ಕರ್ನಾಟಕ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ತಿಂಗಳು ₹2,000 ಪಡೆಯುತ್ತಿರುವ ಪ್ರಯೋಜನಾರ್ಹರಿಗೆ, 20ನೇ ಕಂತಿನ ಪಾವತಿ ಸ್ಥಿತಿಯನ್ನು ನಿಗಾವಹಿಸುವುದು ಅತ್ಯಗತ್ಯ. ಕರ್ನಾಟಕದ ಹಲವಾರು ಮಹಿಳೆಯರು ತಮ್ಮ ಬ್ಯಾಂಕ್ ಖಾತೆಗೆ ಹಣ ಜಮೆಯಾಗಿದೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಈ ಮಾರ್ಗದರ್ಶಿಯಲ್ಲಿ, ನಿಮ್ಮ ಗೃಹಲಕ್ಷ್ಮಿ ಪಾವತಿ ಸ್ಥಿತಿ ಹೇಗೆ ಪರಿಶೀಲಿಸಬೇಕು, ವಿಳಂಬವಾದರೆ ಏನು ಮಾಡಬೇಕು ಮತ್ತು ಮುಂದಿನ ಪಾವತಿ ದಿನಾಂಕಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಇತ್ತೀಚಿನ ನವೀಕರಣ: 20ನೇ ಕಂತು ಇಂದು ಜೂನ್ 7, 2025ರಂದು ಬಿಡುಗಡೆ
20ನೇ ಕಂತಿನ ಹಣ ಜಮಾ
ಇತ್ತೀಚೆಗೆ, ಗೃಹಲಕ್ಷ್ಮೀ ಯೋಜನೆಯ 20ನೇ ಕಂತಿನ 2000 ರೂಪಾಯಿ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಕೆಲವು ತಾಂತ್ರಿಕ ತೊಂದರೆಗಳಿಂದಾಗಿ ಹಣ ಪಾವತಿಯಲ್ಲಿ ಸ್ವಲ್ಪ ವಿಳಂಬವಾಗಿತ್ತು. ಆದರೆ ಈಗ ಸರ್ಕಾರವು ಎಲ್ಲಾ ಯೋಗ್ಯ ಯಜಮಾನಿ ಮಹಿಳೆಯರ ಖಾತೆಗೆ ಹಣವನ್ನು ವರ್ಗಾವಣೆ ಮಾಡಿದೆ.
ಗೃಹಲಕ್ಷ್ಮಿ ಯೋಜನೆಯ20 ನೇ ಕಂತು ₹2,000 ಮೊತ್ತವನ್ನು ಜೂನ್ 7, 2025ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಬಿಡುಗಡೆ ಮಾಡಿದೆ. ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ (DBT) ಮೂಲಕ ಈ ಹಣವನ್ನು ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ.ಬಿಡುಗಡೆ ದಿನಾಂಕ ನಿಗದಿಯಾದರೂ, DBT ಪ್ರಕ್ರಿಯೆಯ ಕಾರಣದಿಂದಾಗಿ ಬ್ಯಾಂಕ್ ಖಾತೆಗೆ ಹಣ ಬರಲು ಕೆಲವು ದಿನಗಳು ತಡವಾಗಬಹುದು ಎಂದು ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾದ್ಯಮ ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ. ಹಾಗೆಯೇ ಹಣ ತಡವಾಗಿ ಖಾತೆಗೆ ಬರಬಹುದು ತಾಳ್ಮೆಯಿಂದ ಕಾಯಿರಿ ಎಂದು ಹೇಳಿದ್ದಾರೆ
✅ ಪಾವತಿ ಸ್ವೀಕರಿಸಲು: ಬಿಡುಗಡೆಯ ನಂತರ 7 ರಿಂದ 15 ದಿನಗಳು ಬ್ಯಾಂಕ್ ಖಾತೆಗೆ ಹಣ ಬರಲು ತಾಳ್ಮೆಯಿಂದಿರಿ.
ಗೃಹಲಕ್ಷ್ಮಿ ಕಂತು ಬಿಡುಗಡೆ ದಿನಾಂಕಗಳು (ನವೀಕೃತ)
| ಕಂತು | ತಿಂಗಳು | ಸ್ಥಿತಿ | ಬಿಡುಗಡೆ ದಿನಾಂಕ |
|---|---|---|---|
| 21ನೇ | ಏಪ್ರಿಲ್ 2025 | ಬಾಕಿ | ನವೀಕರಿಸಲಾಗುವುದು |
| 20ನೇ | ಮಾರ್ಚ್ 2025 | ಬಿಡುಗಡೆಯಾಗಿದೆ | 07 ಜೂನ್ 2025 |
| 19ನೇ | ಫೆಬ್ರವರಿ 2025 | ಬಿಡುಗಡೆಯಾಗಿದೆ | 17 ಮೇ 2025 |
| 18ನೇ | ಜನವರಿ 2025 | ಪೂರ್ಣಗೊಂಡಿದೆ | 30 ಮಾರ್ಚ್ 2025 |
| 17ನೇ | ಡಿಸೆಂಬರ್ 2024 | ಪೂರ್ಣಗೊಂಡಿದೆ | 11 ಮಾರ್ಚ್ 2025 |
ಗಮನಿಸಿ: ಬಿಡುಗಡೆ ದಿನಾಂಕ ನಿಗದಿಯಾದರೂ, DBT ಪ್ರಕ್ರಿಯೆಯ ಕಾರಣದಿಂದಾಗಿ ಬ್ಯಾಂಕ್ ಖಾತೆಗೆ ಹಣ ಬರಲು ಕೆಲವು ದಿನಗಳು ತಡವಾಗಬಹುದು.-ಲಕ್ಷ್ಮೀ ಹೆಬ್ಬಾಳ್ಕರ್
ಇಂದು, ಯೋಜನೆಯ 20ನೇ ಕಂತುಗಳ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ರಾಜ್ಯದ ಹಲವಾರು ಜಿಲ್ಲೆಗಳ ಮಹಿಳೆಯರಿಗೆ 19ನೇ ಕಂತಿನ ₹2,000 ರೂಪಾಯಿ ಈಗಾಗಲೇ ಜಮೆಯಾಗಿದ್ದು, 20ನೇ ಕಂತಿನ ಹಣಕ್ಕಾಗಿ ಅನೇಕರು ಕಾಯುತ್ತಿದ್ದಾರೆ.
ಕೆಳಗಿನ DBT ಸ್ಟೇಟಸ್ ನೀವು ಗಮನಿಸಬಹುದು. ನೀವು ಕೂಡ ನಿಮ್ಮ ಖಾತೆಯ ಜಮಾ ಸ್ಟೇಟಸ್ ಮಾಡಿಕೊಳ್ಳಿ. ಅಥವಾ ನಿಮ್ಮ ಬ್ಯಾಂಕ್ ಖಾತೆಯ ಅಕೌಂಟ್ ಚೆಕ್ ಮಾಡಿಕೊಳ್ಳಿ.
ಈ ರೀತಿಯ ಎಲ್ಲಾ ನವೀನ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ಗೆ ಈಗಲೇ ಸೇರಿಕೊಳ್ಳಿ. ಸೇರಲು ಇಲ್ಲಿ ಕ್ಲಿಕ್ ಮ
ಹಣ ಬರದೆ ಇರುವ ಜಿಲ್ಲೆಯ ಮಹಿಳೆಯರ ಖಾತೆಗೆ ಇನ್ನೇನು ಈ ತಿಂಗಳ ಕೊನೆಯ ವಾರದೊಳಗೆ ಹಣ ಬಿಡುಗಡೆಯಾಗುವ ಸಾಧ್ಯತೆಯಿದ್ದು, ಹಂತ ಹಂತವಾಗಿ ಎಲ್ಲಾ ಜಿಲ್ಲೆಯ ಮಹಿಳೆಯರ ಖಾತೆಗಳಿಗೆ ಜಮಾ ಆಗುತ್ತದೆ
ಗೃಹಲಕ್ಷ್ಮಿ & ಅನ್ನಭಾಗ್ಯ DBT ನೇರ ನಗದು ವರ್ಗಾವಣೆ ಸ್ಟೇಟಸ್ ಹೀಗೆ ಚೆಕ್ ಮಾಡಿ:
DBT-ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್ ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ಮಾಡಬಹುದು
ಹಂತ 1: ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಉಚಿತವಾಗಿ ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka

ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ಹಂತ 3: ಈಗ ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Get OTP ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿ ಹಾಕಿದ ನಂತರ verify OTP ಮೇಲೆ ಕ್ಲಿಕ್ ಮಾಡಿ ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ಕಾಣಿಸುತ್ತದೆ

ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಅನ್ನಭಾಗ್ಯದ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಮತ್ತು ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು

ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಇದುವರೆಗೂ ಬಂದಿರುವ ಯಾವುದೇ ನೇರ ನಗದು ವರ್ಗಾವಣೆಯ ಸ್ಥಿತಿ ಕಾಣಿಸಿಕೊಳ್ಳುತ್ತದೆ

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
ಈ ಮಾಹಿತಿಯು ಗೃಹಲಕ್ಷ್ಮಿ ಯೋಜನೆದ ಪ್ರಯೋಜನಾರ್ಹರಿಗೆ ಸಹಾಯಕವಾಗಿದೆ. ಹೆಚ್ಚಿನ ಪ್ರಶ್ನೆಗಳಿದ್ದರೆ, ಕಾಮೆಂಟ್ಗಳಲ್ಲಿ ತಿಳಿಸಿ!
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Shivaraj is the Lead Editor at NeedsOfPublic.in with over 4 years of experience tracking Indian government schemes and educational updates. He specializes in simplifying complex notifications from the Central and State governments to help the public understand their benefits. Before joining NeedsOfPublic, Shivaraj worked as a Content Writer focusing on Civic issues. When he isn’t decoding the latest circulars, he enjoys reading about digital literacy.”
Follow Shivaraj on:


WhatsApp Group




