ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ 2022-23 : ಈಗಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸುವ ವಿಧಾನ

ಎಲ್ಲರಿಗೂ ನಮಸ್ಕಾರ. ಈ ಲೇಖನದಲ್ಲಿ ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ, ಅಂದರೆ ಧರ್ಮಸ್ಥಳ ಸ್ವಸಾಯ ಸಂಘದ ಸದಸ್ಯರ ಮಕ್ಕಳಿಗೆ ಇರುವಂತಹ ವಿದ್ಯಾರ್ಥಿವೇತನದ ಬಗ್ಗೆ ನಿಮಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಯಾವ ವತಿಯಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಅಪ್ಲಿಕೇಶನ್ ಪ್ರಕ್ರಿಯೆ, ಆಯ್ಕೆ ಪ್ರಕ್ರಿಯೆ ಮತ್ತು ಹೆಚ್ಚಿನ ಇದರ ಸಂಬಂಧಿತ ವಿವರಗಳನ್ನು ಪಡೆಯಲು ಈ ಲೇಖನವನ್ನು ಓದಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಖಾಸಗಿ ಕಂಪನಿಗಳ ಕಡೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ- ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.)ನ ಬೆಳ್ಳಿಹಬ್ಬದ ಆಚರಣೆಯ ಸವಿನೆನಪಿಗಾಗಿ, ಯೋಜನೆಯ ಪಾಲುದಾರ ಕುಟುಂಬದ ಸ್ವ-ಸಹಾಯ ಹಾಗೂ ಪ್ರಗತಿಬಂಧು ಸಂಘಗಳ, ಆರ್ಥಿಕವಾಗಿ ಹಿಂದುಳಿದ ಸದಸ್ಯರ ಮಕ್ಕಳ ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣಕ್ಕೆ ನೆರವಾಗಲು ಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು 2007 ರಲ್ಲಿ ಸುಜ್ಞಾನನಿಧಿ ಶಿಷ್ಯವೇತನ ಕಾರ್ಯಕ್ರಮವನ್ನು ಪ್ರಾರಂಭಿಸಿದರು.

ಸುಜ್ಞಾನನಿಧಿ ಕಾರ್ಯಕ್ರಮದಡಿಯಲ್ಲಿ ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ 2 ರಿಂದ 5 ವರ್ಷ ಅವಧಿಯ ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣಗಳಿಗೆ ಸಂಸ್ಥೆಯು ನಿಗದಿಪಡಿಸಿದ ಆಯ್ದ ಕೋರ್ಸಿಗೆ ಅನುಗುಣವಾಗಿ ರೂ 400 ರಿಂದ ರೂ 1000 ಸಾವಿರದವರೆಗೆ ಮಾಸಿಕ ಶಿಷ್ಯವೇತನವನ್ನು ಪಾವತಿಸಲಾಗುತ್ತಿದೆ. ಕರ್ನಾಟಕ ರಾಜ್ಯಾದ್ಯಂತ ಇದುವರೆಗೂ 52 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡಿರುತ್ತಾರೆ. ಸದ್ರಿ ವಿದ್ಯಾರ್ಥಿಗಳಿಗೆ ರೂ. 67 ಕೋಟಿಗೂ ಅಧಿಕ ಶಿಷ್ಯವೇತನವನ್ನು ಈವರೆಗೆ ವಿತರಿಸಲಾಗಿದೆ.

ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

( NEW STUDENT) ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು :

  1. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಪ್ರಾಯೋಜಿಸುತ್ತಿರುವ ಪ್ರಗತಿಬಂಧು ಹಾಗೂ ಸ್ವ-ಸಹಾಯ ತಂಡಗಳಲ್ಲಿ ದಿನಾಂಕ 30.06.2021 ಕ್ಕಿಂತ ಮೊದಲು ಪ್ರಾರಂಭಿಸಲಾದ ಸಂಘದಲ್ಲಿ ಸದಸ್ಯರಾಗಿದ್ದು ವ್ಯವಹಾರದಲ್ಲಿ ಎಸ್, ಎ ಮತ್ತು ಬಿ ಶ್ರೇಣಿಯಲ್ಲಿರುವ ಗುಂಪುಗಳ ಸದಸ್ಯರ ಮಕ್ಕಳು ಅರ್ಜಿ ಸಲ್ಲಿಸಬಹುದು.telee

