ಕರ್ನಾಟಕ ರಾಜ್ಯ(Govt of Karnataka) ದ ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಒಂದು ಉತ್ತಮ ಸುದ್ದಿ!
ರಾಜ್ಯ ಸರ್ಕಾರವು ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(For sheep and goat farmers) ಉತ್ತೇಜಿಸಲು ಸಾಲ( loan) ಮತ್ತು ಸಹಾಯಧನ ಯೋಜನೆಗಳನ್ನು(Subsidy scheme) ಜಾರಿಗೆ ತಂದಿದೆ. ಈ ಯೋಜನೆಗಳ ಉದ್ದೇಶ ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಆರ್ಥಿಕ ನೆರವು ನೀಡುವುದು ಮತ್ತು ಈ ಉದ್ಯಮದ ಅಭಿವೃದ್ಧಿಯನ್ನು ಉತ್ತೇಜಿಸುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
20+1 ಕುರಿಗಾಹಿ ಯೋಜನೆ: ಏಳು ಸಂಘಗಳ ಸದಸ್ಯರಿಗೆ ಅವಕಾಶ
ಕುರಿ ಸಾಕಾಣಿಕೆಯಲ್ಲಿ ಸ್ವಾಭಿಮಾನಿ ಜೀವನ ರೂಪಿಸಲು ಉತ್ತಮ ಅವಕಾಶ. ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ(Karnataka Sheep and Wool Development Corporation), ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆಗಳ ಸಾಕಾಣಿಕೆದಾರರ ಸಂಘಗಳ ಮಹಾಮಂಡಳಗಳ ಜೊತೆ ಸೇರಿ ಏಳು ಸಂಘಗಳ ಸದಸ್ಯರಿಗೆ 20+1 ಕುರಿಗಾಹಿ ಯೋಜನೆಯಡಿ ಸಾಲ ಮತ್ತು ಸಹಾಯಧನ ನೀಡಲು ಮುಂದೆ ಬಂದಿದೆ.
ಫೆಬ್ರವರಿ 19, 2024 ರೊಳಗಾಗಿ ನಿಮ್ಮ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಮೂಲಕ ನಿಗದಿತ ಅರ್ಜಿಯನ್ನು ದಾಖಲಾತಿಗಳೊಂದಿಗೆ ನಿಗಮದ ಕಛೇರಿಗೆ ಸಲ್ಲಿಸಿ. ಈ ಯೋಜನೆಯ ಲಾಭ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ.
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ಒಂದು ಪ್ರಮುಖ ಹೇಳಿಕೆ ನೀಡಿದ್ದಾರೆ. ಈ ಯೋಜನೆಯು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾತ್ರ ಸೀಮಿತವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಯೋಜನೆಯ ಲಾಭ ಪಡೆಯಲು ಬಯಸುವವರು ಸಂಘದ ಸದಸ್ಯರಾಗಿರಬೇಕು ಎಂದು ಅವರು ತಿಳಿಸಿದ್ದಾರೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ(Amruta Swabhimani Kurigahi Yojana):
ಕುರಿ ಸಾಕಾಣಿಕೆಯನ್ನು ಉತ್ತೇಜಿಸುವ ಮತ್ತು ಕುರಿಗಾರರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಉದ್ದೇಶದಿಂದ, ಸರ್ಕಾರವು ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯು ರಾಜ್ಯದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಉಚಿತವಾಗಿ 20 ಕುರಿ ಮತ್ತು ಒಂದು ಮೇಕೆ ನೀಡಲಿದೆ.
ಯೋಜನೆಯು ಒಟ್ಟು 324 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಜಾರಿಗೊಳ್ಳಲಿದ್ದು, ಕುರಿ ಸಾಕಾಣಿಕೆಯನ್ನು ಉತ್ತೇಜಿಸುವುದು, ಉಣ್ಣೆ ಉತ್ಪಾದನೆಯನ್ನು ಹೆಚ್ಚಿಸುವುದು, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿ ಮಾಡುವುದು ಮತ್ತು ಕುರಿಗಾರರ ಜೀವನಮಟ್ಟವನ್ನು ಸುಧಾರಿಸುವುದು ಇದರ ಮುಖ್ಯ ಉದ್ದೇಶಗಳು.
