Vande bharat – ಮೈಸೂರಿಗೆ ಮತ್ತೊಂದು ವಂದೇ ಭಾರತ್ ರೈಲು, ಇಲ್ಲಿದೆ ಮಾಹಿತಿ

vande bharat express mysore junction

ಇದೀಗ ರೈಲು ಸಾರಿಗೆ ವ್ಯವಸ್ಥೆ ಎಲ್ಲ ಕಡೆಗಳಲ್ಲೂ ಇದೆ. ಹಾಗೆಯೇ ಇತ್ತೀಚೆಗೆ ಶುರುವಾದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ( Vande Bharath Express Train ) ಹಲವಾರು ಕಡೆಗಳಲ್ಲಿ ಸಂಚಾರ ನಡೆಯುಸುತ್ತಿದೆ. ಇದು ಎಲ್ಲ ರೈಲು ಸಂಚಾರಿಗಳಿಗೆ ಒಂದು ಊರಿನಿಂದ ಮತ್ತೊಂದು ಊರಿಗೆ ಉದ್ಯೋಗಕ್ಕೆ ಹೊರಡುವ ಮತ್ತು ವಿದ್ಯಾರ್ಥಿಗಳಿಗೆ ಉಪಯೋಗವಾಗಿದೆ. ಹಾಗೆಯೇ ಈ ರೈಲಿನ ಸಂಚಾರ ಇತ್ತೀಚೆಗೆ ಯಾವ ಸ್ಥಳಗಳಲ್ಲಿ ಶುರುವಾಗಿದೆ ಎಂದು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ವಂದೇ ಭಾರತ್ ರೈಲು: ಮೈಸೂರು ಜನತೆಗೆ ಸಿಹಿ ಸುದ್ದಿ

ಭಾರತೀಯ ರೈಲ್ವೆ ಜಂಕ್ಷನ್ ( Railway Junction ) ಮೈಸೂರಿನಲ್ಲಿಯೂ ಇದೆ. ಅದಕ್ಕಾಗಿ ಈ ನಿಲ್ದಾಣದಲ್ಲಿ ವಂದೇ ಭಾರತ್ ರೈಲಿನ ನಿರ್ವಹಣೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಹಾಗೆಯೇ ನೈಋತ್ಯ ರೈಲ್ವೆಯ ಕಛೇರಿಯೂ ಮೈಸೂರಿನಲ್ಲಿ ಇದೆ. ಹಾಗಾಗಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ನಿರ್ವಹಣೆಗೆ ಬೇಕಾದ ಮುಖ್ಯ ಸೌಲಭ್ಯ ಒದಗಿಸುವ ಕಾರ್ಯ ಆರಂಭವಾಗಿದೆ.

ಹೌದು ಇದೀಗ ಮೈಸೂರು ನಗರದಲ್ಲಿಯೂ ಕೂಡ ವಂದೇ ಭಾರತ್ ಎಕ್ಸ್‌ಪ್ರೆಸ್‌ ಸಂಪರ್ಕ ಶುರುವಾಗಿದೆ. ಈ ರೈಲು ಬೆಂಗಳೂರು ಮೂಲಕ ಸಂಚಾರ ನಡೆಸುತ್ತದೆ. ಈ ಒಂದು ವಿಚಾರ ಮೈಸೂರು ನಗರದ ಸಂಚಾರಿಗಳಿಗೆ ಖುಷಿ ತಂದು ಕೊಟ್ಟಿದೆ.

ಹಾಗೆಯೇ ಭಾರತೀಯ ರೈಲ್ವೆಯಿಂದ ಬಂದ ಮಾಹಿತಿಯ ಪ್ರಕಾರ ಮೈಸೂರು ಜಂಕ್ಷನ್ ರೈಲು ನಿಲ್ದಾಣದ ಪಿಟ್‌ಲೈನ್ ನಂಬರ್ 4 ರಲ್ಲಿ ವಂದೇ ಭಾರತ್ ರೈಲಿನ ನಿರ್ವಹಣೆ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ಒಂದು ರೈಲಿನ ವ್ಯವಸ್ಥೆಗೆ ವಿದ್ಯುತ್ ಸಂಪರ್ಕ ( Electrical connections ) ಸೇರಿದಂತೆ ಇನ್ನು ಹಲವು ವ್ಯವಸ್ಥೆಗಳನ್ನು ಮಾಡಲು ನಿರ್ಧರಿಸಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ವಂದೇ ಭಾರತ್ ರೈಲಿನ ನಿರ್ವಹಣೆಗೆ ಬೇಕಾದ ಮುಖ್ಯ ಸೌಲಭ್ಯ :

