ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಬಿಗ್ ಬಾಸ್ ಸೀಸನ್ 10(BigBoss season 10) ರ ಸ್ಪರ್ದಿಯಾದ ಸಂತೋಷ ವರ್ತೂರ್(Santhosh varthur) ಅವರನ್ನು ಅರೆಸ್ಟ್ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಏಕೆ ಈ ಸ್ಪರ್ಧೆಯನ್ನು ಅರೆಸ್ಟ್ ಮಾಡಲಾಗಿದೆ?, ಅರೆಸ್ಟ್ ಮಾಡಿದ ಸಂತೋಷ ಅವರನ್ನು ಮತ್ತೆ ಬಿಗ್ ಬಾಸ್ ಗೆ ತನಿಖೆ ಮುಗಿದ ನಂತರ ಕರೆ ತರಲಾಗುವುದೇ ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಬಿಗ್ ಬಾಸಿನ ಸಂತೋಷ ವರ್ತೂರ್ ಅರೆಸ್ಟ್ :
ನಿಮಗೆಲ್ಲರಿಗೂ ತಿಳಿದಿರುವಂತೆ ಬಿಗ್ ಬಾಸ್ ಸೀಸನ್ 10 ಎರಡು ವಾರದಿಂದ ಪ್ರಸಾರವಾಗುತ್ತಿದೆ. ಇದರಲ್ಲಿ ಸ್ಪರ್ದಿಯಾದ ಸಂತೋಷ್ ವರ್ತೂರ್ ಅವರನ್ನು ಹುಲಿಯ ಉಗುರಿನ ಪೆಂಡೆಂಟ್(Tiger Nail Pendant) ಅನ್ನು ಧರಿಸಿದ ಕಾರಣಕ್ಕಾಗಿ, ಬಿಗ್ ಬಾಸ್ ಸೆಟ್ಟಿನಿಂದಲೇ ಅರೆಸ್ಟ್ ಮಾಡಲಾಗಿದೆ. ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿಯಲ್ಲಿ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿದೆ. ಬಿಗ್ ಬಾಸ್ ಮನೆಯಿಂದ ಹೊರ ಕರೆದು ನಂತರ ಅವರನ್ನು ಅರೆಸ್ಟ್ ಮಾಡಲಾಗಿದೆ. ವನ್ಯ ಜೀವಿಗಳ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಈ ರೀತಿಯ ವನ್ಯಪ್ರಾಣಿಗಳ ಉಗುರನ್ನು ಧರಿಸುವಂತಿಲ್ಲ. ಆದ್ದರಿಂದ ಪೊಲೀಸರು ಇವರನ್ನು ಕಷ್ಟಡಿಗೆ ತೆಗೆದುಕೊಂಡಿದ್ದಾರೆ.
ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ ಅರೆಸ್ಟ್ ಮಾಡಿರುವ ಸುದ್ದಿ ಈಗ ವೈರಲ್ ಆಗಿದೆ. ಅವರು ಭಾನುವಾರ ರಾತ್ರಿ ಧರಿಸಿದ್ದ ಅದೇ ಡ್ರೆಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ರನ್ನು ಅರೆಸ್ಟ್ ಮಾಡಲಾಗಿದೆ.
ದೂರು ಸಲ್ಲಿಸಿದವರು ಯಾರು ಗೊತ್ತೇ?:
ರಾಮೋಹಳ್ಳಿ ಅರಣ್ಯಾಧಿಕಾರಿಗಳು ಬಿಗ್ ಬಾಸ್ ಮನೆಯಿಂದ ಹೊರ ಕರೆದು ಸಂತೋಷ ವರ್ತೂರ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಸದ್ಯಕ್ಕೆ ಅರಣ್ಯ ಅಧಿಕಾರಿಗಳಿಂದ ಸಂತೋಷ ಅವರ ವಿಚಾರಣೆ ನಡೆಯುತ್ತಿದೆ. ನಿಜವಾಗಿಯೂ ಆ ಪೆಂಡೆಂಟ್ ಹುಲಿಯ ಉಗರಿನಿಂದೇ, ಅದನ್ನು ಎಲ್ಲಿಂದ ತೆಗೆದುಕೊಂಡಿದ್ದಾರೆ ಹೀಗೆ ಹಲವಾರು ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಎರಡು ದಿನಗಳ ಹಿಂದೆಯೇ ಶರತ್ ಎನ್ನುವವರು, ಹುಲಿಯ ಊರಿನ ಪದಕವನ್ನು ಹಾಕಿಕೊಂಡಿರುವುದರ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದರು. ಅಕ್ಷರ ತವರು ಇದರ ಹೊರತಾಗಿ ಮಾಧ್ಯಮಗಳ ಎದುರು ಮಾತನಾಡಿ, ನಿಯಮಗಳು ಎಲ್ಲರಿಗೂ ಒಂದೇ ಎಂದು ಹೇಳಿದ್ದಾರೆ. ಬೆಳಗಿನ ಜಾವ ರಾಮನಗರದ ಪೊಲೀಸರು ಬಿಗ್ ಬಾಸ್ ಮನೆಗೆ ಬಂದು ಸಂತೋಷ ರವರನ್ನು ಬಂಧಿಸಿದ್ದಾರೆ. ಬಿಗ್ ಬಾಸ್ ಮನೆಯಿಂದ ಒಮ್ಮೆ ಹೊರಬಂದ ಮೇಲೆ ಮತ್ತೆ ಅವರನ್ನು ಬಿಗ್ ಬಾಸ್ ಮನೆಗೆ ಕರೆ ತೆಗೆದುಕೊಳ್ಳುವುದು ಅಸಾಧ್ಯದ ಮಾತು. ಅದರಲ್ಲಿಯೂ ಅರೆಸ್ಟ್ ಆದ ವ್ಯಕ್ತಿಯನ್ನು ಮತ್ತೆ ತೆಗೆದುಕೊಳ್ಳುವುದು ಕಠಿಣವೆನ್ನಿಸುತ್ತಿದೆ. ಬಿಗ್ ಬಾಸ್ ಜರ್ನಿಯಲ್ಲಿ ಇದು ಪ್ರಥಮ ಬಾರಿಗೆ ನಡೆಯುತ್ತಿರುವ ಘಟನೆಯಾಗಿದೆ.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group






