ಬೆಂಗಳೂರು : ಭೂ ಒಡೆತನ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭೂ ರಹಿತ ಕೃಷಿ ಕಾರ್ಮಿಕರಿಗೆ ಭೂಮಿ ಖರೀದಿಸಿ ಕೃಷಿ ಜಮೀನು ಒದಗಿಸುವ ಕುರಿತು ಇದೀಗ ರಾಜ್ಯ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತಗಳಿಂದ ಅನುಷ್ಠಾನಗೊಳಿಸುತ್ತಿರುವ ಭೂ ಒಡೆತನ ಯೋಜನೆಗೆ ಸಂಬಂಧಿಸಿದಂತೆ, ಸರ್ಕಾರದ ಕಂದಾಯ ಇಲಾಖೆ (ನೋಂದಣಿ ಮತ್ತು ಮುದ್ರಾಂಕ ಇಲಾಖೆ) ವಿವಿಧ ತರಹದ ಜಮೀನುಗಳಿಗೆ ಮಾರ್ಗಸೂಚಿ ಬೆಲೆಯನ್ನು ನಿರ್ಧರಿಸಿ ಕಾಲಕಾಲಕ್ಕೆ ಹೊರಡಿಸುವ ಅಧಿಸೂಚನೆಗಳನ್ನು ಅನುಸರಿಸಿ ಪ್ರತಿ ಎಕರೆಗೆ ಮಾರ್ಗಸೂಚಿ ದರ (guidance value) ದಂತೆ ಭೂ ಒಡೆತನ ಯೋಜನೆಯಡಿಯಲ್ಲಿ ಖರೀದಿಸಲು ಅನುಮೋದನೆ ನೀಡಿ ಮೇಲೆ ಓದಲಾದ ಕ್ರಮ ಸಂಖ್ಯೆ (1) ರಲ್ಲಿ ಆದೇಶಿಸಿದೆ.
ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತಗಳಿಂದ ಅನುಷ್ಠಾನಗೊಳಿಸುತ್ತಿರುವ ಭೂ ಒಡೆತನ ಯೋಜನೆಯಡಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಭೂರಹಿತ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿ ಮಾಡಿ ವಿತರಿಸಲು ಜಾರಿಯಲ್ಲಿರುವ ಘಟಕ ವೆಚ್ಚ, ರೂ.10.00 ರಿಂದ 15.00 ಲಕ್ಷಗಳವರೆಗೆ ಹೆಚ್ಚಿಸಿ ಮೇಲೆ ಓದಲಾದ ಕ್ರಮ ಸಂಖ್ಯೆ (2) ರಲ್ಲಿ ಆದೇಶಿಸಿದೆ.
ಸದರಿ ಯೋಜನೆಯಡಿ ಫಲಾಪೇಕ್ಷಿಗಳಿಗೆ ಭೂಮಿ ಒದಗಿಸುವ ಸಂಬಂಧ ಪಡೆಯಬೇಕಾದ ವಿವಿಧ ದಾಖಲೆಗಳನ್ನು ಕ್ರೋಡೀಕರಿಸುವುದರಲ್ಲಿ ವಿಳಂಬವಾಗುತ್ತಿದ್ದು, ಇದರಿಂದಾಗಿ ಫಲಾಪೇಕ್ಷಿಗಳಿಗೆ ತ್ವರಿತವಾಗಿ ಯೋಜನೆಯ ಸೌಲಭ್ಯಗಳನ್ನು ನೀಡಲು ಸಾದ್ಯವಾಗದ ಕಾರಣ, ಈ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿ ಸೂಕ್ತ ಆದೇಶ ಹೊರಡಿಸುವಂತೆ ವ್ಯವಸ್ಥಾಪಕ ನಿರ್ದೇಶಕರು, ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಇವರು ಮೇಲೆ ಓದಲಾದ ಕ್ರಮ ಸಂಖ್ಯೆ (3) ರಲ್ಲಿ ಕೋರಿರುತ್ತಾರೆ.






ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Shivaraj is the Lead Editor at NeedsOfPublic.in with over 4 years of experience tracking Indian government schemes and educational updates. He specializes in simplifying complex notifications from the Central and State governments to help the public understand their benefits. Before joining NeedsOfPublic, Shivaraj worked as a Content Writer focusing on Civic issues. When he isn’t decoding the latest circulars, he enjoys reading about digital literacy.”
Follow Shivaraj on:


WhatsApp Group




