ಭಾರತದ ಹಲವೆಡೆ ತೀವ್ರ ಹವಾಮಾನ ಬದಲಾವಣೆ: ಮಳೆ, ಗುಡುಗು, ಗಾಳಿ ಮತ್ತು ಹಿಮಪಾತದ ಮುನ್ಸೂಚನೆ
ಇತ್ತೀಚಿನ ದಿನಗಳಲ್ಲಿ ದೇಶದ ಹವಾಮಾನದಲ್ಲಿ (Weather) ತೀವ್ರ ಬದಲಾವಣೆಗಳು ಕಂಡುಬಂದಿವೆ. ಕೆಲವೆಡೆ ಅತಿಯಾದ ತಾಪಮಾನದಿಂದ ಜನರು ಬೇಸತ್ತರೆ, ಇನ್ನೂ ಕೆಲವೆಡೆ ತಣ್ಣನೆಯ ಗಾಳಿಯಿಂದ ಜನರು ಖುಷಿ ಪಟ್ಟಿದ್ದಾರೆ. ಈ ನಡುವೆಯೇ, ಮುಂಬರುವ ದಿನಗಳಲ್ಲಿ ಭಾರತದಲ್ಲಿ ಮಳೆ, ಗುಡುಗು, ಗಾಳಿ ಹಾಗೂ ಹಿಮಪಾತದ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ (Weather telecast department) ಎಚ್ಚರಿಕೆ ನೀಡಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಜನತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ. ಕೆಲವೆಡೆ ತೀವ್ರ ಹವಾಮಾನ ಪರಿಸ್ಥಿತಿಯಿಂದ ಸಂಚಾರದ ಅಡಚಣೆಗಳೂ ಉಂಟಾಗಬಹುದು. ಆದ್ದರಿಂದ, ಹೊಸ ಹವಾಮಾನ ಮುನ್ಸೂಚನೆಗಳತ್ತ ಗಮನಹರಿಸುವುದು ಅಗತ್ಯ. ಹಾಗಿದ್ದರೆ ಯಾವ ಪ್ರದೇಶದಲ್ಲಿ ಯಾವ ರೀತಿಯ ವಾತಾವರಣ ಇರಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಉತ್ತರ ಮತ್ತು ಈಶಾನ್ಯ ಭಾರತದ (Northeast India) ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ವಾಯುವ್ಯ ಭಾರತದಲ್ಲಿ ತಾಪಮಾನ ತಗ್ಗಿದ್ದು, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಜಮ್ಮು-ಕಾಶ್ಮೀರದಲ್ಲಿ ಮಳೆಯ ಜೊತೆಗೆ ಹಿಮಪಾತವೂ (Snowfall along with rain) ಸಂಭವಿಸಬಹುದು. ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಬಹುದು ಎಂದು ಹೇಳಲಾಗುತ್ತಿದೆ.
ಭಾರತದ ವಿವಿಧ ಪ್ರದೇಶಗಳಲ್ಲಿ ಹವಾಮಾನ ಸ್ಥಿತಿ ಯಾವ ರೀತಿಯಿದೆ :
ಉತ್ತರ ಭಾರತ (North India) :
ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ ಕುಸಿತ ಕಂಡುಬಂದಿದ್ದು, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಮತ್ತು ಉತ್ತರಾಖಂಡದಲ್ಲಿ ಮುಂದಿನ 24 ಗಂಟೆಗಳಲ್ಲಿ ಹಿಮಪಾತ ಮತ್ತು ಮಳೆಯಾಗುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಇರುವ ಹಿಮಾಲಯ ಪರ್ವತ ಶ್ರೇಣಿಗಳ ಮೇಲೆ ಹಿಮಪಾತದ ಸಾಧ್ಯತೆಯಿದೆ, ಇದರಿಂದ ಚಳಿಗಾಲದ ತೀವ್ರತೆ ಮತ್ತೆ ಏರಿಕೆಯಾಗಬಹುದು.
ಈಶಾನ್ಯ ಭಾರತ (Northeast India) :
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಮತ್ತು ತ್ರಿಪುರಾದಂತಹ ಈಶಾನ್ಯ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಹವಾಮಾನ ಇಲಾಖೆ ಪ್ರಕಾರ, ಈ ಪ್ರದೇಶಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಈ ಪ್ರದೇಶದ ಜನರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಎಚ್ಚರಿಸಲಾಗಿದೆ.
ದಕ್ಷಿಣ ಭಾರತ (South India) :
ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿ ಮಾರ್ಚ್ 1 ಮತ್ತು 2 ರಂದು ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದಲ್ಲಿ (South Karnataka) ಕೂಡಾ ಮಳೆಯಾಗುವ ಸಾಧ್ಯತೆ ಇದ್ದು, ಇದರಿಂದಾಗಿ ಕಡಲತೀರದ ಪ್ರದೇಶಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ.
ಪಶ್ಚಿಮ ಭಾರತ (West India) :
ರಾಜಸ್ಥಾನ ಮತ್ತು ಗುಜರಾತ್ (Rajasthan and Gujarath) ಭಾಗದಲ್ಲಿ ತಾಪಮಾನದಲ್ಲಿ ಏರಿಕೆ ಕಾಣಬಹುದಾದರೂ, ಹವಾಮಾನ ಇಲಾಖೆ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ಗುಜರಾತ್ನಲ್ಲಿ ತಾಪಮಾನ 2-3 ಡಿಗ್ರಿ ಕುಸಿಯಬಹುದು ಎಂದು ಹೇಳಲಾಗಿದೆ.
