ಎಲ್ಲರಿಗೂನ ಮಸ್ಕಾರ. ಇವತ್ತಿನ ವರದಿಯಲ್ಲಿ, ರೇಷನ್ ಕಾರ್ಡ್ ತಿದ್ದುಪಡೆಗೆ (Amendent of Ration card ) ವಿಸ್ತರಣೆ ಮತ್ತು ಎಲ್ಲೆಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ :
ಅನ್ನ ಭಾಗ್ಯ(Annabhagya), ಗೃಹಲಕ್ಷ್ಮಿ ಯೋಜನೆ(Gruhalaxmi yojana) ಫಲಾನುಭವಿಗಳು ನಿವಾಗಬೇಕೆಂದರೆ ನಿಮಗೆ ಒಂದು ಸುವರ್ಣ ಅವಕಾಶ ದೊರಕಿದೆ . ಹೌದು, ಅದೇನಂದರೆ ರೇಷನ್ ಕಾರ್ಡ್ ತಿದ್ದುಪಡೆ ಮಾಡಿಸಿಕೊಳ್ಳುವುದರಲ್ಲಿ ನಿಮಗೆ ಇನ್ನೊಂದು ಅವಕಾಶ ಸಿಕ್ಕಿದೆ. ಈ ರೇಷನ್ ಕಾರ್ಡ್ ತಿದ್ದುಪಡಿ (correction of Ration card) ಮಾಡಿಸಿಕೊಳ್ಳುವುದರಿಂದ ಈ ಮೇಲಿನ ಎರಡು ಯೋಜನೆಗಳ ಪ್ರಯೋಜನಗಳನ್ನು ನೀವೂ ಮಾಡಿಕೊಳ್ಳಬಹುದಾಗಿದೆ.
ಹೌದು ಇದೀಗ ಈ ಹಿಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ಅಂತಲೆ ಅಕ್ಟೋಬರ್ 5 ರಿಂದ 13ರವರೆಗೆ ರಾಜ್ಯದಲ್ಲಿ ತಿದ್ದುಪಡಿಗೆ ಅವಕಾಶ ಸಿಕ್ಕಿತ್ತು ಆದರೆ ಬಹಳಷ್ಟು ಕಡೆ ಸರ್ವರ್ ಸಮಸ್ಯೆ(Server issues) ಕಾರಣದಿಂದ ತಿದ್ದುಪಡೆ ಕಾರ್ಯ ಪೂರ್ಣಗೊಳ್ಳದಿರುವುದರಿಂದ ಆಹಾರ ಇಲಾಖೆಯು ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶವನ್ನು ನೀಡುವುದರ ಮೂಲಕ ವಿಸ್ತರಣೆ ಮಾಡಿದೆ. ಅದರ ಜೊತೆಗೆ ರಾಜ್ಯದ 29 ಜಿಲ್ಲೆಗಳಲ್ಲಿ ಹೊಸ ದಿನಾಂಕಗಳನ್ನು ನಿಗದಿ ಮಾಡಿ ಆಹಾರ ಇಲಾಖೆ ಆದೇಶ ಹೊರಡಿಸಿದೆ.
ಈ ಜಿಲ್ಲೆಗಳಿಗೆ 9 ದಿನಗಳ ರೇಷನ್ ಕಾರ್ಡ್ ತಿದ್ದುಪಡಿಯ ಅವಕಾಶ :
ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ 9 ದಿನ ಅವಕಾಶವನ್ನು ನೀಡಿದೆ ಹಾಗಾದ್ರೆ ಯಾವೆಲ್ಲ ಜಿಲ್ಲೆಗಳಿಗೆ ಆ ಅವಕಾಶವನ್ನು ನೀಡಿದೆ ಎಂದು ಸಂಪೂರ್ಣವಾಗಿ ತಿಳಿದುಕೊಳ್ಳೋಣ ಬನ್ನಿ.
ಮೊದಲ ಹಂತದಲ್ಲಿ ಅಕ್ಟೋಬರ್ 16, 17 ಮತ್ತು 18 ರಂದು ಬಾಗಲಕೋಟ್, ಬೆಳಗಾವಿ ,ಚಾಮರಾಜಪೇಟೆ, ಚಿಕ್ಕಮಗಳೂರು ,ದಕ್ಷಿಣ ಕನ್ನಡ ,ಧಾರವಾಡ ,ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ ,ಮೈಸೂರು, ಉಡುಪಿ ,ಉತ್ತರ ಕನ್ನಡ, ವಿಜಯಪುರ್ ಸೇರಿ 15 ಜಿಲ್ಲೆಯ ಪಡಿತರ ಚೀಟಿದಾರರು (Ration card holders) ತಿದ್ದುಪಡಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಎರಡನೇ ಹಂತದಲ್ಲಿ ಅಕ್ಟೋಬರ್ 19 ,20, 21 ರಂದು ದಾವಣಗೆರೆ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕಲಬುರ್ಗಿ, ಕೋಲಾರ್, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯನಗರ ಸೇರಿ 14 ಜಿಲ್ಲೆಯ ರೇಷನ್ ಕಾರ್ಡ್ ಹೊಂದಿರುವವರು (Ration card holders) ತಿದ್ದುಪಡಿ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಇನ್ನು ಈ ತಿದ್ದುಪಡಿಯ ಸಮಯವನ್ನು ತಿಳಿಯಬೇಕೆಂದರೆ ಎಲ್ಲಾ 29 ಜಿಲ್ಲೆಗಳಲ್ಲಿಯೂ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ಬಯೋಮೆಟ್ರಿಕ್ ಸೌಲಭ್ಯವನ್ನು (Bio metric facility) ಇರುವಂತ ಕರ್ನಾಟಕ ಒನ್(Karnataka One Centre) ಹಾಗೂ ಗ್ರಾಮ್ ಒನ್ ಕೇಂದ್ರಗಳಲ್ಲಿ(Grama one centre ) ರೇಷನ್ ಕಾರ್ಡ್ ತಿದ್ದುಪಡೆ ಮಾಡಿಸಿಕೊಳ್ಳಬಹುದಾಗಿದೆ .
ನೀವೂ ಕೂಡಾ ಏನಾದ್ರೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳವರಾಗಿದ್ದರೆ ತಡ ಮಾಡದೆ ನಿಗದಿ ಪಡಿಸಿದ ದಿನಾಂಕದಲ್ಲಿ ತಪ್ಪದೆ ಹೋಗಿ ತಿದ್ದುಪಡಿ ಮಾಡಿಸಿಕೊಳ್ಳಿ ಎಂದು ಹೇಳುತ್ತೇವೆ. ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದನ್ನೂ ಓದಿ: BSNL Offers : ಕೇವಲ 99 ರೂ.ಗೆ ಹೊಸ ಭರ್ಜರಿ ಆಫರ್ ಘೋಷಣೆ ಮಾಡಿದ BSNL
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group