ಯೋಜನೆಯಲ್ಲಿ ಭಾಗವಹಿಸಲು, ಫಲಾನುಭವಿಗಳು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಸದಸ್ಯರಾಗಿರಬೇಕು ಮತ್ತು ಕುರಿಗಳನ್ನು ಸಾಕಲು ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಹೊಂದಿರಬೇಕು.
ಈ ಯೋಜನೆಯಡಿ, ರಾಜ್ಯದ 20,000 ಕುರಿಗಾಹಿಗಳಿಗೆ ತಲಾ 1.75 ಲಕ್ಷ ರೂ. ಸಹಾಯಧನ ನೀಡಲಾಗುವುದು. ಈ ಹಣವನ್ನು ಕುರಿಗಳಿಗೆ ಆಹಾರ, ವಸತಿ, ಆರೋಗ್ಯ ರಕ್ಷಣೆ ಮತ್ತು ಇತರ ಅಗತ್ಯಗಳನ್ನು ಖರೀದಿಸಲು ಬಳಸಬಹುದು.
ಯಾರು ಅರ್ಹರು?
ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರಬೇಕು.
ಪ್ರತಿ 15 ಸಾವಿರ ಕುರಿ-ಮೇಕೆಗಳಿಗೆ ಒಂದು ಸಹಕಾರ ಸಂಘದಂತೆ ಇದ್ದು, ಸದಸ್ಯರಾದ ಕುರಿಗಾರರು ಮಾತ್ರ ಈ ಯೋಜನೆಯಡಿ ಕುರಿ-ಮೇಕೆ ಪಡೆಯಲು ಅರ್ಹರು.
ಪ್ರತಿ ಹೋಬಳಿಯಲ್ಲಿ 15 ಸಾವಿರ ಕುರಿ-ಮೇಕೆಗಳಿಗೆ ಒಂದು ಸಹಕಾರ ಸಂಘ ಸ್ಥಾಪಿಸಲಾಗುವುದು. ಈ ಸಂಘದ ಸದಸ್ಯರಾದ ಕುರಿಗಾರರು ಮಾತ್ರ ಕುರಿ-ಮೇಕೆಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.
ಈ ಯೋಜನೆಯು ಕರ್ನಾಟಕದ ಕುರಿಗಾಹಿಗಳಿಗೆ ಒಂದು ಅಮೂಲ್ಯವಾದ ಅವಕಾಶವಾಗಿದೆ. ಈ ಯೋಜನೆಯ ಉಪಯೋಗವನ್ನು ಪಡೆದುಕೊಂಡು ತಮ್ಮ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಬೇಕೆಂದು ಕುರಿಗಾಹಿಗಳಿಗೆ ಕರೆ ನೀಡಲಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಕೇಂದ್ರದಿಂದ ಭರ್ಜರಿ ಆಫರ್ , ಬರೀ 29 ರೂ. ಗೆ ಕೆಜಿ ಅಕ್ಕಿ, ಖರೀದಿಗೆ ಮುಗಿಬಿದ್ದ ಜನ, ಇಲ್ಲಿ ಖರೀದಿಸಿ.
- ಗೃಹಲಕ್ಷ್ಮಿ 2000/- ಪೆಂಡಿಂಗ್ ಹಣ ಜಮಾ, 6ನೇ ಕಂತಿನ ಹಣ ಇನ್ನೂ ಬಂದಿಲ್ವಾ? ಇಲ್ಲಿದೆ ಕಾರಣ
- ಮಹಿಳೆಯರಿಗೆ ಗುಡ್ ನ್ಯೂಸ್! ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ
- ಆರ್ಟಿಇ ಶಾಲೆಗಳ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ, ಈ ದಿನಾಂಕ ಅರ್ಜಿ ಪ್ರಾರಂಭ! ಇಲ್ಲಿದೆ ಸಂಪೂರ್ಣ ಮಾಹಿತಿ
- ಬೆಳೆಹಾನಿ ಪರಿಹಾರದ ಹಣ ಇನ್ನೂ ಬಂದಿಲ್ವಾ? ಆಧಾರ್ ಲಿಂಕ್ ಆಗದೇ ಇರುವ ಪಟ್ಟಿ ಬಿಡುಗಡೆ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group