ಮಾರ್ಚ್ 4 (March 4) ರವರೆಗೆ ಭಾರೀ ಮಳೆಯ ಮುನ್ಸೂಚನೆ :
ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಮತ್ತು ಉತ್ತರಾಖಂಡದಲ್ಲಿ ಮಾರ್ಚ್ 2-4 ರವರೆಗೆ ಹಗುರದಿಂದ ಮಧ್ಯಮ ಮಳೆ ಮತ್ತು ಹಿಮಪಾತ ಸಾಧ್ಯ.
ಈಶಾನ್ಯ ಭಾರತದಲ್ಲಿ (ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ) ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ.
ದಕ್ಷಿಣ ಭಾರತದಲ್ಲಿ (ಕೇರಳ, ಮಾಹೆ, ತಮಿಳುನಾಡು, ಪುದುಚೇರಿ, ಕಾರೈಕಲ್) ಮಳೆ, ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆ ನೀಡಿರುವ ತಾಪಮಾನ ಮುನ್ಸೂಚನೆ (Temperature Forecast) :
ಮುಂದಿನ 4-5 ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನ 4-6°C ಏರಬಹುದು.
ಮಧ್ಯ ಭಾರತ ಮತ್ತು ಪೂರ್ವ ಭಾರತದಲ್ಲಿ 2-3°C ತಾಪಮಾನ ಏರಿಕೆ ಕಾಣಬಹುದು.
ಮುಂಬೈ, ಗುಜರಾತ್, ಗೋವಾ, ಮತ್ತು ಕರಾವಳಿ ಕರ್ನಾಟಕದ ಕರಾವಳಿ ಭಾಗದಲ್ಲಿ ಬಿಸಿಗಾಳಿ ವಾತಾವರಣ ಮುಂದುವರಿಯಲಿದೆ.
ಮಾರ್ಚ್ 1, 2025 ರ ಹವಾಮಾನ ಅಂಕಿಅಂಶಗಳು :
ಕೇರಳದ (Kerala) ಕಣ್ಣೂರು ವಿಮಾನ ನಿಲ್ದಾಣದಲ್ಲಿ 40.2°C ಗರಿಷ್ಠ ತಾಪಮಾನ ದಾಖಲಾಗಿದೆ.
ಮಹಾರಾಷ್ಟ್ರದ ಒಳಭಾಗ, ಪಶ್ಚಿಮ ತೆಲಂಗಾಣ, ದಕ್ಷಿಣ ಗುಜರಾತ್, ಪಶ್ಚಿಮ ಒಡಿಶಾ, ಉತ್ತರ ಕರಾವಳಿ ಆಂಧ್ರಪ್ರದೇಶ, ದಕ್ಷಿಣ ಛತ್ತೀಸ್ಗಢದಲ್ಲಿ 35-40°C ತಾಪಮಾನ ದಾಖಲಾಗಿದೆ.
ಕೊಂಕಣ, ಗೋವಾ, ಕರ್ನಾಟಕದ ಒಳನಾಡು, ಉತ್ತರ ಛತ್ತೀಸ್ಗಢ ಮತ್ತು ಪಶ್ಚಿಮ ಬಂಗಾಳದಲ್ಲಿ 30-35°C ತಾಪಮಾನ ದಾಖಲಾಗಿದೆ.
ಹವಾಮಾನ ಇಲಾಖೆಯ ಎಚ್ಚರಿಕೆ (Weather telecast department warning) :
ಜನರು ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸಲಹೆ ನೀಡಿದೆ. ಪ್ರವಾಸಿಗರು, ರೈತರು ಮತ್ತು ಮೀನುಗಾರರು ಈ ಮುನ್ಸೂಚನೆಯ ಆಧಾರದಲ್ಲಿ ತಕ್ಷಣ ಕ್ರಮ ಕೈಗೊಳ್ಳುವುದು ಉತ್ತಮ. ಮಳೆಯಾದ ನಂತರ ನೆರೆ ಪ್ರವಾಹದ ಆತಂಕವಿರುವ ಪ್ರದೇಶಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕಾಗಿದೆ.
ಹವಾಮಾನ ವೈಪರೀತ್ಯಗಳ (Weather extremes) ಪರಿಣಾಮದಿಂದ ತೋಟಗಾರಿಕೆ, ಕೃಷಿ ಮತ್ತು ಸಾಮಾನ್ಯ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ರಾಜ್ಯ ಸರ್ಕಾರಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಶಿಫಾರಸು ಮಾಡಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Sagari leads the ‘Government Schemes’ vertical at NeedsOfPublic.in, where she decodes the latest Central and State government policies for the common citizen. She has over 3 years of experience tracking welfare programs like PM Kisan, Ayushman Bharat, and State Ration updates. Her goal is to ensure every reader understands their eligibility and benefits without confusion. Sagari strictly verifies all updates from official government portals before publishing. Outside of work, she is an advocate for digital literacy in rural India.”
Connect with Sagari:


WhatsApp Group




