ಕರ್ನಾಟಕದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾಧನ ವಿದ್ಯಾರ್ಥಿವೇತನ ಪಡೆಯಲು (Vidyadhan Scholarship 2025) ಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಯೋಜನೆಯು ಆರ್ಥಿಕವಾಗಿ ದುರ್ಬಲ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಅವಕಾಶ ನೀಡುತ್ತದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ನೋಡೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ವಿದ್ಯಾಧನ ವಿದ್ಯಾರ್ಥಿವೇತನದ ವಿವರ
ಸರೋಜಿನಿ ದಾಮೋದರನ್ ಫೌಂಡೇಶನ್ (SDF) ನಡೆಸುವ ಈ ಯೋಜನೆಯು, 1999ರಲ್ಲಿ ಇನ್ಫೋಸಿಸ್ ಸಹ-ಸಂಸ್ಥಾಪಕರು ಶ್ರೀ ಎಸ್.ಡಿ. ಶಿಬುಲಾಲ್ ಮತ್ತು ಸುಶ್ರೀ ಶಿಬುಲಾಲ್ ಅವರಿಂದ ಪ್ರಾರಂಭವಾಯಿತು. ಇದುವರೆಗೆ ದೇಶದ 20ಕ್ಕೂ ಹೆಚ್ಚು ರಾಜ್ಯಗಳ 50,000ಕ್ಕೂ ಅಧಿಕ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನದಿಂದ ಲಾಭ ಪಡೆದಿದ್ದಾರೆ. ಕರ್ನಾಟಕದಲ್ಲಿ 2014ರಿಂದ ಈ ಯೋಜನೆ ಜಾರಿಯಲ್ಲಿದ್ದು, 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯೋಜನ ಪಡೆದಿದ್ದಾರೆ.
ವಿದ್ಯಾರ್ಥಿವೇತನದ ಪ್ರಯೋಜನಗಳು
ಪಿಯುಸಿ (1ನೇ & 2ನೇ ವರ್ಷ): ವರ್ಷಕ್ಕೆ ₹10,000
ಪದವಿ ಶಿಕ್ಷಣ: ವರ್ಷಕ್ಕೆ ₹15,000 ರಿಂದ ₹75,000 (ವಿವಿಧ ಕೋರ್ಸ್ಗಳಿಗೆ ಅನುಗುಣವಾಗಿ)
ಅರ್ಹತಾ ಮಾನದಂಡಗಳು
- 2025ರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಎಲ್ಲಾ ವಿಷಯಗಳಲ್ಲಿ 90% ಅಥವಾ A+ ಗ್ರೇಡ್ ಪಡೆದಿರಬೇಕು.
- ಅಂಗವೈಕಲ್ಯ ವಿದ್ಯಾರ್ಥಿಗಳಿಗೆ ಕನಿಷ್ಠ 75% ಅಂಕಗಳು ಬೇಕು.
- ಕುಟುಂಬದ ವಾರ್ಷಿಕ ಆದಾಯ ₹2 ಲಕ್ಷಕ್ಕಿಂತ ಕಡಿಮೆ ಇರಬೇಕು.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು
- ಎಸ್ಎಸ್ಎಲ್ಸಿ ಮಾರ್ಕ್ ಶೀಟ್ (2025)
- ಕುಟುಂಬದ ಆದಾಯ ಪ್ರಮಾಣಪತ್ರ
- ಪಾಸ್ಪೋರ್ಟ್ ಗಾತ್ರದ ಫೋಟೋ
- ಅಂಗವೈಕಲ್ಯ ಪ್ರಮಾಣಪತ್ರ (ಅಗತ್ಯವಿದ್ದಲ್ಲಿ)
- ಬ್ಯಾಂಕ್ ಖಾತೆ ವಿವರಗಳು
ಆಯ್ಕೆ ಪ್ರಕ್ರಿಯೆ
- ಆನ್ಲೈನ್ ಅರ್ಜಿ ಪರಿಶೀಲನೆ
- ಸಾಮಾನ್ಯ ಜ್ಞಾನ, ಲೆಕ್ಕಾಚಾರ ಮತ್ತು ಭಾಷಾ ಪರೀಕ್ಷೆ
- ಮನೆ ಭೇಟಿ ಮತ್ತು ದಾಖಲೆ ಪರಿಶೀಲನೆ
- ಅಂತಿಮ ಆಯ್ಕೆ
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿಗಳನ್ನು vidyadhan.org ವೆಬ್ಸೈಟ್ ಮೂಲಕ ಅಥವಾ SDF Vidya ಮೊಬೈಲ್ ಅಪ್ಲಿಕೇಶನ್ (ಗೂಗಲ್ ಪ್ಲೇ ಸ್ಟೋರ್ನಲ್ಲಿ ಲಭ್ಯ) ಬಳಸಿ ಸಲ್ಲಿಸಬಹುದು.
- ಅರ್ಜಿ ಪ್ರಾರಂಭ: 19-05-2025
- ಕೊನೆಯ ದಿನಾಂಕ: 08-07-2025
ಹೆಚ್ಚಿನ ಮಾಹಿತಿಗೆ:
- ಇಮೇಲ್: [email protected]
- ಹೆಲ್ಪ್ಲೈನ್: +91 8068333500
ಈ ವಿದ್ಯಾರ್ಥಿವೇತನ ಯೋಜನೆಯು ಪ್ರತಿಭಾವಂತ ಆದರೆ ಆರ್ಥಿಕ ಸಹಾಯದ ಅಗತ್ಯವಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಬಾಗಿಲು ತೆರೆಯುತ್ತದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಪಡೆದುಕೊಳ್ಳಬಹುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ಉದ್ಯೋಗ ಮಾಹಿತಿ ಕ್ಷೇತ್ರದಲ್ಲಿ 4 ವರ್ಷಗಳ ವೃತ್ತಿಪರ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ವಲಯದ ನೇಮಕಾತಿಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಉದ್ಯೋಗಾಕಾಂಕ್ಷಿಗಳಿಗೆ ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (verified) ಮತ್ತು ನಿಖರವಾದ ಉದ್ಯೋಗದ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದು ಸಾಗರಿ ಅವರ ಪ್ರಮುಖ ಗುರಿಯಾಗಿದೆ.”


WhatsApp Group