ಯಾವುದೇ ರೈಲು ಆಗಲಿ ಅದರ ನಿರ್ವಹಣೆ ಮಾಡಲು ಬಹಳ ಕಷ್ಟ. ಹೌದು, ಇದೀಗ ವಂದೇ ಭಾರತ್ ರೈಲಿಗೆ ನಿರ್ವಹಣೆ ಕಾರ್ಯ ನಡೆಯುತ್ತಿದೆ. ಹಾಗಾಗಿ ಈ ಒಂದು ನಿರ್ವಹಣೆಗೆ ಅಗತ್ಯವಾಗಿ ಬೇಕಾಗಿರುವುದು Overhead Equipment ಸೌಲಭ್ಯ.
ಹಾಗಾಗಿ ಈ ಎಲ್ಲ ಕೆಲಸಗಳ ಬಗ್ಗೆ ಮಾಹಿತಿ ತಿಳಿಯಲು ರೈಲ್ವೆ ಟೆಂಡರ್ ಕರೆದಿದೆ ಎಂದು ತಿಳಿದು ಬಂದಿದೆ. ಅದಕ್ಕಾಗಿ 37 ಲಕ್ಷ ರೂ. ಒದಾಗಿಸಲಾಗಿದೆ. ವಂದೇ ಭಾರತ್ ರೈಲು ವಿದ್ಯುತ್ ಮೂಲಕ ಓಡಲಿದೆ. ಒಮ್ಮೆ ರೈಲು ಸಂಚಾರ ನಡೆಸಿದ ಬಳಿಕ ಸಾಮಾನ್ಯವಾಗಿ ಅದರ ಎಲೆಕ್ಟ್ರಿಕ್ ವ್ಯವಸ್ಥೆ ಪರಿಶೀಲಿಸಬೇಕಿದೆ. ಅದಕ್ಕೆ ಈ ಸೌಲಭ್ಯ ಅತ್ಯಗತ್ಯವಾಗಿದೆ. ಮತ್ತು ಈ ಎಲ್ಲ ಕೆಲಸ ಕಾರ್ಯಗಳು ಆದಷ್ಟು ಬೇಗ ನಡೆಯುತ್ತದೆ ಎಂದು ತಿಳಿದು ಬಂದಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಇನ್ನು ನೋಡುವುದಾದರೆ ಮಂಗಳೂರು ರೈಲು ನಿಲ್ದಾಣದಲ್ಲಿ ಸುಮಾರು 60 ಲಕ್ಷ ವೆಚ್ಚದ ಹೊಸ ಪಿಟ್‌ಲೈನ್ ನಿರ್ಮಾಣ ಮಾಡಲಾಗಿದೆ. ಹೊಸ ಪಿಟ್‌ಲೈನ್‌ಗೆ Over Head equipment ಲೈನ್ ಅಳವಡಿಕೆ ಮಾಡಲಾಗಿದೆ. ಆದರೆ ಮಂಗಳೂರಿಗೆ ವಂದೇ ಭಾರತ್ ರೈಲಿನ ಸಂಪರ್ಕವಿಲ್ಲ. ಬೆಂಗಳೂರು, ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲುಗಳ ನಿರ್ವಹಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಮೈಸೂರು-ಮಂಗಳೂರು ( Mysore – Mangalore ) ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸಬೇಕು ಎಂದು ಬೇಡಿಕೆ ನೀಡಲಾಗಿದೆ. ಯಾಕೆಂದರೆ ಈ ಎರಡು ನಗರಗಳು ಹೆಚ್ಚು ಉದ್ಯೋಗ ವನ್ನು ಹೊಂದಿದೆ. ಜನರು ಹೆಚ್ಚು ಸಂಚಾರ ಮಾಡುತ್ತಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ಮೈಸೂರು ನಗರಕ್ಕೆ ಹೆಚ್ಚಿನ ವಂದೇ ಭಾರತ್ ರೈಲುಗಳ ಸಂಚಾರ ಆರಂಭವಾಗುವ ನಿರೀಕ್ಷೆ ಇದೆ ಎಂದು ತಿಳಿದು ಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!