  2. ತಂದೆ, ತಾಯಿ ಅಥವಾ ಒಂದೇ ಮನೆಯಲ್ಲಿ ವಾಸ ಮಾಡುವ, ಒಂದೇ ರೇಷನ್ ಕಾರ್ಡ್ ಹೊಂದಿರುವ ಸಂಘದ ಯಾವುದೇ ಸದಸ್ಯರ ಒಬ್ಬ ಮಗ/ಮಗಳಿಗೆ (ಒಂದು ಕುಟುಂಬದಿಂದ ಒಂದು ವಿದ್ಯಾರ್ಥಿಗೆ) ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

  3. ಹಳೆಯ ಸಂಘ ಬರ್ಕಾಸ್ತುಗೊಂಡು ಹೊಸ ಸಂಘಕ್ಕೆ ಸೇರ್ಪಡೆಯಾಗಿ ಕಡ್ಡಾಯವಾಗಿ ಒಂದು ವರ್ಷ ಸಂಪೂರ್ಣಗೊಂಡಿರುವ ಸಂಘದ ಸದಸ್ಯರ ಮಕ್ಕಳು ಅರ್ಜಿ ಸಲ್ಲಿಸಬಹುದು.

  4.  SSLC/PUC/DEGREE ಅಥವಾ ಅರ್ಹ ಕೋರ್ಸಿನ ಸೇರ್ಪಡೆಗೆ ನಿಗದಿಪಡಿಸಿದ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ. ಶಿಷ್ಯವೇತನಕ್ಕೆ ಆಯ್ಕೆ ಮಾಡಿದ ಕೋರ್ಸಿನ ಪ್ರಥಮ ವರ್ಷದ ಮೊದಲ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು.
  5. ಆಯ್ಕೆಯಾದ ವಿದ್ಯಾರ್ಥಿ/ನಿಯು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಉಳಿತಾಯ ಖಾತೆಯನ್ನು ಹೊಂದಿರಬೇಕು. UPLOAD ಮಾಡುವ ಬ್ಯಾಂಕ್ ಪಾಸ್‌ ಪುಸ್ತಕದಲ್ಲಿ ಬ್ಯಾಂಕ್ ವ್ಯವಸ್ಥಾಪಕರ ಸಹಿ ಮತ್ತು ಮುದ್ರೆ ಕಡ್ಡಾಯವಾಗಿ ಇರಬೇಕು. ಸದ್ರಿ ಖಾತೆಯಲ್ಲಿ ವ್ಯವಹಾರಗಳು ಪ್ರಸ್ತುತ ಮೂರು ತಿಂಗಳಿನಿಂದ ಚಾಲ್ತಿಯಲ್ಲಿರಬೇಕು. ಖಾತೆ ಸಂಖ್ಯೆ ಕಾಣಿಸದೇ ಇದ್ದಲ್ಲಿ ಕೈ ಬರಹದ ಖಾತೆ ಸಂಖ್ಯೆ, ಬ್ರಾಂಚ್ ಹೆಸರು ಮತ್ತು IFSC CODE ನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.
  6. 01.4.2022 ನಂತರ ಕಾಲೇಜಿಗೆ ದಾಖಲಾದ ಎಲ್ಲಾ ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (ಕಾಲೇಜು ದೃಢೀಕರಣದಲ್ಲಿ ಕಡ್ಡಾಯವಾಗಿ ಕಾಲೇಜಿಗೆ ದಾಖಲಾದ ದಿನಾಂಕ ನಮೂದಿಸಿರಬೇಕು)
  7. ಸುಜ್ಞಾನನಿಧಿ ಶಿಷ್ಯವೇತನವು ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ ಸಂಸ್ಥೆಯು ಆಯ್ಕೆ ಮಾಡಿ ನಿಗದಿಪಡಿಸಿದ 2 ರಿಂದ 5 ವರ್ಷ ಅವಧಿಯ ಕೆಲವು ವೃತ್ತಿಪರ ಹಾಗೂ ತಾಂತ್ರಿಕ ಶಿಕ್ಷಣದ ಕೋರ್ಸುಗಳಿಗೆ, ಸಂಸ್ಥೆಯ ನಿಯಮಾನುಸಾರ ನಿಗದಿ ಪಡಿಸಿದ ಕೋರ್ಸಿಗೆ ಅನುಗುಣವಾಗಿ ರೂ 400 ರಿಂದ ರೂ 1000 ಸಾವಿರದವರೆಗೆ ಮಾತ್ರವೇ ಶಿಷ್ಯವೇತನ ನೀಡಲಾಗುವುದು.

