ಇಂದು ರಾಜ್ಯಾದ್ಯಂತ ಬಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದ್ದು, ಮುಂದಿನ ಮೂರು ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ 23 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ 8 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಮುಂದಿನ ಮೂರು ದಿನ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದಿನಿಂದ ಮೇ 16 ರವರೆಗೆ ಮಳೆ ಆಗಲಿದ್ದು, ಇಂದು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಗಾಳಿ (40ರಿಂದ 50 ಕಿ.ಮೀ. ವೇಗ) ಹಾಗೂ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ದಕ್ಷಿಣ ಕನ್ನಡ, ಉತ್ತಡ ಕನ್ನಡ ಮತ್ತು ಉಡುಪಿ ಜಿಲ್ಲೆಳಲ್ಲಿಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಈಗಾಗಲೇ ಬೆಂಗಳೂರು ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ಕೊಡಗು, ಕೋಲಾರ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಇದೇ 15ರವರೆಗೂ ರಾಜ್ಯದ ಎಲ್ಲ ಜಿಲ್ಲೆಗಳಿಗೆ ‘ಆರೆಂಜ್’ ಹಾಗೂ ‘ಯೆಲ್ಲೊ’ ಅಲರ್ಟ್ ನೀಡಿರುವ ಇಲಾಖೆ, ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡುಗು, ಕಲಬುರಗಿ, ವಿಜಯಪುರ, ಯಾದಗಿರಿ,ಜಿಲ್ಲೆಗಳಿಗೆ ಇಲಾಖೆ ‘ಯೆಲ್ಲೊ ಅಲರ್ಟ್’ ನೀಡಿದರೆ ಇನ್ನುಳಿದ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.
ಮೇ 13-14ರಂದು ಎಲ್ಲೆಲ್ಲಿ ಮಳೆ?
ದಕ್ಷಿಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆಯು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ವ್ಯಾಪಿಸುತ್ತಿದೆ. ಇಂದು (ಮೇ 12) ಬೆಂಗಳೂರು ನಗರ, ಬೆಂಗಳೂರೂ ಗ್ರಾಮೀಣ ಸೇರಿದಂತೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರೀ ಮಳೆಯಾಗಲಿದೆ. ಮೇ 13ರಂದು ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾದರೆ ಮೇ 14ರಂದು ಶಿವಮೊಗ್ಗ, ಕೊಡಗು ಮಳೆಯಾಗಲಿದೆ. ಅಲ್ಲದೆ ಮೇ 15ರಂದು ಶಿವಮೊಗ್ಗ, ದಾವರಣಗೆರೆ ಸೇರಿದಂತೆ ಹಲವೆಡೆ ಮಳೆಯಾಗಲಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




