಗರೂಕತೆಯಿಂದ ಇರುವಂತೆ ಸೂಚಿಸಲಾಗಿದೆ.

ಜಿಲ್ಲಾಡಳಿತಗಳು ಮತ್ತು ರಾಜ್ಯ ಸರ್ಕಾರ ತುರ್ತು ಸೇವೆಗಳ ಮೂಲಕ ಸಾರ್ವಜನಿಕರಿಗೆ ಅಗತ್ಯ ಸಹಾಯ ಹಾಗೂ ಮಾಹಿತಿ ಒದಗಿಸುತ್ತಿದ್ದು, ಹವಾಮಾನ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯವಶ್ಯಕವಾಗಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!