  8. ವಿದ್ಯಾರ್ಥಿಗಳು Online ಮೂಲಕ Sujnananidhi App ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಈ ಮಾಹಿತಿ ಪತ್ರವನ್ನು ಸರಿಯಾಗಿ ಓದಿಕೊಂಡು ಅಗತ್ಯವಾದ ಮಾಹಿತಿಯನ್ನು ಹಾಗೂ ದಾಖಲಾತಿಗಳನ್ನು ಸಂಗ್ರಹಿಸಿಕೊಂಡ ನಂತರ, ಅರ್ಜಿ ಸಲ್ಲಿಕೆಯ ಸಂದರ್ಭದಲ್ಲಿ ಅಗತ್ಯ ಎಲ್ಲಾ ಪೂರಕ ದಾಖಲಾತಿಗಳೊಂದಿಗೆ ದಿನಾಂಕ 31.03.2023ರೊಳಗೆ, Online ಮೂಲಕ Sujnananidhi App ನಲ್ಲಿ ರಿಜಿಸ್ಟ್ರೇಷನ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ ಅರ್ಜಿ ಸಲ್ಲಿಕೆ ವಿವರ

ಆಯ್ಕೆ ಮಾಡಬಹುದಾದ ಕೋರ್ಸ್‌ಗಳು:

BE, B.TECH, MBBS, BAMS, BDS, BHMS, BVA, BNYS, BVSC, MBA, D.Ed, B.Ed, NURSING(General), BSC(NURSING), ITI, LAB TECHNICIAN, DIPLOMA, LLB, PARAMEDICAL SCIENCE, BSC (HORTI), BSC (AGRI), BSC (FORESTRY), BSC (FISHERIES,) PHARM.D, PHYSIOTHERAPY, DIPLOMA AGRI, B.PHARM, D.PHARM, B.ARCHITECTURE.

ಇದನ್ನೂ ಓದಿ: ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ 

ಯಾರಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ

  1. ಸುಜ್ಞಾನನಿಧಿ ಶಿಷ್ಯವೇತನ ಪಡೆದ ನಂತರ ವಿನಾಕಾರಣ ಪರೀಕ್ಷೆಗಳಲ್ಲಿ ಅನುತ್ತೀರ್ಣಗೊಂಡು ಮುಂದಿನ ತರಗತಿಗೆ ಹೋಗಲು ಅರ್ಹರಲ್ಲದ, ಅಂತೆಯೇ ಶಿಕ್ಷಣವನ್ನು ಮಧ್ಯದಲ್ಲೇ ಕೈ ಬಿಟ್ಟು ಬೇರೆ ಶಿಕ್ಷಣಕ್ಕಾಗಲಿ, ಬೇರೆ ವೃತ್ತಿಗಾಗಲಿ ಸೇರುವ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ಮುಂದುವರಿಸಲಾಗುವುದಿಲ್ಲ.
  2. ಯೋಜನೆಯ ಖಾಯಂ ಸಿಬ್ಬಂದಿಗಳ ಮಕ್ಕಳಿಗೆ ಸುಜ್ಞಾನನಿಧಿ ಶಿಷ್ಯವೇತನ ಲಭ್ಯವಿರುವುದಿಲ್ಲ.
  3. ಸುಜ್ಞಾನನಿಧಿ ಶಿಷ್ಯವೇತನವು SSLC, PUC, DEGREE ( 3 YEAR) BA, B-SC, B-COM, BBM, BCA, MA, M-SC, M-COM, MD, MCA, M-TECH, CA, POST BSC NURSING, ಒಂದು ವರ್ಷದ ಅವಧಿಯ ಹಾಗೂ CERTIFICATE ಕೋರ್ಸ್‌ಗಳ ಶಿಕ್ಷಣಕ್ಕೆ ಅನ್ವಯವಾಗುವುದಿಲ್ಲ.
  4. LATERAL ENTRY ಮೂಲಕ ಎರಡನೇ ವರ್ಷದ ಕೋರ್ಸಿಗೆ ಪ್ರವೇಶ ಪಡೆಯುವ, CORESPONDENCE ಮೂಲಕ ದೂರ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ನೀಡಲಾಗುವುದಿಲ್ಲ.
  5. ತಾಂತ್ರಿಕ ಮತ್ತು ವೃತ್ತಿಪರ ಕೋರ್ಸಿಗೆ ಒಂದು ಬಾರಿ ಶಿಷ್ಯವೇತನ ಪಡೆದವರು ಎರಡನೇ ಬಾರಿಗೆ ಇತರ ಕೋರ್ಸುಗಳ ಅಧ್ಯಯನಕ್ಕೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ನೀಡಲಾಗುವುದಿಲ್ಲ. (ಉದಾ: DIPLOMA ಮೂಲಕ BE ಮಾಡುವ ವಿದ್ಯಾರ್ಥಿಗಳು)
  6. SDM ಎಜುಕೇಶನಲ್ ಟ್ರಸ್ಟ್ (ರಿ) ಉಜಿರೆ ಇಲ್ಲಿ ನೀಡುವ ಶಿಷ್ಯವೇತನ ಪಡೆಯುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ನೀಡಲಾಗುವುದಿಲ್ಲ.

