ಎಲ್ಲರಿಗೂ ನಮಸ್ಕಾರ ಇವತ್ತಿನ ವರದಿಯಲ್ಲಿ ,ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ವಸತಿ ನಿಗಮಗಳ 2.32 ಲಕ್ಷ ಮನೆಗಳನ್ನು ಉಚಿತವಾಗಿ ನೀಡಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.ಇದು ಸರ್ಕಾರದ 6ನೇ ಗ್ಯಾರಂಟಿ ಎಂದು ವಸತಿ ಸಚಿವರು ಜಮೀರ್ ಅಹ್ಮದ್ ಖಾನ್ ಅವರು ಮಾಹಿತಿ ತಿಳಿಸಿದ್ದಾರೆ. ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ಸಂಪೂರ್ಣವಾಗಿ ಓದಿ ತಿಳಿಯಿರಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಕೊಳೆಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಬಡವರಿಗೆ ಸೂರು ಕಲ್ಪಿಸಲು ರೂಪಿಸಿದ್ದ ಯೋಜನೆ ಫಲಾನುಭವಿಗಳ ಹಣ ಪಾವತಿ ಆಗದೆ ನೆನೆ ಗುದಿಗೆ ಬಿದ್ದಿವೆ ಇದೀಗ ಸರ್ಕಾರವೇ ಅದರ ಸಂಪೂರ್ಣ ವೆಚ್ಚ ನೋಡಿಕೊಳ್ಳುತ್ತದೆ. ಮತ್ತು ಸುಮಾರು ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ 2.32 ಲಕ್ಷ ಮನೆಗಳನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿದ್ದಾರೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಶುಕ್ರವಾರ ವರದಿಗಾರರ ಮುಂದೆ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ಗ್ಯಾರಂಟಿ ಜತೆಗೆ ಆರನೇ ಗ್ಯಾರಂಟಿ ಆಗಿ ಅಪೂರ್ಣ ಆಗಿರುವ 2.32 ಲಕ್ಷ ಮನೆ ಮುಂದಿನ ವರ್ಷದ ಅಂತ್ಯದೊಳಗೆ ಪೂರ್ಣ ಗೊಳಿಸಲು ಗುರಿ ಹಾಕಿಕೊಳ್ಳಲಾಗಿದೆ ಅದರ ಜೊತೆಗೆ 2.42 ಲಕ್ಷ ಮನೆ ಉಚಿತ ವಾಗಿ ನೀಡುವ ಭರವಸೆ ನೀಡಿದ್ದು ಅದಕ್ಕೆ ತಗಲುವ 8 ಸಾವಿರ ಕೋಟಿ ರೂ ಅನ್ನು ಹಂತ ಹಂತವಾಗಿ ನೀಡುವ ಭರವಸೆ ನೀಡಿದ್ದು ಮುಂದಿನ ವಾರ ಈ ಕುರಿತು ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿಯಲ್ಲಿ ನಡೆದ ಕರ್ನಾಟಕ ಸಂಭ್ರಮ ಕಾರ್ಯಕ್ರಮದ ವೇದಿಕೆಯಲ್ಲೇ ಹೇಳಿದರು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಕೊಳೆಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಿ ಕೊಡುವ ಮನೆಗೆ ಘಟಕ ವೆಚ್ಚ 7 ಲಕ್ಷ ರೂ ವರೆಗೂ ಆಗಲಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರದ (central and state govt) ಸಬ್ಸಿಡಿ (subsidy) 3 ಲಕ್ಷ ರೂ. ವರೆಗೆ ಸಿಗಲಿದ್ದು ಉಳಿದ ನಾಲ್ಕು ಲಕ್ಷ ರೂ. ಫಲಾನುಭವಿ ಗಳು ಕಟ್ಟಬೇಕಾಗಿತ್ತು.ಆದರೆ ಇದೀಗ ಫಲಾನುಭವಿ ಕಟ್ಟಬೇಕಾಗಿರುವ ಪಾಲಿನ ಹಣವನ್ನು ಸರ್ಕಾರವೇ ನೋಡಿಕೊಳ್ಳುತ್ತದೆ ಎಂದು ಕೂಡಾ ಹೇಳಿದ್ದಾರೆ.
ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ – Gruhalakshmi – ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಜಮಾ ಆಗಲು ಅಧಿಕೃತ ದಿನಾಂಕ ನಿಗದಿ, ಇಲ್ಲಿದೆ ಸಂಪೂರ್ಣ ಮಾಹಿತಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group