Untitled 1 scaledtelee

ಇದನ್ನೂ ಓದಿ: ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ವಿದ್ಯಾರ್ಥಿಯು ಸಲ್ಲಿಸಬೇಕಾದ ದಾಖಲಾತಿಗಳು:

  1. SSLC ಅಂಕಪಟ್ಟಿ
  2. ಪ್ರಸ್ತುತ ವರ್ಷ ಅಧ್ಯಯನ ನಡೆಸುತ್ತಿರುವ ಕಾಲೇಜಿನ STUDY CERTIFICATE & FEES REGIEPT (ಪ್ರಸ್ತುತ ವರ್ಷ 2022-23ರಲ್ಲಿ ವಿದ್ಯಾರ್ಥಿಯು ಆಯ್ಕೆ ಮಾಡಿದ ಕೋರ್ಸ್‌ಗೆ ಪ್ರವೇಶ ಪಡೆದಿದ್ದಲ್ಲಿ ಮಾತ್ರ )

    ವಿದ್ಯಾರ್ಥಿಯು ಈ ಹಿಂದೆ ಅಧ್ಯಯನ ನಡೆಸಿದ ವಿದ್ಯಾಭ್ಯಾಸದ ಅಂಕಪಟ್ಟಿ (SSLC/PUC / DEGREE)

  3. ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ಪ್ರತಿ

  4. ಯೋಜನಾ ಕಛೇರಿಯ ಶಿಫಾರಸ್ಸು ಪತ್ರ
  5. ವಿದ್ಯಾರ್ಥಿ ಹಾಗೂ ತಂದೆಯ ಆಧಾರ್ ಕಾರ್ಡ್‌ ಕಡ್ಡಾಯ (ಒಂದು ವೇಳೆ ತಂದೆ ಇಲ್ಲದಿದ್ದಲ್ಲಿ ತಾಯಿಯ ಆಧಾರ್ ಕಾರ್ಡ್ ಒದಗಿಸುವುದು)
  6. ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.

ಸುಜ್ಞಾನನಿಧಿ App ಮುಖಾಂತರ Online ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದ್ದು, HARD COPY ಪ್ರತಿಯನ್ನು ಯಾವುದೇ ಕಾರಣಕ್ಕೂ ಅಂಚೆ ಮೂಲಕ ಸ್ವೀಕರಿಸಿ ಪರಿಗಣಿಸಲಾಗುವುದಿಲ್ಲ.

2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಸ್ತುತ ಪ್ರಥಮ ವರ್ಷದ ಮೊದಲ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. • ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಗ್ರಾಮಾಭಿವೃದ್ಧಿ ಯೋಜನೆಯ Website:www.skdrdpindia.org ನಲ್ಲಿರುವ Sujnananidhi App ನಲ್ಲಿ Online ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Online ಮೂಲಕ ಹೊಸ ಅರ್ಜಿ ಸಲ್ಲಿಸಲು 31.03.2023 ಕೊನೆಯ ದಿನಾಂಕವಾಗಿರುತ್ತದೆ.

ಇದನ್ನೂ ಓದಿ: ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.

ಅರ್ಜಿ ಸಲ್ಲಿಸುವ ವಿಧಾನ:

Step 1: ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು, ನೀವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಅಧಿಕೃತ ವೆಬ್‌ಸೈಟ್‌ಗೆಭೇಟಿ ನೀಡಿ.

Step 2: ಅರ್ಜಿ ಸಲ್ಲಿಸುವ ಅರ್ಹ ವಿದ್ಯಾರ್ಥಿಯು, ಮೊದಲು ತನ್ನ SSLC ಮಾರ್ಕ್ಸ್ ಕಾರ್ಡ್‌ ರಿಜಿಸ್ಟರ್ ನಂಬರ್ ನ ಮೂಲಕ, SKDRDP ಯ ಸುಜ್ಞಾನನಿಧಿ App ನಲ್ಲಿ ನೋಂದಾವಣೆ ಮಾಡಿಕೊಳ್ಳಬೇಕು ಆನಂತರ ವಿದ್ಯಾರ್ಥಿಯು ನೊಂದಾಯಿಸಿದ ದೂರವಾಣಿ ಸಂಖ್ಯೆಗೆ ಬರುವ USER ID & PASSWORD ನ ಬಳಸಿ ಸುಜ್ಞಾನನಿಧಿ App ನಲ್ಲಿ Login ಆಗಿ ನಂತರ Online ನಲ್ಲಿ ಅರ್ಜಿ ಸಲ್ಲಿಸುವುದು.

Step 3: ಡ್ರಾಪ್ ಡೌನ್ ಪಟ್ಟಿಯಿಂದ ಸುಜ್ಞಾನನಿಧಿ ಆಯ್ಕೆ ಮಾಡಿ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಿ ಮತ್ತು  ಮೇಲೆ ತಿಳಿಸಿದ ದಾಖಲೆಗಳನ್ನು Upload ಮಾಡುವ ಅವಶ್ಯಕತೆ ಇದ್ದು, ದಾಖಲಾತಿಗಳ ಮೂಲ ಪ್ರತಿಯನ್ನು (Original Copy) Scan ಮಾಡಿ ವಿವರಗಳನ್ನು ಸರಿಯಾಗಿ ಗಮನಿಸಿದ ನಂತರ ಅದನ್ನು PDF ಗೆ ಬದಲಾಯಿಸಿಕೊಂಡು Upload ಮಾಡುವುದು.

Step 4: Upload ಮಾಡಿದ ಎಲ್ಲಾ ದಾಖಲಾತಿಗಳು ಸ್ಪಷ್ಟವಾಗಿ ಕಾಣುವಂತಿರಬೇಕು. ಅರ್ಜಿ ಭರ್ತಿಗೊಳಿಸಿದ ನಂತರ ಮತ್ತೊಮ್ಮೆ ಎಲ್ಲಾ ದಾಖಲಾತಿಗಳು ಸರಿಯಾಗಿದೆಯೇ? ಎಂದು ಖಾತ್ರಿ ಪಡಿಸಿಕೊಂಡು Submit ಕೊಡುವುದು, ಯಾವುದೇ ತಪಾವುಗಳು ಬಾರದ ರೀತಿಯಲ್ಲಿ ಅರ್ಜಿಯನ್ನು ಭರ್ತಿಗೊಳಿಸುವುದು ಒಮ್ಮೆ Online ನಲ್ಲಿ ಎಂಟ್ರಿ ಮಾಡಿ Submit ಕೊಟ್ಟ ನಂತರ ಮತ್ತೆ ಕರೆಕ್ಷನ್‌ ಮಾಡಲು ಅವಕಾಶ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. ದೂ: 9591770660-6366358320

ಈ ವಿದ್ಯಾರ್ಥಿ ವೇತನ ಹಣಕಾಸಿನ ಅಡಚಣೆಯನ್ನು ತೆಗೆದುಹಾಕುವ ಮೂಲಕ ನಿಮ್ಮ ಶೈಕ್ಷಣಿಕ ಮತ್ತು ವೃತ್ತಿ ಗುರಿಗಳನ್ನು ಸಶಕ್ತಗೊಳಿಸಲು ಇದು ಸಹಾಯ ಮಾಡುತ್ತದೆ. ವಿದ್ಯಾರ್ಥಿವೇತನವನ್ನು ಪಡೆಯುವುದು ನಿಮ್ಮ ಎಲ್ಲಾ ಹಣಕಾಸಿನ ಕಾಳಜಿಗಳನ್ನು ದೂರ ಮಾಡುತ್ತದೆ. ಆದ್ದರಿಂದ ಇಂತಹ ಒಳ್ಳೆಯ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ವೃಂದದವರೆಗೆ, ನಿಮ್ಮ ಸ್ನೇಹಿತರಿಗೆ ಹಾಗೂ ಸಂಬಂಧಿಕರಿಗೆ ಶೇರ್ ಮಾಡಿ, ಧನ್ಯವಾದಗಳು

Untitled 1 scaled

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!